ಕುಶಾಲನಗರ, ಮೇ. ೮: ಭಾರತ ಪಾಕ್ ಯುದ್ಧ ಭೀತಿ ಹಿನ್ನೆಲೆಯಲ್ಲಿ ಸಮೀಪದ ಹಾರಂಗಿ ಅಣೆಕಟ್ಟು ಸೇರಿದಂತೆ ಕೊಡಗು ಜಿಲ್ಲೆಯ ಸೂಕ್ಷö್ಮ ಪ್ರದೇಶಗಳಲ್ಲಿ ಹೈಅಲರ್ಟ್ ಘೋಷಣೆ ಮಾಡಲಾಗಿದೆ.

ರಾಜ್ಯ ಸರ್ಕಾರ ಈ ಸಂಬAಧ ಕಾವೇರಿ ನೀರಾವರಿ ನಿಗಮ ಹಿರಿಯ ಅಧಿಕಾರಿಗಳಿಗೆ ಆದೇಶ ನೀಡಿದ್ದು, ಗುರುವಾರದಿಂದ ಅನಿರ್ದಿಷ್ಟ ಅವಧಿ ಪ್ರವಾಸಿಗರಿಗೆ ಹಾರಂಗಿ ಉದ್ಯಾನವನ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.

ದಿನದ ೨೪ ಗಂಟೆಗಳ ಕಾಲ ಮೂರು ಪಾಳಿಗಳಲ್ಲಿ ತಲಾ ೨೦ ಮಂದಿ ಭದ್ರತಾ ಸಿಬ್ಬಂದಿಗಳ ಮೂಲಕ ಅಣೆಕಟ್ಟಿನ ಭದ್ರತೆ ಬಗ್ಗೆ ನಿಗಾ ವಹಿಸಲಾಗುತ್ತಿದೆ ಎಂದು ಹಾರಂಗಿ ಅಣೆಕಟ್ಟು ಕಾರ್ಯಪಾಲಕ ಅಭಿಯಂತರ ಬಿ.e.ೆ ಪುಟ್ಟಸ್ವಾಮಿ ತಿಳಿಸಿದ್ದಾರೆ.

ಈಗಾಗಲೇ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಮೂಲಕ ಅಣೆಕಟ್ಟಿನ ರಕ್ಷಣೆಗೆ ಪೊಲೀಸರ ನಿಯೋಜನೆಯಾಗಿದ್ದು, ಹೆಚ್ಚುವರಿಯಾಗಿ ಸ್ಥಳೀಯ ಪೊಲೀಸರ ನಿಯೋಜನೆಗೆ ಕೋರಲಾಗಿದೆ ಎಂದು ಅವರು ತಿಳಿಸಿದ್ದಾರೆ.

-ಚಂದ್ರಮೋಹನ್