ಮಡಿಕೇರಿ, ಮೇ ೧೩: ಸುಂಟಿಕೊಪ್ಪದ ಬ್ಲೂಬಾಯ್ಸ್ ಯುವಕ ಸಂಘದ ವತಿಯಿಂದ ತಾ. ೧೬ ರಿಂದ ೨೫ ರವರೆಗೆ ಡಿ. ಶಿವಪ್ಪ ಸ್ಮಾರಕ ರಾಜ್ಯಮಟ್ಟದ ಗೋಲ್ಡ್ ಕಪ್ ಫುಟ್ಬಾಲ್ ಪಂದ್ಯಾವಳಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಕೆ.ಎಂ. ಆಲಿಕುಟ್ಟಿ ತಿಳಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಂಟಿಕೊಪ್ಪದ ಸರ್ಕಾರಿ ಶಾಲಾ ಮೈದಾನದಲ್ಲಿ ೨೬ನೇ ವರ್ಷದ ನಾಕೌಟ್ ಮಾದರಿಯ ಫುಟ್ಬಾಲ್ ಪಂದ್ಯಾವಳಿ ನಡೆಯಲಿದ್ದು, ಗೋಲ್ಡ್ ಕಪ್‌ಗಾಗಿ ೨೫ ತಂಡಗಳ ನಡುವೆ ಹಣಾಹಣಿ ನಡೆಯಲಿದೆ ಎಂದರು.

ಪAದ್ಯಾವಳಿಯ ಪ್ರಥಮ ಮತ್ತು ದ್ವಿತೀಯ ವಿಜೇತ ತಂಡಕ್ಕೆ ಡಿ. ವಿನೋದ್ ಶಿವಪ್ಪ ಮತ್ತು ಅವರ ಪುತ್ರ ವಿಶಾಲ್ ಶಿವಪ್ಪ ಅವರು ಡಿ. ಶಿವಪ್ಪ ಸ್ಮರಣಾರ್ಥವಾಗಿ ೧ ಲಕ್ಷ ನಗದು ಮತ್ತು ಟ್ರೋಫಿ, ದ್ವಿತೀಯ ಬಹುಮಾನವಾಗಿ ೫೦ ಸಾವಿರ ನಗದು ಮತ್ತು ಟ್ರೋಫಿ

ಡಿ. ಶಿವಪ್ಪ ಸ್ಮಾರಕ ರಾಜ್ಯಮಟ್ಟದ ಫುಟ್ಬಾಲ್ ಪಂದ್ಯಾಟ

(ಮೊದಲ ಪುಟದಿಂದ) ಜೊತೆಗೆ ವೈಯಕ್ತಿಕ ಬಹುಮಾನವನ್ನು ನೀಡಲಿದ್ದಾರೆ ಎಂದು ಹೇಳಿದರು.

ಪ್ರತಿನಿತ್ಯ ಮಧ್ಯಾಹ್ನ ೩ ಗಂಟೆಯಿAದ ಎರಡು ಪಂದ್ಯಾವಳಿ ನಡೆಯಲಿದ್ದು, ಭಾನುವಾರ ೩ ಪಂದ್ಯ ಆಯೋಜಿಸಲಾಗಿದೆ. ತಾ. ೨೪ ರಂದು ಸೆಮಿಫೈನಲ್ ಪಂದ್ಯ ಜರುಗಲಿದೆ ಎಂದು ತಿಳಿಸಿದರು.

ಶಿವಪ್ಪ ಅವರ ಪುತ್ರ ವಿನೋದ್ ಶಿವಪ್ಪ ತನ್ನ ತಂದೆ ಡಿ. ಶಿವಪ್ಪ ಸ್ಮರಣಾರ್ಥ ಬ್ಲೂಬಾಯ್ಸ್ ಯುವ ಸಂಘಕ್ಕೆ ಪ್ರತಿವರ್ಷ ಟ್ರೋಫಿ, ನಗದು ಬಹುಮಾನ ನೀಡುವ ಮೂಲಕ ಫುಟ್ಬಾಲ್ ಪಂದ್ಯಾವಳಿಗೆ ಬೆಂಬಲ ನೀಡುತ್ತಾ ಬಂದಿದ್ದಾರೆ.

ದಾನಿಗಳಾದ ಡಿ. ವಿನೋದ್ ಶಿವಪ್ಪ ಮಾತನಾಡಿ, ೧೯೯೬ ರಿಂದ ಸುಂಟಿಕೊಪ್ಪದಲ್ಲಿ ಡಿ. ಶಿವಪ್ಪ ಸ್ಮಾರಕ ಫುಟ್ಬಾಲ್ ಪಂದ್ಯಾವಳಿಯನ್ನು ಆಯೋಜಿಸುತ್ತಾ ಬರುತ್ತಿರುವ ಬ್ಲೂ ಬಾಯ್ಸ್ ಯುವಕ ಸಂಘ ಮಕ್ಕಳಿಂದ ಹಿರಿಯವರೆಗೆ ಈ ಪಂದ್ಯಾವಳಿ ಮೂಲಕ ಸುಂಟಿಕೊಪ್ಪ ವ್ಯಾಪ್ತಿಯಲ್ಲಿ ಫುಟ್ಬಾಲ್ ಕ್ರೀಡೆಯತ್ತ ಆಕರ್ಷಣೆ ಮೂಡಿಸುವಲ್ಲಿ ಸಹಕಾರಿಯಾಗಿದೆ. ಪ್ರತಿವರ್ಷ ಡಿ. ಶಿವಪ್ಪ ಸ್ಮಾರಕ ಫುಟ್ಬಾಲ್ ಪಂದ್ಯಾವಳಿಯನ್ನು ಸಾವಿರಾರು ಕ್ರೀಡಾ ಪ್ರೇಮಿಗಳು ವೀಕ್ಷಿಸುತ್ತಾ ಕ್ರೀಡಾ ಮನರಂಜನೆ ಪಡೆಯುತ್ತಿದ್ದಾರೆ ಎಂದರು.

ಈ ಬಾರಿ ಪಂದ್ಯಾವಳಿಯಲ್ಲಿ ಬೆಂಗಳೂರು, ತಮಿಳುನಾಡು, ಮಂಡ್ಯ, ಮೈಸೂರು, ಕೇರಳ ಕ್ಯಾಲಿಕಟ್, ಮಂಗಳೂರು, ಕೂತುಪರಂಬ ಕಣ್ಣೂರು, ಕುಂಬಳೆ, ಉಪ್ಪಳ, ಊಟಿ, ತಿರುಚ್ಚಿ, ಕೆಜಿಎಫ್‌ನ ವಾರಿಯರ್ಸ್ ಫುಟ್ಬಾಲ್ ಕ್ಲಬ್, ಬೈಲಕುಪ್ಪ, ಕೊಡಗಿನ ಪ್ರತಿಷ್ಠಿತ ತಂಡಗಳಾದ ಕುಶಾಲನಗರ, ಮಿಡ್ ಸಿಟಿ, ಪನ್ಯ, ಬೆಟ್ಟಗೇರಿ, ಗೋಣಿಕೊಪ್ಪ, ಕೊಡಗರಹಳ್ಳಿಯ ನೇತಾಜಿ ಯುವಕ ಸಂಘ, ಗದ್ದೆಹಳ್ಳದ ಎಮಿಟಿ ತಂಡಗಳೂ ಸೇರಿದಂತೆ ಆತಿಥೇಯ ಸುಂಟಿಕೊಪ್ಪದ ಬ್ಲೂಬಾಯ್ಸ್ ಯೂತ್ ತಂಡವೂ ಪಾಲ್ಗೊಳ್ಳಲಿದೆ ಎಂದರು.

ಪಂದ್ಯಾವಳಿಗೆ ರೂ. ೬.೫೦ ಲಕ್ಷ ಹಣ ಖರ್ಚಾಗಲಿದ್ದು, ಕ್ರೀಡಾಪಟುಗಳಿಗೆ ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿ ಈ ಪಂದ್ಯಾವಳಿ ಆಯೋಜಿಸಲಾಗಿದೆ. ಆಟಗಾರರಿಗೆ ಊಟ, ವಾಸ್ತವ್ಯದೊಂದಿಗೆ ಪ್ರಯಾಣಭತ್ಯೆಯನ್ನು ನೀಡಲಾಗುತ್ತದೆ ಎಂದರು.

ಸುAಟಿಕೊಪ್ಪ ವಾಹನ ಚಾಲಕ ಮತ್ತು ಮಾಲೀಕರ ಸಂಘದ ಜಿಲ್ಲಾಧ್ಯಕ್ಷ ಎಂ.ಎ. ಉಸ್ಮಾನ್ ಮಾತನಾಡಿ, ತಾ. ೧೬ ರಂದು ಮಧ್ಯಾಹ್ನ ೩ ಗಂಟೆಗೆ ಪಂದ್ಯಾವಳಿಯನ್ನು ಕೊಡಗಿನ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಾರಿಕೆ ದಿನೇಶ್ ಕುಮಾರ್ ಮತ್ತು ಕುಶಾಲನಗರ ಉಪವಿಭಾಗದ ಉಪ ಅಧೀಕ್ಷಕ ಪಿ. ಚಂದ್ರಶೇಖರ್ ಹಾಗೂ ಡಿ. ವಿಶಾಲ್ ಶಿವಪ್ಪ ಸೇರಿದಂತೆ ಹಲವಾರು ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದರು.

ಈಗಾಗಲೇ ಬ್ಲೂ ಬಾಯ್ಸ್ ಯುವಕ ಸಂಘವು ಅನೇಕ ರೀತಿಯ ಸಾಮಾಜಿಕ ಸೇವಾ ಕಾರ್ಯಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದೆ. ಪ್ರಾಕೃತಿಕ ವಿಕೋಪದ ಸಂದರ್ಭ ಸಂತ್ರಸ್ತರಿಗೆ ನೆರವು ನೀಡಿದ ಸಂಘದ ಸದಸ್ಯರು, ಹಲವಾರು ವರ್ಷಗಳಿಂದ ರಕ್ತದಾನ ಶಿಬಿರ, ಕುಟುಂಬ ಕಲ್ಯಾಣ ಶಸ್ತçಚಿಕಿತ್ಸೆ, ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ಪ್ರತಿವರ್ಷ ಒಂದಲ್ಲ ಒಂದು ರೀತಿಯ ಕ್ರೀಡಾ ಚಟುವಟಿಕೆ. ರಾಷ್ಟಿçÃಯ ಉತ್ಸವಗಳು ಸೇರಿದಂತೆ ಇತರ ಸಾಂಸ್ಕöÈತಿಕ ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ಬ್ಲೂ ಬಾಯ್ಸ್ ಯುವಕ ಸಂಘದ ವತಿಯಿಂದ ಆಟಗಾರರು ರಾಜ್ಯಮಟ್ಟದ ಹೊನಲು ಬೆಳಕಿನ ಪಂದ್ಯಾವಳಿಗಳಲ್ಲಿ ಪಾಲ್ಗೊಂಡಿರುವುದು ವಿಶೇಷ. ಅಲ್ಲದೇ ಸಂಘದ ಸದಸ್ಯರಲ್ಲಿಯೇ ಅನೇಕರು ರಾಜ್ಯಮಟ್ಟದ ಫುಟ್ಬಾಲ್ ಪಂದ್ಯಾವಳಿಗಳಲ್ಲಿ ಪಾಲ್ಗೊಂಡಿರುವುದು ಕೂಡ ಗಮನಾರ್ಹ ಎಂದರು.

ಸುದ್ದಿಗೋಷ್ಠಿಯಲ್ಲಿ ಸಂಘದ ಗೌರವಾಧ್ಯಕ್ಷ ಟಿ.ವಿ. ಪ್ರಸನ್ನ, ಉಪಾಧ್ಯಕ್ಷ ಎನ್.ಎಸ್. ಆದಿಶೇಷ, ಸಹ ಕಾರ್ಯದರ್ಶಿ ಯು.ಎಂ. ಅನಿಲ್ ಕುಮಾರ್ ಉಪಸ್ಥಿತರಿದ್ದರು.