ಮಡಿಕೇರಿ, ಮೇ ೯: : ನಗರದ ಓಂಕಾರೇಶ್ವರ ದೇವಾಲಯದ ಬಳಿ ನಿರ್ಮಾಣವಾಗುತ್ತಿರುವ ಶೌಚಾಯಲಯ ಕಾಮಗಾರಿಯನ್ನು ನಗರಸಭೆ ಅಧ್ಯಕ್ಷೆ ಕಲಾವತಿ, ಉಪಾಧ್ಯಕ್ಷ ಮಹೇಶ್ ಜೈನಿ ಪರಿಶೀಲಿಸಿದರು.
ನಿರ್ಮಿತಿ ಕೇಂದ್ರದಿAದ ನಿರ್ಮಾಣವಾಗುತ್ತಿರುವ ಶೌಚಾಲಯಕ್ಕೆ ಶೀಘ್ರವಾಗಿ ನೀರಿನ ಸಂಪರ್ಕ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ನಂತರ ಗೌರಿ ಕೆರೆಯನ್ನು ವೀಕ್ಷಿಸಿದರು. ಈ ಸಂದರ್ಭ ನಗರಸಭಾ ಸದಸ್ಯ ಚಂದ್ರಶೇಖರ್ ಕೆಲವೊಂದು ಸಮಸ್ಯೆಗಳ ಬಗ್ಗೆ ಗಮನ ಸೆಳೆದು ಪರಿಹಾರಕ್ಕೆ ಮನವಿ ಮಾಡಿದರು. ಅಭಿಯಂತರ ಸತೀಶ್ ಹಾಜರಿದ್ದರು.