ಮಡಿಕೇರಿ, ಮೇ ೯: ಕರ್ನಾಟಕ ಲೋಕಾಯುಕ್ತ, ಕೊಡಗು ಜಿಲ್ಲೆ, ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ತಾ. ೧೪ ರಂದು ಬೆಳಿಗ್ಗೆ ೧೧ ಗಂಟೆಯಿAದ ೧ ಗಂಟೆಯವರೆಗೆ ವೀರಾಜಪೇಟೆ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಲಿದ್ದಾರೆ.

ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದಾಗಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ ಮಡಿಕೇರಿಯ ದೂ.ಸಂ. ೦೮೨೭೨-೨೯೫೨೯೭ ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.