ಮಡಿಕೇರಿ, ಮೇ ೮: “ಆಪರೇಷನ್ ಸಿಂಧೂರ್" ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆ ಯಶಸ್ವಿಯಾಗಿರುವುದರಿಂದ ಭಾರತೀಯ ಸೇನೆಯ ಹೆಸರಿನಲ್ಲಿ ಹಾಗೂ ಭಾರತೀಯ ಯೋಧರಿಗೆ ಒಳಿತಾಗಲಿ, ಸೇನೆಗೆ ಮತ್ತಷ್ಟು ಶಕ್ತಿಯನ್ನು ಭಗವಂತನು ಅನುಗ್ರಹಿಸಿ ಕರುಣಿಸಲಿ ಎಂದು ಕೊಡಗಿನ ಪ್ರಮುಖ ದೇವಾಲಯಗಳಲ್ಲಿ ಇಂದು ಪ್ರಾರ್ಥನೆ ನಡೆಸಲಾಯಿತು. ಪಾಕಿಸ್ತಾನಿ ಭಯೋತ್ಪಾದಕರ ವಿರುದ್ಧದ ಹೋರಾಟದಲ್ಲಿ ಭಾರತೀಯ ಸೇನಾ ಪಡೆಗಳ ಮನೋಸ್ಥೆöÊರ್ಯ ಹೆಚ್ಚಿಸಲು ಕೊಡಗಿನ ಮುಜರಾಯಿ ದೇವಾಲಯಗಳಲ್ಲಿ ವಿಶೇಷ ಪೂಜೆಗಳನ್ನು ನಡೆಸಲಾಯಿತು.

ಕರ್ನಾಟಕ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಮುಜರಾಯಿ ಇಲಾಖೆ ಆಡಳಿತದಲ್ಲಿರುವ ದೇವಾಲಯಗಳಲ್ಲಿ ಪೂಜೆಗಳನ್ನು ನಡೆಸುವಂತೆ ಸೂಚನೆ ನೀಡಿದ್ದÀರು. ಅದರಂತೆ, ಮಡಿಕೇರಿಯ ಐತಿಹಾಸಿಕ ಶ್ರೀ ಓಂಕಾರೇಶ್ವರ ದೇವಸ್ಥಾನ ಮತ್ತು ಕಾವೇರಿ ನದಿಯ ಜನ್ಮಸ್ಥಳವಾದ ತಲಕಾವೇರಿ ಹಾಗೂ ಭಾಗಮಂಡಲದ ಭಗಂಡೇಶ್ವರ ದೇವಾಲಯಗಳಲ್ಲಿ ವಿಶೇಷ ಪೂಜೆಯನ್ನು ಆಯೋಜಿಸಲಾಗಿತ್ತು.

ಓಂಕಾರೇಶ್ವರ ದೇವಸ್ಥಾನ ಸಮಿತಿ ಅಧ್ಯಕ್ಷ ಚುಮ್ಮಿ ದೇವಯ್ಯ, ಸಮಿತಿ ಸದಸ್ಯರುಗಳಾದ ಅಂಬೆಕಲ್ ಕುಶಾಲಪ್ಪ, ಪ್ರಕಾಶ್ ಆಚಾಂiÀið, ಜಿ. ರಾಜೇಂದ್ರ ಇವರುಗಳೊಂದಿಗೆ ಭಕ್ತಾದಿಗಳು ಪ್ರಾರ್ಥನೆ ಸಲ್ಲಿಸಿದರು. ಭಯೋತ್ಪಾದನೆಯನ್ನು ಎದುರಿಸುವಲ್ಲಿ, ದೇಶದ ಕಲ್ಯಾಣಕ್ಕಾಗಿ ಮತ್ತು ಭಯೋತ್ಪಾದನೆಯ ವಿರುದ್ಧ ಹೋರಾಡಲು ಭಾರತೀಯ ಸೇನಾ ಪಡೆಗಳ ಮೇಲೆ ಶಿವನ ಕೃಪೆಗಾಗಿ ಪ್ರಾರ್ಥಿಸಿದರು. ಅರ್ಚಕರು ರುದ್ರಾಭಿಷೇಕ ನಡೆಸಿದರು, ತಲಕಾವೇರಿಯಲ್ಲಿ, ಉಸ್ತುವಾರಿ ಪಾರ್ಪತ್ತೇಗಾರ್ ಮಹೇಶ್ ಮತ್ತು ಇತರರು ಪ್ರಾರ್ಥಿಸಿದರು. ಅರ್ಚಕರು ಕಾವೇರಿ ಮಾತೆಗೆ ಪೂಜೆ ಸಲ್ಲಿಸಿದರು. ಭಾಗಮಂಡಲದ ಶ್ರೀ ಭಗಂಡೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಸಂಕಲ್ಪದೊAದಿಗೆ ಪೂಜೆಯನ್ನು ನೆರವೇರಿಸಲಾಯಿತು. ಹರೀಶ್ ಭಟ್, ಮತ್ತಿತರರು ಪ್ರಾರ್ಥನೆ ಸಲ್ಲಿಸಿದರು.