ನಾಪೋಕ್ಲು, ಮೇ ೬: ಶಿಬಿರಾರ್ಥಿಗಳು ಹಾಕಿ ಕ್ರೀಡೆಯಲ್ಲಿ ಪರಿಣತಿಯನ್ನು ಹೊಂದಿ ಉತ್ತಮ ಕ್ರೀಡಾಪಟುಗಳಾಗಬೇಕು ಎಂದು ಮುಖ್ಯ ಅತಿಥಿ ಕೊಡವ ಸಮಾಜದ ಅಧ್ಯಕ್ಷ ಮುಂಡAಡ ಸಿ. ನಾಣಯ್ಯ ಹೇಳಿದರು

ಇಲ್ಲಿನ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕ್ರೀಡಾ ಅಕಾಡೆಮಿ ವತಿಯಿಂದ ಕೆಪಿಎಸ್ ಶಾಲೆಯ ಆಟದ ಮೈದಾನದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಶಿಬಿರಾರ್ಥಿಗಳಿಂದ ಧ್ವಜ ವಂದನೆ ಸ್ವೀಕರಿಸಿ ಬಳಿಕ ನಡೆದ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ದೇಶದಲ್ಲಿ ಹಾಕಿ ಕ್ರೀಡೆ ಪ್ರಸಿದ್ಧಿ ಹೊಂದಿದೆ.ಜಿಲ್ಲೆಯಲ್ಲೂ ಇರುವ ಉತ್ತಮ ಹಾಕಿಪಟುಗಳಿಂದಾಗಿ ಕೌಟುಂಬಿಕ ಹಾಕಿ ಉತ್ಸವ ಗಿನ್ನೆಸ್ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ಸ್ಥಾನ ಪಡೆಯುವಂತಾಗಿದೆ.ಹಾಕಿ ಕ್ರೀಡೆಗೆ ಉತ್ತಮ ಅವಕಾಶಗಳು ಇರುವುದರಿಂದ ಶಿಬಿರಾರ್ಥಿಗಳು ಅದರ ಪ್ರಯೋಜನವನ್ನು ಪಡೆದುಕೊಳ್ಳಬೇಕು. ರಜಾ ಅವಧಿಯಲ್ಲಿ ಉತ್ತಮ ತರಬೇತಿ ನೀಡುವಂತಹ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕ್ರೀಡಾ ಅಕಾಡೆಮಿ ಜಿಲ್ಲೆಯಲ್ಲಿ ಮಕ್ಕಳಿಗೆ ಉತ್ತಮ ತರಬೇತಿ ನೀಡುವುದರ ಮೂಲಕ ಪ್ರಸಿದ್ಧಿಯನ್ನು ಹೊಂದಲಿ ಎಂದರು.

ಉತ್ತಮವಾಗಿ ತರಬೇತಿ ಆಯೋಜಿಸುತ್ತಿರುವ ಅಕಾಡೆಮಿಯ ಮುಂದಿನ ವರ್ಷದ ತರಬೇತಿ ಶಿಬಿರಕ್ಕೆ ರೂ.೫೦,೦೦೦ ಗಳ ಕೊಡುಗೆ ನೀಡುವುದಾಗಿ ಹೇಳಿದರು. ಕಾರ್ಯಕ್ರಮವನ್ನು ಉದ್ಘಾಟಿಸಿದ ದಾನಿಗಳಾದ ಪಾಂಡAಡ ಲೀಲಾ ಕುಟ್ಟಪ್ಪ ಮಾತನಾಡಿ, ವಿದ್ಯಾರ್ಥಿಗಳು ತಂದೆ-ತಾಯಿಯAದಿರಿಗೆ ಗೌರವವನ್ನು ನೀಡಬೇಕು.ಉತ್ತಮ ಶಿಕ್ಷಣವನ್ನು ಪಡೆಯಬೇಕು ಕೇವಲ ಕ್ರೀಡೆಗೆ ಮಹತ್ವ ನೀಡದೆ ಶಿಕ್ಷಣಕ್ಕೂ ಮಹತ್ವ ನೀಡಿ ಸಮಾಜದಲ್ಲಿ ಉನ್ನತ ಸ್ಥಾನಕ್ಕೆ ಇರುವಂತಾಗಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಕಾಡೆಮಿಯ ಅಧ್ಯಕ್ಷ ಕಾಂಡAಡ ಜೋಯಪ್ಪ ಅವರು ಮಾತನಾಡಿ, ಮಾದಕ ದ್ರವ್ಯ ಸೇವನೆಯಿಂದ ದೂರವಿರಬೇಕು ಅಪ್ರಾಪ್ತ ವಯಸ್ಕರ ವಾಹನ ಚಾಲನೆ ಮಾಡಬಾರದು ಎಂದ ಅವರು ಮೊಬೈಲ್ ಫೋನ್ ಅಗತ್ಯಕ್ಕೆ ಮಾತ್ರ ಬಳಕೆ ಮಾಡಿ ಎಂದು ಕಿವಿಮಾತು ಹೇಳಿ ಅಕಾಡೆಮಿ ಸ್ಥಾಪಕ ಅಧ್ಯಕ್ಷ ದಿ. ಕಲಿಯಂಡ ಸಾಬು ಅಯ್ಯಣ್ಣ ಸ್ಮರಿಸಿದರು. ಉಪಾಧ್ಯಕ್ಷ ನಿವೃತ ಸೇನಾನಿ ಕೊಂಡಿರ ನಾಣಯ್ಯ, ಕುಲ್ಲೇಟಿರ ಅರುಣ್ ಬೇಬಾ, ಬಿದ್ದಾಟಂಡ ಸುಮನ್ ಮಾತನಾಡಿ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.

೨೫ ವರ್ಷಗಳಿಂದ ನಿರಂತರವಾಗಿ ಬೇಸಿಗೆ ಶಿಬಿರ ಆಯೋಜಿಸುತ್ತಿರುವುದರಿಂದ ನಾಲ್ಕುನಾಡು ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ಸಾಕಷ್ಟು ಪ್ರಯೋಜನಕಾರಿಯಾಗಿದೆ ಎಂದು ಪೋಷಕರಾದ ನೆರವಂಡ ಅನಿಲ್ ಮತ್ತು ಕೆಲೇಟಿರ ಡಾಕ್ಟರ್ ಬೋಪಣ್ಣ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಶಿಬಿರಾರ್ಥಿ ದುಂದುಭಿ ವರದಿ ವಾಚಿಸಿ,ಮಾತನಾಡಿ ಶಿಬಿರ ಮಕ್ಕಳ ಬೆಳವಣಿಗೆಗೆ ಸಹಕಾರಿಯಾಗಿದೆ ಎಂದರು.

ಸಮಾರAಭಕ್ಕೂ ಮುನ್ನ ಶಿಬಿರಾರ್ಥಿಗಳು ಪಥಸಂಚಲನ ನಡೆಸಿ ಅತಿಥಿಗಳಿಗೆ ಗೌರವರಕ್ಷೆ ಸಲ್ಲಿಸಿ ಅಕಾಡೆಮಿ ಸ್ಥಾಪಕ ಅಧ್ಯಕ್ಷ ದಿ. ಕಲಿಯಂಡ ಸಾಬು ಅಯ್ಯಣ್ಣ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಒಂದು ನಿಮಿಷಗಳ ಕಾಲ ಮೌನಾಚರಣೆ ಮಾಡಿ ಗೌರವ ಸಲ್ಲಿಸಲಾಯಿತು.

ಈ ಸಂದರ್ಭ ವೇದಿಕೆಯಲ್ಲಿದ್ದ ಗಣ್ಯರು ಶಿರಾರ್ಥಿಗಳಿಗೆ ನೆನಪಿನ ಕಾಣಿಕೆ ಹಾಗೂ ಅರ್ಹತಾ ಪತ್ರವನ್ನು ವಿತರಿಸಿ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ವನಜಾಕ್ಷಿ ರೇಣುಕೇಶ್, ಲಯನ್ಸ್ ಕ್ಲಬ್ ಅಧ್ಯಕ್ಷ ಬಿದ್ದಾಟಂಡ ಮೇರಿ ಚಿಟ್ಟಿಯಪ್ಪ, ಮಹಿಳಾ ಸಮಾಜದ ಅಧ್ಯಕ್ಷ ಕುಂಚೇಟ್ಟಿರ ರೇಷ್ಮಾ ಉತ್ತಪ್ಪ, ಸುಧಿ ಉತ್ತಪ್ಪ, ಕೆಪಿಎಸ್ ಶಾಲೆಯ ಪ್ರಾಂಶುಪಾಲೆ ಮೇದುರ ವಿಶಾಲ್, ಕನ್ನಂಬಿರ ಸುಧಿ ತಿಮ್ಮಯ್ಯ, ಶಿವಚಾಳಿಯಂಡ ಅಂಬಿ ಕಾರ್ಯಪ್ಪ, ಮುಂಡAಡ ಕವಿತಾ ಅಯ್ಯಣ್ಣ, ಕಲಿಯಂಡ ಆಶಿಕ್, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕ್ರೀಡಾ ಅಕಾಡೆಮಿಯ ಖಜಾಂಚಿ, ತರಬೇತುದಾರ ಮಾಜಿ ಸೈನಿಕ ಕೇಟೋಳಿರ ಡಾಲಿ ಅಚ್ಚಪ್ಪ, ಕಾರ್ಯದರ್ಶಿ ಮಾಚೆಟ್ಟಿರ ಕುಶು ಕುಶಾಲಪ್ಪ, ನಿರ್ದೆಶಕರಾದ ಮುಕ್ಕಾಟಿರ ವಿನಯ್, ದುಗ್ಗಳ ಸದಾನಂದ ತರಬೇತುದಾರರಾದ ಅರೆಯಡ ಗಣೇಶ್, ಕುಂಡ್ಯೋಳAಡ ಕವಿತಾ ಮುತ್ತಣ್ಣ, ಬಿದ್ದಾಟಂಡ ಮಮತ ಚಿಣ್ಣಪ್ಪ, ಕುಂಡ್ಯೋಳAಡ ಕವಿತಾ ಮುತ್ತಣ್ಣ ಹಾಗೂ ಪೋಷಕರು ಪಾಲ್ಗೊಂಡಿದ್ದರು.