ಮಡಿಕೇರಿ, ಮೇ ೯ : ಮುಂಗಾರು ಸಂಬAಧ ನೋಡಲ್ ಅಧಿಕಾರಿಗಳು ಹಾಗೂ ಎಂಜಿನಿ ಯರ್ಗಳು ಈಗಿ ನಿಂದಲೇ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಜೂನ್ ತಿಂಗಳಲ್ಲಿ ಮುಂಗಾರು ಆರಂಭವಾಗುವ ಸಾಧ್ಯತೆ ಇದೆ. ವ್ಯಾಪಕ ಮಳೆಯಿಂದ ಸಂಭವಿಸಬಹುದಾದ ಅನಾಹುತ ವನ್ನು ತಡೆಯುವ ನಿಟ್ಟಿನಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು.
ಮುಂಗಾರು ಸಂದರ್ಭದಲ್ಲಿ ಯಾವುದೇ ರೀತಿಯ ಪ್ರಾಣ ಹಾನಿ, ಜಾನುವಾರು ಹಾನಿಯಾಗದಂತೆ ಎಚ್ಚರವಹಿಸಬೇಕು. ಈಗಾಗಲೇ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ತಮ್ಮ ತಮ್ಮ ವ್ಯಾಪ್ತಿಯಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಸೂಕ್ಷö್ಮ ಪ್ರದೇಶಗಳಲ್ಲಿ ಹೆಚ್ಚಿನ ನಿಗಾವಹಿಸಬೇಕು ಎಂದು ಹೇಳಿದರು.
ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಜನರ ಸುರಕ್ಷತೆ ಕಾಪಾಡುವ ನಿಟ್ಟಿನಲ್ಲಿ ಅಗ್ನಿಶಾಮಕ ಸಿಬ್ಬಂದಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಎನ್ಡಿಆರ್ಎಫ್ ತಂಡದ ಜೊತೆ ಸಮನ್ವಯ ಸಾಧಿಸಬೇಕು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಔಷಧಿಗಳನ್ನು ದಾಸ್ತಾನು ಮಾಡಿ ಕೊಂಡು ಮುಂಗಾರು ಸಂದರ್ಭದಲ್ಲಿ ಸಾಂಕ್ರಾಮಿಕ ರೋಗಗಳು ಉಲ್ಭಣ ಗೊಳ್ಳದಂತೆ ಹೆಚ್ಚಿನ ಜಾಗೃತಿ ಮೂಡಿ ಸಬೇಕು.
ಸೂಕ್ಷö್ಮ ಮತ್ತು ಅತಿ ಸೂಕ್ಷö್ಮ ಪ್ರದೇಶಗಳಲ್ಲಿ ಹೆಚ್ಚಿನ ಎಚ್ಚರ ವಹಿಸಬೇಕು. ಲೋಕೋಪ ಯೋಗಿ, ಪಂಚಾಯತ್ ರಾಜ್ ಇಲಾಖೆ ಎಂಜಿನಿಯರ್ಗಳು ತಮ್ಮ ತಮ್ಮ ವ್ಯಾಪ್ತಿಯ ರಸ್ತೆಯನ್ನು ಸರಿಪಡಿಸಬೇಕು ಎಂದು ಸೂಚಿಸಿದರು.
ಪೊಲೀಸ್, ಕಂದಾಯ, ಪಂಚಾ ಯತ್ ರಾಜ್, ಲೋಕೋ ಪಯೋಗಿ, ಅಗ್ನಿಶಾಮಕ ಹೀಗೆ ವಿವಿಧ ಇಲಾಖೆ ಅಧಿಕಾರಿಗಳು ತಮ್ಮ ತಮ್ಮ ಇಲಾಖಾ ವ್ಯಾಪ್ತಿಯಲ್ಲಿ ಆಗಬೇಕಿರುವ ಕಾರ್ಯ ಪಂಚಾಯತ್ ರಾಜ್ ಇಲಾಖೆ ಎಂಜಿನಿಯರ್ಗಳು ತಮ್ಮ ತಮ್ಮ ವ್ಯಾಪ್ತಿಯ ರಸ್ತೆಯನ್ನು ಸರಿಪಡಿಸಬೇಕು ಎಂದು ಸೂಚಿಸಿದರು.
ಪೊಲೀಸ್, ಕಂದಾಯ, ಪಂಚಾ ಯತ್ ರಾಜ್, ಲೋಕೋ ಪಯೋಗಿ, ಅಗ್ನಿಶಾಮಕ ಹೀಗೆ ವಿವಿಧ ಇಲಾಖೆ ಅಧಿಕಾರಿಗಳು ತಮ್ಮ ತಮ್ಮ ಇಲಾಖಾ ವ್ಯಾಪ್ತಿಯಲ್ಲಿ ಆಗಬೇಕಿರುವ ಕಾರ್ಯ ಪಂಚಾಯತ್ ರಾಜ್ ಇಲಾಖೆ ಎಂಜಿನಿಯರ್ಗಳು ತಮ್ಮ ತಮ್ಮ ವ್ಯಾಪ್ತಿಯ ರಸ್ತೆಯನ್ನು ಸರಿಪಡಿಸಬೇಕು ಎಂದು ಸೂಚಿಸಿದರು.
ಪೊಲೀಸ್, ಕಂದಾಯ, ಪಂಚಾ ಯತ್ ರಾಜ್, ಲೋಕೋ ಪಯೋಗಿ, ಅಗ್ನಿಶಾಮಕ ಹೀಗೆ ವಿವಿಧ ಇಲಾಖೆ ಅಧಿಕಾರಿಗಳು ತಮ್ಮ ತಮ್ಮ ಇಲಾಖಾ ವ್ಯಾಪ್ತಿಯಲ್ಲಿ ಆಗಬೇಕಿರುವ ಕಾರ್ಯ ಗಳ ಬಗ್ಗೆ ಅಗತ್ಯ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಹೇಳಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಡೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಇತರರು ಇದ್ದರು.