ಮಡಿಕೇರಿ, ಮೇ ೯: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯಿಂದ ನಡೆಯುತ್ತಿರುವ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿರುವ ಯೋಧರ ಒಳತಿಗಾಗಿ ಜಿಲ್ಲೆಯ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ನೆರವೇರಿತು. ರಾಜ್ಯ ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ಅವರು ರವಾನಿಸಿದ್ದ ಸಂದೇಶದ ಹಿನ್ನೆಯಲ್ಲಿ ಇಂದು ಮಸೀದಿಗಳಲ್ಲಿ ಸೇರಿದ ಮುಸ್ಲಿಂ ಸಮುದಾಯದವರು ಯೋಧರ ಕಾರ್ಯಾಚರಣೆಗೆ ಇನ್ನಷ್ಟು ಸ್ಥೆöÊರ್ಯ ತುಂಬಲು ಪ್ರಾರ್ಥನೆ ಸಲ್ಲಿಸಿದರು. ಅಮ್ಮತ್ತಿ: ಶಾಫಿ ಜುಮಾ ಮಸೀದಿ ಯಲ್ಲಿ ಶುಕ್ರವಾರದ ಜುಮಾ ನಮಾಝ್ ಬಳಿಕ ಪೆಹಲ್ಗಾಮ್ ದಾಳಿ ಹಿನ್ನೆಲೆಯಲ್ಲಿ ಆಪರೇಷನ್ ಸಿಂಧೂರ್ ಕಾರ್ಯಾ ಚರಣೆ ನಡೆಸಿ ದೇಶ ರಕ್ಷಣೆ ಯಲ್ಲಿ ತೊಡಗಿರುವ ಭಾರತೀಯ ಯೋಧರಿಗಾಗಿ ಪ್ರಾರ್ಥನೆ ಸಲ್ಲಿಸಲಾಯಿತು. ಪ್ರಾರ್ಥನೆಗೆ ಜಮಾಅತ್ ಖತೀಬರಾದ ಉಸ್ತಾದ್ ಇಬ್ರಾಹಿಂ ಮದನಿ ನೇತೃತ್ವ ವಹಿಸಿದ್ದರು.

ನಗರದ ಜಮೀಯ ಮಸೀದಿಯಲ್ಲಿ ಧರ್ಮಗುರು ನಸೀಮ್ ಅಕ್ತರ್ ರಝಾ ಅವರ ನೇತೃತ್ವದಲ್ಲಿ ಪ್ರಾರ್ಥನೆ ನೆರವೇರಿತು. ಈ ಸಂದರ್ಭ ಮಸೀದಿಯ ಅಧ್ಯಕ್ಷ ಮಹಮದ್ ಇಮ್ರಾನ್, ಉಪಾಧ್ಯಕ್ಷರಾದ ಹಾಜಿ ಮಹಮದ್ ಶಫಿ, ಮಹಮದ್ ಷರೀಫ್, ಖಜಾಂಚಿ ಸಮಿಯುಲ್ಲಾ, ಸಹ ಖಜಾಂಚಿ ಎಂ.ಆರ್. ಆಯುಬ್ ಹಾಜರಿದ್ದರು.ಮಡಿಕೇರಿ: ಪಾಕಿಸ್ತಾನದ ವಿರುದ್ಧ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಯಶಸ್ವಿಯಾದ ಹಿನ್ನೆಲೆ ಮತ್ತು ಸೈನಿಕರ ನೈತಿಕ ಸ್ಥೆöÊರ್ಯವನ್ನು ಹೆಚ್ಚಿಸಬೇಕು ಎಂದು ನಗರದ ಬದ್ರಿಯಾ ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಧರ್ಮ ಗುರುಗಳಾದ ಹಾಫಿಲ್ ನೌಫಾಲ್ ಸಕಾಫಿ ಅವರ ನೇತೃತ್ವದಲ್ಲಿ ದೇಶದ ಶಾಂತಿ ಸೌಹಾರ್ದತೆಗಾಗಿ ಮತ್ತು ಭಾರತೀಯ ಸೇನೆಯ ಸೈನಿಕರ ಒಳಿತಿಗಾಗಿ ಮುಸಲ್ಮಾನರು ಪ್ರಾರ್ಥಿಸಿದರು.

ದೇಶವನ್ನು ಬಲಪಡಿಸುವ ನಿಟ್ಟಿನಲ್ಲಿ ಸೌಹಾರ್ದತೆಯನ್ನು ಕಾಪಾಡಿಕೊಳ್ಳುವುದು, ಪಕ್ಷಾತೀತ ಹಾಗೂ ಜಾತ್ಯತೀತವಾಗಿ ಒಗ್ಗಟ್ಟನ್ನು ಕಾಯ್ದುಕೊಳ್ಳಲು ಪ್ರಾರ್ಥಿಸಲಾಯಿತು. ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ನಡೆಸಿದ ದಾಳಿಗೆ ಪ್ರತಿಯಾಗಿ ಭಾರತೀಯ ಸೈನಿಕರು ದಾಳಿ ನಡೆಸಿದ್ದು, ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಯಶಸ್ವಿಯಾಗಿದೆ. ಆ ಮೂಲಕ ಭಾರತ ಯಾವುದೇ ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸಲು ಸಿದ್ಧವಿದೆ ಎನ್ನುವುದನ್ನು ಸಾಬೀತುಪಡಿಸಿದೆ.

ಸೈನ್ಯದ ದಂಡಾಧಿಕಾರಿಗಳು ರಾಷ್ಟç ಬದ್ಧತೆ ಹಾಗೂ ಧೈರ್ಯವನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ. ಇದರಿಂದ ಭಾರತದ ಜನತೆಗೆ ಹೆಚ್ಚಿನ ಶಕ್ತಿ ಮತ್ತು ಧೈರ್ಯ ಬಂದಿದೆ. ಈ ಸನ್ನಿವೇಶವನ್ನು ಎಲ್ಲಾ ಭಾರತೀಯರು ಒಕ್ಕೊರಲಿನಿಂದ ಸಂಭ್ರಮಿಸಬೇಕು. ಮುಂದೆಯೂ ಪ್ರಜಾಪ್ರಭುತ್ವ ರಾಷ್ಟç ಭಾರತÀದಲ್ಲಿ ಸೌಹಾರ್ದತೆಯ ಪರಂಪರೆ ಮುಂದುವರೆಯಬೇಕು. ಒಗ್ಗಟ್ಟಿನ ಬೆಳವಣಿಗೆ ದೇಶಕ್ಕೆ ವಿಜಯವನ್ನು ತಂದುಕೊಡುತ್ತದೆ ಎಂದು ಅಮೀನ್ ಮೊಹಿಸಿನ್ ಅಭಿಪ್ರಾಯಪಟ್ಟರು.

ಈ ಸಂದರ್ಭ ಮಾತನಾಡಿದ ಬದ್ರಿಯಾ ಮಸೀದಿಯ ಅಧ್ಯಕ್ಷ ಅಮೀನ್ ಮೊಹಿಸಿನ್ ಅವರು, ಪಾಕಿಸ್ತಾನ ಪ್ರೇರಿತ ಭಯೋತ್ಪಾದಕರ ವಿರುದ್ಧ ಹೋರಾಡುತ್ತಿರುವ ಭಾರತೀಯ ಸೈನಿಕರ ನೈತಿಕ ಸ್ಥೆöÊರ್ಯವನ್ನು ಹೆಚ್ಚಿಸಬೇಕು ಮತ್ತು ಶ್ರೇಯೋಭಿವೃದ್ಧಿಯಾಗಬೇಕೆಂದು ಸರ್ವ ಮುಸಲ್ಮಾನರು ಇಂದು ವಿಶೇಷ ಪ್ರಾರ್ಥನೆ ಸಲ್ಲಿಸಿದ್ದೇವೆ.

ಉಪಾಧ್ಯಕ್ಷ ಇಸ್ಮಾಯಿಲ್, ಮದ್ರಸ ಪ್ರಾಂಶುಪಾಲ ಹನೀಫ್ ಧಾರಿಮಿ, ನಗರಸಭಾ ಸದಸ್ಯ ಮನ್ಸೂರ್ ಮತ್ತಿತರರು ಉಪಸ್ಥಿತರಿದ್ದರು.

ಸೋಮವಾರಪೇಟೆ: ಪೆಹಲ್ಗಾಮ್ ಧಾಳಿ ಹಿನ್ನೆಲೆಯಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿ ದೇಶ ರಕ್ಷಣೆಯಲ್ಲಿ ತೊಡಗಿರುವ ಭಾರತೀಯ ಸೈನಿಕರ ಶ್ರೇಯೋಭಿವೃದ್ದಿಗೆ ಸೋಮವಾರಪೇಟೆ ಪಟ್ಟಣ ಸೇರಿದಂತೆ ಸುತ್ತಮುತ್ತಲ ಗ್ರಾಮೀಣ ಭಾಗದ ವಿವಿಧ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಪಟ್ಟಣ ಸಮೀಪದ ಹೊಸತೋಟ ಜುಮಾ ಮಸೀದಿಯಲ್ಲಿ ಮುಸ್ಲಿಂ ಸಮುದಾಯದವರು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭ ಮಾತನಾಡಿದ ಖತೀಬ್ ಹಾಫಿಜ್ ಉಸ್ಮಾನ್ ಸಖಾಫಿ ಅವರು, ಎಲ್ಲರೂ ನಮ್ಮ ರಾಷ್ಟ್ರದ ಸರ್ಕಾರದೊಂದಿಗೆ ಮತ್ತು ಸೈನಿಕರೊಂದಿಗೆ ಸದಾ ಇರಬೇಕು. ನಾವುಗಳು ಈ ಮಣ್ಣಿನಿಂದ ಸೃಷ್ಟಿ ಪಡೆದವರು ಹಾಗೂ ಈ ಮಣ್ಣಿನಲ್ಲಿ ವಿಲೀನವಾಗುವವರಾಗಿದ್ದು ನಮ್ಮ ದೇಶ ನಮ್ಮ ಹೆಮ್ಮೆ. ಈ ನಿಟ್ಟಿನಲ್ಲಿ ಎಲ್ಲರೂ ಒಂದಾಗಬೇಕು ಎಂದು ಕರೆ ನೀಡಿದರು.

ಈ ಸಂದರ್ಭ ಜಮಾಅತ್ ಕಾರ್ಯದರ್ಶಿ ಸಲೀಂ ಹೊಸತೋಟ, ಜಮಾಅತ್ ಸಮಿತಿಯ ಸದಸ್ಯರುಗಳಾದ ಖಾಲೀದ್, ರಷೀದ್, ಇಬ್ರಾಹಿಂ, ಶಿಹಾಬ್, ಜಾವಿದ್ ಸೇರಿದಂತೆ ಇತರರು ಇದ್ದರು.

ಬಜೆಗುಂಡಿ ಖಿಳಾರಿಯಾ ಮಸೀದಿ: ಪಟ್ಟಣ ಸಮೀಪದ ಬಜೆಗುಂಡಿ ಗ್ರಾಮದಲ್ಲಿರುವ ಖಿಳಾರಿಯಾ ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ನಂತರ, ಭಾರತೀಯ ಸೈನ್ಯದ ಹೋರಾಟವನ್ನು ಸ್ಮರಿಸಲಾಯಿತು.

ಉಗ್ರರನ್ನು ಸದೆಬಡಿಯುತ್ತಿರುವ ಭಾರತೀಯ ಸೇನೆಗೆ ಪ್ರಮುಖರು ಅಭಿನಂದನೆ ಸಲ್ಲಿಸಿದರು. ರಾಷ್ಟç ರಕ್ಷಣೆಯ ಕಾರ್ಯದಲ್ಲಿ ನಿರತರಾಗಿರುವ ಭಾರತೀಯ ಸೈನಿಕರಿಗೆ ಕೃತಜ್ಞತೆ ಅರ್ಪಿಸಿ, ಭಾರತೀಯ ಸೈನಿಕರ ಶ್ರೇಯಸ್ಸಿಗೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು.

ಪೆಹಲ್ಗಾಮ್‌ನಲ್ಲಿ ಅಮಾಯಕ ಭಾರತೀಯರ ಮಾರಣಹೋಮ ನಡೆಸಿದ ಭಯೋತ್ಪಾದಕರ ವಿರುದ್ಧ ಕಟ್ಟುನಿಟ್ಟಿನ ಕಾರ್ಯಾಚರಣೆ ನಡೆಸಿ ಉಗ್ರರನ್ನು ಸದೆಬಡಿಯುತ್ತಿರುವ ಭಾರತೀಯ ಸೇನೆಯ ಕಾರ್ಯ ಶ್ಲಾಘನೀಯ. ಭಾರತೀಯ ಸೇನೆಯ ಜತೆಗೆ ಕೋಟ್ಯಾಂತರ ಭಾರತೀಯರ ಪ್ರಾರ್ಥನೆಗಳು ಇದೆ. ಪಾಕಿಸ್ತಾನದ ವಿರುದ್ಧದ ಭಾರತೀಯ ಸೇನೆಯ ಕಾರ್ಯಾಚರಣೆಯು ಉಗ್ರರಿಗೆ ತಕ್ಕ ಪಾಠವನ್ನು ಕಲಿಸಿದೆ ಎಂದು ಬಜೆಗುಂಡಿ ಮುಸ್ಲಿಂ ಜಮಾಅತ್ ಅಧ್ಯಕ್ಷ ಕೆ.ಎ. ಯಾಕೂಬ್ ಹೇಳಿದರು.

ಸಾಮೂಹಿಕ ಜುಮಾ ನಮಾಜ್ ನಂತರ ಭಾರತೀಯ ಸೇನೆಗಾಗಿ ಆಯೋಜಿಸಲಾಗಿದ್ದ ವಿಶೇಷ ಪ್ರಾರ್ಥನಾ ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಬಜೆಗುಂಡಿ ಮುಸ್ಲಿಂ ಜಮಾಅತ್ ಖತೀಬ್ ಉಬೈದ್ ಫೈಝಿ ಅವರು ಮಾತನಾಡಿ, ದೇಶ ಪ್ರೇಮ ಈಮಾನಿನ ಭಾಗವಾಗಿದೆ. ನಮ್ಮ ದೇಶದ ಶತ್ರು ನಮ್ಮೆಲ್ಲರ ಶತ್ರು, ಪೆಹಲ್ಗಾಮ್‌ನಲ್ಲಿ ಉಗ್ರಗಾಮಿಗಳು ನಡೆಸಿದ ಕೃತ್ಯ ಖಂಡನೀಯ. ಈ ಕೃತ್ಯ ಎಸಗಿದವರ ವಿರುದ್ಧ ತಕ್ಕ ಪಾಠ ಕಲಿಸುವ ಸಮಯ ಇದಾಗಿದೆ. ಭಾರತೀಯ ಸೇನೆಯ ನಮ್ಮ ಹೆಮ್ಮೆಯ ಸೈನಿಕರು ಈ ನಿಟ್ಟಿನಲ್ಲಿ ಯಶಸ್ವಿಯಾಗಿ ಮುನ್ನುಗ್ಗಿ ಶತ್ರುಗಳಿಗೆ ಪ್ರತ್ಯುತ್ತರ ನೀಡುತ್ತಿದ್ದಾರೆ ಎಂದರು.

ನಂತರದಲ್ಲಿ ಭಾರತೀಯ ಸೇನೆಗಾಗಿ ವಿಶೇಷ ದುಆ ಪ್ರಾರ್ಥನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಜಮಾಅತ್ ಉಪಾಧ್ಯಕ್ಷರಾದ ಹನೀಫ್, ಕಾರ್ಯದರ್ಶಿ ಸುಲೈಮಾನ್, ಕಮಿಟಿ ಸದಸ್ಯರಾದ ಮುಸ್ತಫ, ಮುನೀರ್ ಪ್ರಮುಖರಾದ ಅಬ್ದುಲ್ ರಜಾಕ್, ಮಹಮೂದ್, ಮಹಮದ್ ಕುಂಞ, ರಶೀದ್, ನೌಶಾದ್, ಇಸ್ಮಾಯಿಲ್ ಹಾಗೂ ಜಮಾಅತ್ ಸದಸ್ಯರು ಉಪಸ್ಥಿತರಿದ್ದರು.

ಅಂತೆಯೇ ಕಲ್ಕಂದೂರು, ಕಾಗಡಿಕಟ್ಟೆ, ತಣ್ಣೀರುಹಳ್ಳ, ಸೋಮವಾರಪೇಟೆ ಪಟ್ಟಣದ ಜಲಾಲಿಯಾ ಸೇರಿದಂತೆ ಸುತ್ತಮುತ್ತಲ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆಗಳು ನಡೆದವು.ಸುಂಟಿಕೊಪ್ಪ: ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆ ಯಶಸ್ವಿಯಾಗಿರುವುದರಿಂದ ಭಾರತೀಯ ಸೇನೆಯ ಹೆಸರಿನಲ್ಲಿ ಹಾಗೂ ಭಾರತೀಯ ಯೋಧರಿಗೆ ಒಳಿತಾಗಲಿ ಎಂದು ಸುಂಟಿಕೊಪ್ಪದ ಮುಸ್ಲಿಂ ಜಮಾಅತ್ ಮಸೀದಿ ಸೇರಿದಂತೆ ನಗರದ ಎಲ್ಲಾ ಮಸೀದಿಗಳಲ್ಲಿ ಪ್ರಾರ್ಥನೆ ನೆರವೇರಿತು.ನಾಪೋಕ್ಲು: ದೇಶದ ಸಾಮರಸ್ಯತೆ ಮತ್ತು ಆರ್ಥಿಕತೆಯನ್ನು ಹಾಳುಗೆಡವಲು ಕಾಶ್ಮೀರದಲ್ಲಿ ಅಮಾಯಕರನ್ನು ಹತ್ಯೆಗೈದ ಉಗ್ರಗಾಮಿಗಳ ಕೇಂದ್ರಗಳ ಮೇಲೆ ಭಾರತೀಯ ಸೇನೆ ನಡೆಸುತ್ತಿರುವ “ಆಪರೇಷನ್ ಸಿಂಧೂರ್’ ಕಾರ್ಯಾಚರಣೆ ಮಾಡಿ ಸೂಕ್ತ ಪಾಠ ಕಲಿಸಿದೆ.

ಈ ಸಂದರ್ಭದಲ್ಲಿ ಭಾರತೀಯರಾದ ನಾವೆಲ್ಲರೂ ನಮ್ಮ ಸೈನಿಕರಿಗೆ ನೈತಿಕ ಬೆಂಬಲ ನೀಡಬೇಕಾದ ಅನಿವಾರ್ಯತೆ ಇದೆ ಎಂದು ಉಬೈದುಲ್ಲ ಸಖಾಫಿ ಹೇಳಿದರು. ಶುಕ್ರವಾರ ಜುಮಾ ನಮಾಝಿನ ಬಳಿಕ ಇಲ್ಲಿಯ ಮೊಹಿಯದ್ದೀನ್ ಜುಮಾ ಮಸೀದಿಯಲ್ಲಿ ಜಮಾಯತ್ ಅಧ್ಯಕ್ಷ ಎಮ್.ಎಚ್. ಅಬ್ದುಲ್ ರೆಹಮಾನ್, ಅವರ ನೇತೃತ್ವದಲ್ಲಿ ನಡೆದ ವಿಶೇಷ ಪ್ರಾರ್ಥನಾ ಸಭೆಯಲ್ಲಿ ಪ್ರಸ್ತುತ ಭಾರತ ಮತ್ತು ಪಾಕಿಸ್ತಾನ ನಡುವೆ ಸಂಘರ್ಷಗಳು ನಡೆಯುತ್ತಿದ್ದು, ಭಾರತೀಯರ ಸಂರಕ್ಷಣೆಗಾಗಿ ಶತ್ರುಗಳೊಂದಿಗೆ ಪ್ರಾಣ ಪಣಕ್ಕಿಟ್ಟು ಹೋರಾಡುತ್ತಿರುವ ಭಾರತೀಯ ಸೈನಿಕರ ಯಶಸ್ಸಿಗೆ ವಿಶೇಷ ಪ್ರಾರ್ಥನೆ ನಡೆಸಲಾಯಿತು.

ಈ ಸಂದರ್ಭ ಮೊಹಿಯದ್ದೀನ್ ಜುಮಾ ಮಸೀದಿಯ ಆಡಳಿತ ಮಂಡಳಿ ಪದಾಧಿಕಾರಿಗಳು ಹಾಗೂ ಸದಸ್ಯರು ಇದ್ದರು.ಗೋಣಿಕೊಪ್ಪ : ಆಪರೇಷನ್ ಸಿಂಧೂರ್‌ನಲ್ಲಿ ಭಾರತೀಯ ಸೇನೆ ಯಶಸ್ವಿಯಾಗಿದ್ದು ಭಾರತೀಯ ಸೇನೆಯ ಹೆಸರಿನಲ್ಲಿ ಹಾಗೂ ಭಾರತೀಯ ಯೋಧರಿಗಾಗಿ ಮುಸ್ಲಿಂ ಸಮುದಾಯದವರು ಗೋಣಿಕೊಪ್ಪಲುವಿನ ಮಸ್ಜಿದ್ ಹಿದಾಯತ್‌ನಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಗೋಣಿಕೊಪ್ಪ ಮಸ್ಜಿದ್ ಹಿದಾಯತ್‌ನ ಅಧ್ಯಕ್ಷ ತನ್ವೀರ್ ಅಹಮ್ಮದ್ ಮುಂದಾಳತ್ವದಲ್ಲಿ ಪ್ರಾರ್ಥನೆ ನೆರವೇರಿಸಿದರು. ಧರ್ಮಗುರುಗಳಾದ ಮೊಹಮ್ಮದ್ ಜಗೀರ್, ಯುನೈಟೆಡ್ ಜಮಾಅತ್‌ನ ಅಧ್ಯಕ್ಷ, ವಕೀಲ ಸಮೀರ್, ಪ್ರಮುಖರಾದ ಮೌಲಾನ ಮಾಜಿದ್, ಮೊಹಮ್ಮದ್, ಅಬ್ದುಲ್ ರೆºಗೋಣಿಕೊಪ್ಪ : ಆಪರೇಷನ್ ಸಿಂಧೂರ್‌ನಲ್ಲಿ ಭಾರತೀಯ ಸೇನೆ ಯಶಸ್ವಿಯಾಗಿದ್ದು ಭಾರತೀಯ ಸೇನೆಯ ಹೆಸರಿನಲ್ಲಿ ಹಾಗೂ ಭಾರತೀಯ ಯೋಧರಿಗಾಗಿ ಮುಸ್ಲಿಂ ಸಮುದಾಯದವರು ಗೋಣಿಕೊಪ್ಪಲುವಿನ ಮಸ್ಜಿದ್ ಹಿದಾಯತ್‌ನಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಗೋಣಿಕೊಪ್ಪ ಮಸ್ಜಿದ್ ಹಿದಾಯತ್‌ನ ಅಧ್ಯಕ್ಷ ತನ್ವೀರ್ ಅಹಮ್ಮದ್ ಮುಂದಾಳತ್ವದಲ್ಲಿ ಪ್ರಾರ್ಥನೆ ನೆರವೇರಿಸಿದರು. ಧರ್ಮಗುರುಗಳಾದ ಮೊಹಮ್ಮದ್ ಜಗೀರ್, ಯುನೈಟೆಡ್ ಜಮಾಅತ್‌ನ ಅಧ್ಯಕ್ಷ, ವಕೀಲ ಸಮೀರ್, ಪ್ರಮುಖರಾದ ಮೌಲಾನ ಮಾಜಿದ್, ಮೊಹಮ್ಮದ್, ಅಬ್ದುಲ್ ರೆಹಮಾನ್, ಫೈಜಲ್ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.Àಮಾನ್, ಫೈಜಲ್ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.ಐಗೂರು: ಭಾರತೀಯ ಸೇನಾ ಪಡೆಯು ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಉಗ್ರರ ನೆಲೆಗಳನ್ನು ಧ್ವಂಸ ಮಾಡಿದ ಹಿನ್ನೆಲೆ ಭಾರತೀಯ ಸೈನಿಕರಿಗೆ ಶಕ್ತಿ ಮತ್ತು ಸ್ಥೆöÊರ್ಯ ತುಂಬಲು ಹೊಸತೋಟದ ಜುಮ್ಮಾ ಮಸೀದಿಯಲ್ಲಿ ಖತೀಬರಾದ ಹಫೀಜ್ ಉಸ್ಮಾನ್ ಸಖಾಫಿ ಅವರ ನೇತೃತ್ವದಲ್ಲಿ ಪ್ರಾರ್ಥನೆ ಸಲ್ಲಿಸಿದ ನಂತರ ಆಫೀಜ್ ಉಸ್ಮಾನ್ ಸಖಾಫಿ ಮಾತನಾಡಿ, ಭರತ ಭೂಮಿಯಲ್ಲಿ ಜನಿಸಿದ ನಾವು ಈ ಭೂಮಿಯಲ್ಲಿ ವಿಲೀನರಾಗುವವರಾಗಿದ್ದು, ಭಾರತವು ನಮ್ಮ ಹೆಮ್ಮೆಯ ದೇಶವಾಗಿದೆ. ನಾವು ದೇಶದ ಸರಕಾರ ಮತ್ತು ಸೈನಿಕರೊಂದಿಗೆ ಸದಾ ಇರಬೇಕೆಂದರು. ಕಾರ್ಯಕ್ರಮದಲ್ಲಿ ಜಮಾಅತ್ ಕಾರ್ಯದರ್ಶಿ ಸಲೀಂ ಹೊಸತೋಟ, ಸದಸ್ಯರಾದ ಖಾಲಿದ್, ಇಬ್ರಾಹಿಂ, ರಶೀದ್, ಶಿಹಾಬ್ ಮತ್ತು ಇತರರಿದ್ದರು.ಬಜೆಗುಂಡಿ: ಖಿಳರಿಯಾ ಜುಮಾ ಮಸೀದಿಯಲ್ಲಿ ಭಾರತೀಯ ಸೇನೆಗಾಗಿ ವಿಶೇಷ ಪ್ರಾರ್ಥನೆ ನೆರವೇರಿತು. ಬಜೆಗುಂಡಿ ಮುಸ್ಲಿಂ ಜಮಾಅತ್ ಖತೀಬ್ ಉಬೈದ್ ಫೈಝಿ ನೇತೃತ್ವ ವಹಿಸಿದ್ದರು.

ಬಜೆಗುಂಡಿ ಮುಸ್ಲಿಂ ಜಮಾಅತ್ ಅಧ್ಯಕ್ಷ ಕೆ.ಎ. ಯಾಕೂಬ್, ಜಮಾಅತ್ ಉಪಾಧ್ಯಕ್ಷ ಹನೀಫ, ಕಾರ್ಯದರ್ಶಿ ಸುಲೈಮಾನ್, ಕಮಿಟಿ ಸದಸ್ಯರಾದ ಮುಸ್ತಫ, ಮುನೀರ್ ಪ್ರಮುಖರಾದ ಅಬ್ದುಲ್ ರಜಾಕ್, ಮಹಮೂದ್, ಮಹಮದ್ ಕುಂಞ, ರಶೀದ್ ನೌಶಾದ್ ಇಸ್ಮಾಯಿಲ್ ಮತ್ತಿತರರಿದ್ದರು.