ಪೊನ್ನಂಪೇಟೆ: ಪೊನ್ನಂಪೇಟೆ ತಾಲೂಕಿನ ಮಾಪಿಳ್ಳೆತೋಡುವಿನಲ್ಲಿ ಆಲೀರ ಕುಟುಂಬಸ್ಥರ ಗದ್ದೆಯಲ್ಲಿ ನೂತನವಾಗಿ ನಿರ್ಮಿಸಲಾಗಿದ್ದ ಮೈದಾನದಲ್ಲಿ, ಕೊಡವ ಜಮ್ಮ ಮುಸ್ಲಿಂ ಸ್ಪೋರ್ಟ್ಸ್ ಮತ್ತು ಕಲ್ಚರ್ ಸಹಭಾಗಿತ್ವದಲ್ಲಿ ಆಯೋಜಿಸಲಾಗಿದ್ದ ೨ನೇ ವರ್ಷದ ಕೊಡವ ಮುಸ್ಲಿಂ ಕುಟುಂಬ ತಂಡಗಳ ನಡುವಿನ ‘ಆಲೀರ ಕಪ್’ ಕ್ರಿಕೆಟ್ ಪಂದ್ಯಾವಳಿಗೆ ವರ್ಣರಂಜಿತ ತೆರೆ ಎಳೆಯಲಾಯಿತು. ಎಂಟು ದಿನಗಳ ಕಾಲ ನಡೆದ ಪಂದ್ಯಾವಳಿಯಲ್ಲಿ ಕೊಡವ ಮುಸ್ಲಿಂ ಕುಟುಂಬಗಳ ೭೦ ತಂಡಗಳು ಪಾಲ್ಗೊಂಡು ಪ್ರಶಸ್ತಿಗಾಗಿ ಸೆಣೆಸಾಟ ನಡೆಸಿದವು.
ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಸುಲಭ ಜಯಗಳಿಸುವ ಮೂಲಕ ಬೆಲಿಯತ್ ಕಾರಂಡ ತಂಡ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡಿತು. ಅತಿಥೇಯ ಆಲೀರ ಎ ತಂಡ ರನ್ನರ್ಸ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು.
ಫೈನಲ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆಲೀರ ಎ ತಂಡ ನಿಗದಿತ ೬ ಓವರ್ಗಳಲ್ಲಿ ಎಲ್ಲಾ ವಿಕೆಟ್ಗಳನ್ನು ಕಳೆದುಕೊಂಡು ೨೪ ರನ್ಗಳ ಸಾಧಾರಣ ಮೊತ್ತ ಕಲೆ ಹಾಕಿತು. ೨೫ ರನ್ಗಳ ಗುರಿ ಬೆನ್ನಟ್ಟಿದ ಬೆಲಿಯತ್ ಕಾರಂಡ ತಂಡ ಕೇವಲ ೩.೫ ಓವರ್ಗಳಲ್ಲಿ ೧ ವಿಕೆಟ್ ಕಳೆದುಕೊಂಡು ಗುರಿಮುಟ್ಟುವ ಮೂಲಕ ಚಾಂಪಿಯನ್ ಆಗಿ ಹೊರಹೊಮ್ಮಿತು.
ಚಿನ್ನದ ನಾಣ್ಯ ಚಿಮ್ಮುವ ಮೂಲಕ ಫೈನಲ್ ಪಂದ್ಯದ ಟಾಸ್ ಪ್ರಕ್ರಿಯೆಯನ್ನು ನೆರವೇರಿಸಿ, ಟಾಸ್ ಗೆದ್ದ ಬೆಲಿಯತ್ ಕಾರಂಡ ತಂಡದ ನಾಯಕ ಸೈಯದ್ ಅಶ್ರಫ್ ಅವರಿಗೆ ನೀಡಲಾಯಿತು.
ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಹೊದ್ದೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಹಂಝ ಕೊಟ್ಟಮುಡಿ ಅವರು ಮಾತನಾಡಿ ಆಲೀರ ಕುಟುಂಬಸ್ಥರು ಕಳೆದ ಎಂಟು ದಿನಗಳಿಂದ ಕ್ರಿಕೆಟ್ ಪಂದ್ಯಾವಳಿಯನ್ನು ಶಿಸ್ತುಬದ್ಧವಾಗಿ ನಡೆಸಿಕೊಂಡು ಬಂದಿದ್ದಾರೆ. ಮುಂದಿನ ದಿನಗಳಲ್ಲಿ ಕೊಡಗಿನ ಎಲ್ಲಾ ಜನಾಂಗ ಬಾಂಧವರನ್ನು ಒಗ್ಗೂಡಿಸಿ ವಾಲಿಬಾಲ್ ಪಂದ್ಯಾವಳಿ ಆಯೋಜಿಸುತ್ತಿರುವುದು ಸಂತಸದ ವಿಚಾರ. ಕೊಡಗು ಜಿಲ್ಲೆ ಸೇನೆ ಮತ್ತು ಕ್ರೀಡೆಗೆ ಹೆಸರುವಾಸಿಯಾಗಿದ್ದು, ಕ್ರಿಕೆಟ್ ಪಂದ್ಯಾವಳಿಯಲ್ಲಿ ಪಾಲ್ಗೊಂಡ ಕ್ರೀಡಾಪಟುಗಳು ಮುಂದಿನ ದಿನಗಳಲ್ಲಿ ರಾಜ್ಯ, ರಾಷ್ಟç, ಅಂತರರಾಷ್ಟಿçÃಯ ಮಟ್ಟದಲ್ಲಿ ಪಾಲ್ಗೊಳ್ಳುವಂತಾಗಲಿ ಎಂದು ಆಶಿಸಿದರು. ಅಲೀರ ಕುಟುಂಬದ ಸೇವಾ ಸಂಘದ ಅಧ್ಯಕ್ಷ ಎರ್ಮು ಹಾಜಿ ಮಾತನಾಡಿ, ಶಾಸಕ ಎ.ಎಸ್. ಪೊನ್ನಣ್ಣ ನವರ ಸಹಕಾರದಿಂದ ಕ್ರೀಡಾಕೂಟ ಯಶಸ್ವಿಯಾಗಿದೆ. ಪಂದ್ಯಾವಳಿ ಯಶಸ್ಸಿಗೆ ಆಲೀರ ಕುಟುಂಬದ ಸದಸ್ಯರು ಹಗಲು ರಾತ್ರಿ ಎನ್ನದೆ ಶ್ರಮಿಸಿ ಮಳೆಯ ಅಡಚಣೆ ನಡುವೆಯೂ ಅಚ್ಚುಕಟ್ಟಾಗಿ ಕ್ರೀಡಾಕೂಟವನ್ನು ನಡೆಸಿರುವುದು ಸಂತಸ ತಂದಿದೆ ಎಂದರು.
ಪೊನ್ನAಪೇಟೆ ನಾಗರಿಕ ವೇದಿಕೆಯ ಅಧ್ಯಕ್ಷ ವಿಶ್ವನಾಥ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಬೆಂಗಳೂರಿನ ಆನೇಕಲ್ ನ್ಯಾಯಾಲಯದ ನ್ಯಾಯಾಧೀಶ ರಾದ ಆಲೀರ ಸಲ್ಮಾ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಆಲೀರ ಕುಟುಂಬದ ೩೦ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಕೊಡವ ಜಮ್ಮ ಮುಸ್ಲಿಂ ಲೋಗೋವನ್ನು ಕೊಡವ ಜಮ್ಮ ಮುಸ್ಲಿಂ ಸ್ಪೋರ್ಟ್ಸ್ ಅಯಿಂಡ್ ಕಲ್ಚರ್ ಅಧ್ಯಕ್ಷ ಕುವೆಲರ ಅನೀಸ್ ಅವರಿಗೆ ಹಸ್ತಾಂತರಿಸಲಾಯಿತು.
ಈ ಸಂದರ್ಭ ಆಲೀರ ಕುಟುಂಬ ತಕ್ಕಮುಖ್ಯಸ್ಥ ಕುಟ್ಟಿ ಆಲಿ, ಆಲೀರ ಕುಟುಂಬದ ಸೇವಾ ಸಂಘದ ಅಧ್ಯಕ್ಷ ಆಲೀರ ಪವಿಲ್ ಉಸ್ಮಾನ್, ಉಪಾಧ್ಯಕ್ಷರಾದ ಆಲೀರ ಅಹಮದ್ ಹಾಜಿ, ಆಲೀರ ಅಬ್ದುಲ್ಲ, ಮಾಪಿಳೆತೋಡು ಕಲ್ಲಾಯಿ ಜುಮ್ಮಾ ಮಸೀದಿ ಅಧ್ಯಕ್ಷ ಆಲೀರ ಪಿ. ಆಲಿ, ಕ್ರೀಡಾ ಸಮಿತಿ ಸಂಚಾಲಕ ಆಲೀರ ನಸೀರ್ ಬಾಜಿ, ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಪಿ.ಹೆಚ್. ಹನೀಫ್, ವೀರಾಜಪೇಟೆ ಬ್ಲಾಕ್ ಅಧ್ಯಕ್ಷ ಕೋಳುಮಂಡ ರಫೀಕ್, ಪೊನ್ನಂಪೇಟೆ ವಕೀಲರಾದ ಸುಳ್ಳಿಮಾಡ ಧ್ಯಾನ್ ದೇವಯ್ಯ, ಬೇಗೂರು ಈಶ್ವರ ದೇವಸ್ಥಾನದ ಅಧ್ಯಕ್ಷರಾದ ಬೊಳ್ಳಂಗಡ ದಾದು ಪೂವಯ್ಯ, ವೀರಾಜಪೇಟೆ ರಿಟೈರ್ಡ್ ಕಮರ್ಷಿಯಲ್ ಟ್ಯಾಕ್ಸ್ ಆಫೀಸರ್ ಅಲೀರ ಉಸ್ಮಾನ್, ನಿವೃತ್ತ ಅಬಕಾರಿ ಇನ್ಸ್ಪೆಕ್ಟರ್ ಆಲೀರ ಹುಸೇನ್, ಮುಂಬೈನ ಎನ್.ಸಿ.ಟಿ. ಟೂರ್ಸ್ ಅಂಡ್ ಟ್ರಾವೆಲ್ಸ್ ಮಾಲೀಕ ಅಕ್ಕಳತಂಡ ಮೊಯ್ದು, ಆಲೀರ ಸಾದಲಿ ಅಂಬಟ್ಟಿ, ಕಾಟ್ರಕೊಲ್ಲಿ ವಕ್ಫ್ ಬೋರ್ಡ್ ಸದಸ್ಯ ಆಲೀರ ಅಬ್ದುಲ್, ಜಿಲ್ಲಾ ವಕ್ಫ್ ಬೋರ್ಡ್ ಅಧ್ಯಕ್ಷ ಹಕೀಂ, ಆಲೀರ ಕ್ರಿಕೆಟ್ ಕ್ರೀಡಾಕೂಟದ ಸದಸ್ಯರು, ಇನ್ನಿತರರು ಉಪಸ್ಥಿತರಿದ್ದರು.
ವೈಯಕ್ತಿಕ ಪ್ರಶಸ್ತಿ
ಲೆಜೆಂಡ್ ಪ್ಲೇಯರ್ ಆಫ್ ದಿ ಟೂರ್ನಮೆಂಟ್ ಆಗಿ ರಶೀದ್ ಕುಪೋಡಂಡ, ಅಪ್ ಕಮಿಂಗ್ ಪ್ಲೇಯರ್ ಆಗಿ ಅಶು ಕನ್ನಡಿಯಂಡ, ಬೆಸ್ಟ್ ವಿಕೆಟ್ ಕೀಪರ್ ಆಗಿ ರಿಯಾಜ್ ಬೆಲಿಯಾತ್ ಕಾರಂಡ, ಬೆಸ್ಟ್ ಬೌಲರ್ ಆಗಿ ರವುಫ್, ಬೆಸ್ಟ್ ಫೀಲ್ಡರ್ ಆಗಿ ಸಂಶು ವೈಕೊಳಂಡ, ಬೆಸ್ಟ್ ಬ್ಯಾಟ್ಸ್ ಮನ್ ಆಗಿ ಅಫ್ರೋಜ್ ಕಿಕ್ಕರೆ ಅಂಬಟ್ಟಿ, ಮ್ಯಾನ್ ಆಫ್ ದಿ ಮ್ಯಾಚ್ ಆಫ್ ದಿ ಮ್ಯಾಚ್ ಆಗಿ ರಶೀದ್ ಬೆಲಿಯತ್ ಕಾರಂಡ ಪ್ರಶಸ್ತಿ ಪಡೆದುಕೊಂಡರು. ಮ್ಯಾನ್ ಆಫ್ ದಿ ಸೀರೀಸ್ ಪ್ರಶಸ್ತಿ ಯಾಗಿ ಉನೈಜ್ಗೆ ಬೈಕ್ ನೀಡಲಾಯಿತು.
ಕ್ರೀಡಾಕೂಟದ ಶಿಸ್ತುಬದ್ಧ ತಂಡ ಪ್ರಶಸ್ತಿಯನ್ನು ಚಿಮ್ಮಚಿರ ಹಳ್ಳಿಗಟ್ಟು ತಂಡ ಪಡೆದುಕೊಂಡಿತ್ತು. ಆಲೀರ ಕ್ರಿಕೆಟ್ ಕ್ರೀಡಾಕೂಟದ ಪ್ರದರ್ಶನ ಪಂದ್ಯದಲ್ಲಿ ಮೊದಲ ಸ್ಥಾನ ಪಡೆದ ಪೊನ್ನಂಪೇಟೆ ಕಲ್ಲುಕೋರೆಯ ಕಾಟ್ರಕೊಲ್ಲಿ ಬ್ರದರ್ಸ್ ತಂಡಕ್ಕೆ ಟ್ರೋಫಿ ನೀಡಲಾಯಿತು.
- ಚನ್ನನಾಯಕಸೋಮವಾರಪೇಟೆ: ಸಮೀಪದ ಹಿರಿಕರ-ಚನ್ನಾಪುರ ಗ್ರಾಮದ ಶ್ರೀ ರಾಮೇಶ್ವರ ಯುವಕ ಸಂಘದ ವತಿಯಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಮತ್ತು ಕ್ರೀಡಾಕೂಟ ಹಿರಿಕರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಯುವಕ ಸಂಘದ ಅಧ್ಯಕ್ಷ ಹೆಚ್.ಆರ್. ಮೋಹನ್ದಾಸ್ ಉದ್ಘಾಟಿಸಿದರು. ನಂತರ ಮಾತನಾಡಿ, ಅಂಬೇಡ್ಕರ್ ಅವರು ಶ್ರೇಷ್ಠ ಸಮಾಜ ಸುಧಾರಕ, ತುಳಿಕ್ಕೊಳಗಾದ ವರ್ಗಗಳ ವಿಮೋಚಕ, ವಿದ್ವಾಂಸ, ಮಾನವ ಹಕ್ಕುಗಳ ಹೋರಾಟಗಾರ ಅಲ್ಲದೆ ಶಿಕ್ಷಣ ತಜ್ಞರಾಗಿದ್ದರು ಎಂದು ಬಣ್ಣಿಸಿದರು.
ಅಂಬೇಡ್ಕರ್ ಬಾಲ್ಯದಲ್ಲಿ ಸಾಮಾಜಿಕ ಬಹಿಷ್ಕಾರ ಮತ್ತು ಅವಮಾನವನ್ನು ಎದುರಿಸಿದ ಅನುಭವವು ಜಾತಿ ವ್ಯವಸ್ಥೆಯ ಅನ್ಯಾಯಗಳ ವಿರುದ್ಧ ಹೋರಾಡುವ ಅಳವಾದ ಸಂಕಲ್ಪವನ್ನು ಅವರಲ್ಲಿ ತುಂಬಿತ್ತು. ಅಂಬೇಡ್ಕರ್ ಆದರ್ಶಗಳು ಚಿಂತನೆಗಳನ್ನು ನಾವೆಲ್ಲರೂ ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು.
ವೇದಿಕೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಸಿ.ಈ. ವೆಂಕಟೇಶ್, ಐಗೂರು ಪಿ.ಯು. ಕಾಲೇಜಿನ ಪ್ರಾಂಶುಪಾಲರಾದ ಎಚ್.ಈ. ಉಮೇಶ್, ನಿವೃತ್ತ ಶಿಕ್ಷಕ ಎಚ್.ಡಿ. ಧರ್ಮಪ್ಪ, ಅಂಗನವಾಡಿ ಕಾರ್ಯಕರ್ತೆ ಹೇಮಲತ, ಸಂಘದ ಪದಾಧಿಕಾರಿಗಳಾದ ದೇವಪ್ಪ, ಅಭಿಷೇಕ್ ಇದ್ದರು. ಪುರುಷರಿಗೆ ವಾಲಿಬಾಲ್, ಮಹಿಳೆಯರಿಗೆ ಥ್ರೋಬಾಲ್, ಹಗ್ಗಜಗ್ಗಾಟ ಪಂದ್ಯಾಟಗಳು ನಡೆದವು.ವೀರಾಜಪೇಟೆ: ವೀರಾಜ ಪೇಟೆಯ ರಾಮನಗರದಲ್ಲಿ, ರಾಮನಗರ ಫ್ರೆಂಡ್ಸ್ ಆಯೋಜಿಸಿರುವ ಪ್ರೊ ಕಬಡ್ಡಿ ಪ್ರೀಮಿಯರ್ ಲೀಗ್ ಪಂದ್ಯಾಟದ ಉದ್ಘಾಟನೆಯನ್ನು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ನೆರವೇರಿಸಿದರು.
ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿ, ಕಬಡ್ಡಿ ಕ್ರೀಡೆಯು ದೇಹದ ಬೆಳವಣಿಗೆಗೆ ಉತ್ತಮ ಆಟವಾಗಿದ್ದು, ಆಟಗಾರರು ತಮ್ಮ ಪ್ರತಿಭೆಯನ್ನು ಅನಾವರಣ ಗೊಳಿಸಲು ಇದು ವೇದಿಕೆಯಾಗಲಿ ಎಂದು ಕರೆ ನೀಡಿದರು.
ಇತ್ತೀಚಿನ ದಿನಗಳಲ್ಲಿ ಕಬಡ್ಡಿ ಆಟ ಪ್ರಖ್ಯಾತಿ ಪಡೆಯುತ್ತಿದ್ದು, ಭಾರತದ ಪುರಾತನ ಕ್ರೀಡೆಗಳಲ್ಲಿ ಒಂದಾಗಿರುವ ಕಬಡ್ಡಿಯು ಏಕಾಗ್ರತೆ ಹಾಗೂ ಕ್ಷಮತೆಗೆ ಹಿಡಿದ ಕೈಗನ್ನಡಿ ಎಂದರು.
ಈ ಸಂದರ್ಭದಲ್ಲಿ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಕ್ಷಿತ್ ಹಾಗೂ ಪ್ರಮುಖರು, ಆಯೋಜಕರು, ಸ್ಥಳೀಯರು, ಕ್ರೀಡಾಪಟುಗಳು ಉಪಸ್ಥಿತರಿದ್ದರು.ವೀರಾಜಪೇಟೆ: ಅಮ್ಮತ್ತಿ ಜಿಎಂಪಿ ಶಾಲಾ ಮೈದಾನದಲ್ಲಿ ಆಯೋಜನೆಗೊಂಡ ಪ್ರೊಫೆಷನಲ್ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವತಿಯಿಂದ ರಾಜ್ಯಮಟ್ಟದ ಛಾಯಾಗ್ರಾಹಕರ ಕ್ರಿಕೆಟ್ ಪಂದ್ಯಾವಳಿಯನ್ನು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಉದ್ಘಾಟಿಸಿದರು.
ಬ್ಯಾಟ್ ಬೀಸುವ ಮೂಲಕ ಕ್ರಿಕೆಟ್ ಪಂದ್ಯಾವಳಿಗೆ ವಿಧ್ಯುಕ್ತವಾಗಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಶಾಸಕರು, ಪ್ರಪಂಚದ ಅದ್ಭುತ ಕ್ಷಣಗಳನ್ನು ತಮ್ಮ ಕ್ಯಾಮರಾದಲ್ಲಿ ಸೆರೆ ಹಿಡಿಯುವ ಛಾಯಾಗ್ರಾಹಕರು ಇಂದು ಮೈದಾನದಲ್ಲಿ ಇಳಿದು ತಮ್ಮ ಆಟದ ಪ್ರದರ್ಶನವನ್ನು ನೀಡುತ್ತಿರುವುದು ಅತ್ಯಂತ ಸಂತಸ ತಂದಿದೆ. ಛಾಯಾಗ್ರಹಣ ಎಂಬುದು ಒಂದು ಅದ್ಭುತ ಹಾಗೂ ವಿಶಿಷ್ಟ ಕಲೆಯಾಗಿದ್ದು, ಇದಕ್ಕೆ ಏಕಾಗ್ರತೆಯ ಅವಶ್ಯಕತೆ ಇದೆ. ಅಂತಹ ಏಕಾಗ್ರತೆಯನ್ನು ಪಡೆಯುವಲ್ಲಿ ಕ್ರೀಡೆ ಕೂಡ ಅಪಾರ ಕೊಡುಗೆ ನೀಡಬಲ್ಲದು ಎಂದು ಹೇಳಿದರು.
ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾಗವಹಿಸಿದ ಎಲ್ಲಾ ತಂಡಗಳಿಗೆ ಶಾಸಕರು ಶುಭ ಕೋರಿದರು. ಈ ಸಂದರ್ಭದಲ್ಲಿ ವಿವಿಧ ಕಡೆಗಳಿಂದ ಆಗಮಿಸಿದ್ದ ಛಾಯಾಚಿತ್ರಗಾರರು, ಕ್ರೀಡಾಪ್ರೇಮಿಗಳು, ಆಯೋಜಕರು ಸೇರಿದಂತೆ ಇನ್ನಿತರರು ಹಾಜರಿದ್ದರು.ವೀರಾಜಪೇಟೆ: ಅಮ್ಮತ್ತಿ ಜಿಎಂಪಿ ಶಾಲಾ ಮೈದಾನದಲ್ಲಿ ಆಯೋಜನೆಗೊಂಡ ಪ್ರೊಫೆಷನಲ್ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವತಿಯಿಂದ ರಾಜ್ಯಮಟ್ಟದ ಛಾಯಾಗ್ರಾಹಕರ ಕ್ರಿಕೆಟ್ ಪಂದ್ಯಾವಳಿಯನ್ನು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಉದ್ಘಾಟಿಸಿದರು.
ಬ್ಯಾಟ್ ಬೀಸುವ ಮೂಲಕ ಕ್ರಿಕೆಟ್ ಪಂದ್ಯಾವಳಿಗೆ ವಿಧ್ಯುಕ್ತವಾಗಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಶಾಸಕರು, ಪ್ರಪಂಚದ ಅದ್ಭುತ ಕ್ಷಣಗಳನ್ನು ತಮ್ಮ ಕ್ಯಾಮರಾದಲ್ಲಿ ಸೆರೆ ಹಿಡಿಯುವ ಛಾಯಾಗ್ರಾಹಕರು ಇಂದು ಮೈದಾನದಲ್ಲಿ ಇಳಿದು ತಮ್ಮ ಆಟದ ಪ್ರದರ್ಶನವನ್ನು ನೀಡುತ್ತಿರುವುದು ಅತ್ಯಂತ ಸಂತಸ ತಂದಿದೆ. ಛಾಯಾಗ್ರಹಣ ಎಂಬುದು ಒಂದು ಅದ್ಭುತ ಹಾಗೂ ವಿಶಿಷ್ಟ ಕಲೆಯಾಗಿದ್ದು, ಇದಕ್ಕೆ ಏಕಾಗ್ರತೆಯ ಅವಶ್ಯಕತೆ ಇದೆ. ಅಂತಹ ಏಕಾಗ್ರತೆಯನ್ನು ಪಡೆಯುವಲ್ಲಿ ಕ್ರೀಡೆ ಕೂಡ ಅಪಾರ ಕೊಡುಗೆ ನೀಡಬಲ್ಲದು ಎಂದು ಹೇಳಿದರು.
ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾಗವಹಿಸಿದ ಎಲ್ಲಾ ತಂಡಗಳಿಗೆ ಶಾಸಕರು ಶುಭ ಕೋರಿದರು. ಈ ಸಂದರ್ಭದಲ್ಲಿ ವಿವಿಧ ಕಡೆಗಳಿಂದ ಆಗಮಿಸಿದ್ದ ಛಾಯಾಚಿತ್ರಗಾರರು, ಕ್ರೀಡಾಪ್ರೇಮಿಗಳು, ಆಯೋಜಕರು ಸೇರಿದಂತೆ ಇನ್ನಿತರರು ಹಾಜರಿದ್ದರು.