ನಾಪೋಕ್ಲು, ಮೇ ೮: ಮುಜರಾಯಿ ದೇವಾಲಯದ ಅಧೀನಕ್ಕೆ ಒಳಪಟ್ಟ ಸಮೀಪದ ಪಾಲೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಧಾರ್ಮಿಕ ದತ್ತಿ ಆಯುಕ್ತರ ಸುತ್ತೋಲೆಯಲ್ಲಿ ತಿಳಿಸಿರುವಂತೆ ವಿಶೇಷ ಪೂಜೆ ಆಯೋಜಿಸಲಾಗಿತ್ತು.

ಭಯೋತ್ಪಾದಕರ ಶಿಬಿರಗಳ ಮೇಲೆ ಅಪರೇಷನ್ ಸಿಂಧೂರ್ ಹೆಸರಿನಲ್ಲಿ ನಡೆದ ಸೇನಾ ಕಾರ್ಯಾಚರಣೆಯು ಯಶಸ್ವಿಯಾಗಿ ನಿರ್ವಹಿಸಿದ ನಮ್ಮ ಭಾರತೀಯ ಹೆಮ್ಮೆಯ ಸೇನಾ ಯೋಧರಿಗೆ ಮತ್ತಷ್ಟು ಶಕ್ತಿಯನ್ನು ಶ್ರೀ ಮಹಾಲಿಂಗೇಶ್ವರ ಅನುಗ್ರಹಿಸಲಿ ಎಂದು ಕ್ಷೇತ್ರದ ಮುಖ್ಯ ಪುರೋಹಿತರಾದ ದೇವಿಪ್ರಸಾದ್ ಪ್ರಾರ್ಥನೆ ಹಾಗೂ ಸಂಕಲ್ಪ ,ರುದ್ರಾಭಿಷೇಕ ಮಹಾಪೂಜೆ ನೆರವೇರಿಸಿ ತೀರ್ಥ ಪ್ರಸಾದ ವಿತರಿಸಿ ದೇಶವಾಸಿಗಳಿಗೆ ಒಳಿತಾಗಲಿದೆ ಎಂದರು. ಈ ಸಂದರ್ಭ ಭಕ್ತಾದಿಗಳು ಹಾಜರಿದ್ದರು.