ಮಡಿಕೇರಿ, ಮೇ ೯: ರಾಷ್ಟಿçÃಯ ಜನಗಣತಿಯ ಸಂದರ್ಭ ಆದಿಮಸಂಜಾತ ಬುಡಕಟ್ಟು ಜನಾಂಗ ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಮ್ ಅನ್ನು ಸೇರಿಸಬೇಕೆಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಮಡಿಕೇರಿಯಲ್ಲಿ ಶಾಂತಿಯುತ ಸತ್ಯಾಗ್ರಹ ನಡೆಸಿತು.

ಸಿಎನ್‌ಸಿ ಅಧ್ಯಕ್ಷ ಎನ್.ಯು. ನಾಚಪ್ಪ ಅವರ ನೇತೃತ್ವದಲ್ಲಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಸತ್ಯಾಗ್ರಹ ನಡೆಸಿದ ಸದಸ್ಯರು ಕೊಡವ ಯೋಧ ಕುಲಕ್ಕಾಗಿ "ಸೋಶಿಯಲ್ ಎಂಜಿನಿಯರಿAಗ್" ಪ್ರಕ್ರಿಯೆಯ ಭಾಗವಾಗಿ ಪ್ರತ್ಯೇಕ ``ಕೋಡ್ ಮತ್ತು ಕಾಲಮ್'' ಅನ್ನು ಸೇರಿಸಬೇಕೆಂದು ಒತ್ತಾಯಿಸಿ ಗೃಹಮಂತ್ರಿಗಳು ಹಾಗೂ ಅವರ ಅಧೀನದಲ್ಲಿ ಬರುವ ರಿಜಿಸ್ಟಾçರ್ ಜನರಲ್ ಮತ್ತು ಸೆನ್ಸಸ್ ಕಮಿಷನರ್ ಆಫ್ ಇಂಡಿಯಾ (ಆರ್‌ಜಿಸಿಸಿಐ) ಇವರಿಗೆ ಜ್ಞಾಪನಾ ಪತ್ರ ಸಲ್ಲಿಸಿದರು.

ಈ ಸಂದರ್ಭ ಮಾತನಾಡಿದ ಎನ್.ಯು.ನಾಚಪ್ಪ ಅವರು ರಾಷ್ಟಿçÃಯ ಜನಗಣತಿ ಜೊತೆಗೆ ಜಾತಿವಾರು ಜನಗಣತಿ ನಡೆಸುವ ಬಗ್ಗೆ ಕೇಂದ್ರ ಸರ್ಕಾರ ತೆಗೆದುಕೊಂಡಿರುವ ನಿರ್ಧಾರ ಸ್ವಾಗತಾರ್ಹವಾಗಿದೆ. ಜನಗಣತಿಯಲ್ಲಿ ಪ್ರತ್ಯೇಕ ಕೋಡ್ ಮತ್ತು ಕಾಲಮ್ ಕೊಡವ ಸಮುದಾಯದ ನಿಖರವಾದ ಪ್ರಾತಿನಿಧ್ಯವನ್ನು ಖಚಿತಪಡಿಸುತ್ತದೆ. ಸೋಶಿಯಲ್ ಎಂಜಿನಿಯರಿAಗ್ ಸರ್ಕಾರವು ಸಮುದಾಯದ ನಿರ್ದಿಷ್ಟ ಅಗತ್ಯಗಳನ್ನು ಅರ್ಥಮಾಡಿಕೊಳ್ಳಲು ಹಾಗೂ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಗಾಗಿ ಉದ್ದೇಶಿತ ನೀತಿಗಳನ್ನು ಅಭಿವೃದ್ಧಿಪಡಿಸಲು ಅನುವು ಮಾಡಿಕೊಡುತ್ತದೆ ಎಂದರು.

ಪ್ರತ್ಯೇಕ ಕೋಡ್ ಮತ್ತು ಕಾಲಮ್ ಕೊಡವ ಸಮುದಾಯದ ವಿಶಿಷ್ಟ ಗುರುತು ಹಾಗೂ ಅಸ್ತಿತ್ವವನ್ನು ರಕ್ಷಿಸಲು ಸಹಾಯ ಮಾಡುತ್ತದೆ. ಏಕ-ಜನಾಂಗೀಯ ಸಮುದಾಯವಾಗಿ ಕೊಡವರು ವಿಶಿಷ್ಟ ಸಾಂಸ್ಕೃತಿಕ ಮತ್ತು ಐತಿಹಾಸಿಕ ಕುರುಹುವನ್ನು ಹೊಂದಿದ್ದು ಅದರ ಗುರುತಿಸುವಿಕೆ ಮತ್ತು ರಕ್ಷಣೆಗೆ ಅರ್ಹವಾಗಿದೆ. ಕೊಡವರ ಯೋಧ ಪರಂಪರೆಯು ಅವರ ಗುರುತಿನ ಅವಿಭಾಜ್ಯ ಅಂಗವಾಗಿದೆ ಮತ್ತು ಜನಗಣತಿಯಲ್ಲಿ ನಿಖರವಾದ ಪ್ರಾತಿನಿಧ್ಯವು ಅವರ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸಲು ಸಹಾಯ ಮಾಡುತ್ತದೆ ಎಂದು ಅಭಿಪ್ರಾಯಪಟ್ಟರು. ಜ್ಞಾಪನಾ ಪತ್ರವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರಿಗೆ ಸಲ್ಲಿಸಲಾಯಿತು.

ಅರೆಯಡ ಸವಿತಾ, ಚೋಳಪಂಡ ಜ್ಯೋತಿ, ಮುದ್ದಿಯಡ ಲೀಲಾವತಿ, ಕಲಿಯಂಡ ಪ್ರಕಾಶ್, ಅಳಮಂಡ ಜೈ ಗಣಪತಿ, ಪಟ್ಟಮಾಡ ಕುಶ, ಅಜ್ಜಿಕುಟ್ಟಿರ ಲೋಕೇಶ್, ಅರೆಯಡ ಗಿರೀಶ್, ನಂದೇಟಿರ ರವಿ ಸುಬ್ಬಯ್ಯ, ಕಾಟುಮಣಿಯಂಡ ಉಮೇಶ್, ಪುದಿಯೊಕ್ಕಡ ಪೃಥ್ವಿ, ಪುಟ್ಟಿಚಂಡ ದೇವಯ್ಯ, ಮಣೋಟಿರ ಚಿಣ್ಣಪ್ಪ, ಕೂಪದಿರ ಸಾಬು, ಚೋಳಪಂಡ ನಾಣಯ್ಯ, ಮೇದುರ ಕಂಠಿ, ಪುದಿಯೊಕ್ಕಡ ಕಾಶಿ, ಚಂಙAಡ ಚಾಮಿ ಪಳಂಗಪ್ಪ, ನಂದಿನೆರವAಡ ಅಯ್ಯಣ್ಣ, ಚೀಯಬೆರ ಸತೀಶ್, ನಂದಿನೆರವAಡ ಅಪ್ಪಯ್ಯ, ಮೇದುರ ಗಪ್ಪಣ್ಣ, ಬಡುವಂಡ ವಿಜಯ, ಮಣೋಟಿರ ನಂದಾ, ಐಚೆಟ್ಟಿರ ರವಿ ಹಾಗೂ ಬೊಳ್ಳಜಿರ ಬಿ.ಅಯ್ಯಪ್ಪ ಭಾಗವಹಿಸಿದ್ದರು.