ಕೂಡಿಗೆ, ಮೇ ೬: ಇಲ್ಲಿಗೆ ಸಮೀಪದ ಶಿರಂಗಾಲ ಗ್ರಾಮದ ಬಸವ ಸೇವಾ ಸಮಿತಿಯ ವತಿಯಿಂದ. ತಾ. ೭ರಂದು (ಇಂದು) ಗ್ರಾಮಾಂತರ ಬಸವ ಜಯಂತಿ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಮಧ್ಯಾಹ್ನ ೩ ಗಂಟೆಗೆ ಗ್ರಾಮದಲ್ಲಿ ಬೆಳ್ಳಿ ರಥದಲ್ಲಿ ಶ್ರೀ ಬಸವೇಶ್ವರ ಭಾವಚಿತ್ರವನ್ನಿಟ್ಟು ಶೋಭಾಯಾತ್ರೆ ನಡೆಸಲಾಗುವುದು. ಮೆರವಣಿಗೆಯಲ್ಲಿ ಮಹಿಳೆಯರು ಕಳಶ ಹೊತ್ತು ಸಾಗಲಿದ್ದಾರೆ. ಸಂಜೆ ೬.೩೦ ಗಂಟೆಗೆ ಗ್ರಾಮದ ಮಾರುಕಟ್ಟೆ ಆವರಣದಲ್ಲಿ ಬಸವ ಜಯಂತಿಯ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದು ಬಸವ ಸಮಿತಿಯ ಅಧ್ಯಕ್ಷ ಎಸ್.ಜೆ.ಉಮೇಶ್ ತಿಳಿಸಿದ್ದಾರೆ. ತೊರೆನೂರು ವಿರಕ್ತ ಮಠದ ಮಲ್ಲೇಶಸ್ವಾಮಿ, ಕಿರಿಕೊಡ್ಲಿ ಮಠದ ಸದಾಶಿವ ಸ್ವಾಮೀಜಿ ಅವರ ಸಮ್ಮುಖದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಶಾಸಕ ಡಾ ಮಂತರ್ ಗೌಡ ಉದ್ಘಾಟಿಸಲಿದ್ದಾರೆ.
ಕೊಡಗು ವಿ.ವಿ. ಕನ್ನಡ ಉಪನ್ಯಾಸಕ ಜಮೀರ್ ಅಹ್ಮದ್ ಮುಖ್ಯ ಭಾಷಣ ಮಾಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ಕೆ.ಪಿ.ಸಿ.ಸಿ. ಸದಸ್ಯ ಹೆಚ್.ಕೆ. ನಟೇಶ್ ಗೌಡ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್.ವಿ. ನಂಜುAಡಪ್ಪ ಭಾಗವಹಿಸಲಿದ್ದಾರೆ ಎಂದು ಸಮಿತಿಯ ಕಾರ್ಯದರ್ಶಿ ಎನ್.ಎಸ್. ಜಯಣ್ಣ ತಿಳಿಸಿದ್ದಾರೆ. ಗ್ರಾಮೀಣ ಕ್ರೀಡಾ ಪ್ರತಿಭೆ ತೊರೆನೂರು ಗ್ರಾಮದ ಅಥ್ಲೆಟಿಕ್ ಕ್ರೀಡಾಪಟು ಟಿ.ಎಚ್. ಗಣೇಶ್ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಗುವುದು ಎಂದು ತಿಳಿಸಿದ್ದಾರೆ.