ಹೈದರಬಾದ್ನಲ್ಲಿ ಅಗ್ನಿ ಅವಘಡ-೧೬ ಮಂದಿ ಸಾವು
ಹೈದರಾಬಾದ್, ಮೇ ೧೮: ಐತಿಹಾಸಿಕ ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿರುವ ಆಭರಣ ಅಂಗಡಿಯಲ್ಲಿ ಭಾನುವಾರ ಮುಂಜಾನೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ ೧೬ಕ್ಕೆ ಏರಿಕೆಯಾಗಿದ್ದು, ಹಲವರು ಗಾಯಗೊಂಡಿದ್ದಾರೆ. ಅಗ್ನಿಶಾಮಕ ಅಧಿಕಾರಿಗಳ ಪ್ರಕಾರ, ಬೆಳಿಗ್ಗೆ ೬ ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ. ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿಗೆ ತುರ್ತು ಕರೆ ಬಂದು ನಂತರ ೧೨ ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿವೆ ಎಂದು ತಿಳಿಸಿದ್ದಾರೆ. ಬೆಂಕಿಯನ್ನು ನಿಯಂತ್ರಣಕ್ಕೆ ತರುವ ಪ್ರಯತ್ನಗಳು ಹಲವಾರು ಗಂಟೆಗಳ ಕಾಲ ಮುಂದುವರೆದವು. ಗಾಯಗೊಂಡವರಲ್ಲಿ ಹಲವಾರು ಮಕ್ಕಳು ಸೇರಿದ್ದಾರೆ. ಎಲ್ಲರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ. ಕೇಂದ್ರ ಕಲ್ಲಿದ್ದಲು ಸಚಿವ ಮತ್ತು ಹೈದರಾಬಾದ್ ಸಂಸದ ಜಿ. ಕಿಶನ್ ರೆಡ್ಡಿ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು. ಅವರು ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಬೆಂಕಿಯ ಕಾರಣ ಮತ್ತು ನಡೆಯುತ್ತಿರುವ ರಕ್ಷಣಾ ಪ್ರಯತ್ನಗಳ ಬಗ್ಗೆ ವಿಚಾರಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರು ಬೆಂಕಿಯಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸಿ ಮೃತರ ಪ್ರತಿ ಕುಟುಂಬಕ್ಕೆ ಪ್ರಧಾನ ಮಂತ್ರಿ ರಾಷ್ಟಿçÃಯ ವಿಪತ್ತು ಪರಿಹಾರ ನಿಧಿಯಿಂದ ೨ ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಿಸಿದರು.
ಬಿಡದಿ ಬಾಲಕಿ ಸಾವಿನ ಪ್ರಕರಣಕ್ಕೆ ತಿರುವು
ಬೆಂಗಳೂರು, ಮೇ ೧೮: ಬಿಡದಿ ಹೋಬಳಿ ಭದ್ರಾಪುರ ಗ್ರಾಮದಲ್ಲಿ ನಡೆದಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿ ಸಾವಿನ ಪ್ರಕರಣ ಮಹತ್ವದ ತಿರುವು ಪಡೆದುಕೊಂಡಿದೆ. ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಲಭ್ಯವಾಗಿದ್ದು ಅತ್ಯಾಚಾರ ನಡೆದಿಲ್ಲವೆಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಬಿಡದಿ ಪೊಲೀಸ್ ಠಾಣೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸಗೌಡ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. ಪ್ರಕರಣಕ್ಕೆ ಸಂಬAಧಿಸಿದAತೆ ಮೃತದೇಹದ ೩೨ ವಿವಿಧ ಮಾದರಿಗಳನ್ನು ಎಫ್ಎಸ್ಎಲ್ಗೆ ರವಾನಿಸಲಾಗಿತ್ತು. ಕೂಲಂಕಶವಾಗಿ ಪರೀಕ್ಷೆ ನಡೆಸಿರುವ ತಜ್ಞರು, ಅತ್ಯಾಚಾರ ನಡೆದಿರುವ ಬಗ್ಗೆ ಯಾವುದೇ ಕುರುಹು ಸಿಕ್ಕಿಲ್ಲ ಎಂದು ವರದಿಯಲ್ಲಿ ನಮೂದಿಸಿದ್ದಾರೆ. ೧೦ ಮಂದಿ ಶಂಕಿತರಿದ್ದಾರೆ. ಆದರೆ, ಅವರ ಪಾತ್ರ ಸಾಬೀತಿಗೆ ಸಾಕ್ಷಾö್ಯಧಾರ ಸಿಕ್ಕಿಲ್ಲ. ಬಾಲಕಿಯ ತಲೆ ಹಾಗೂ ದೇಹದ ಇತರೆ ಭಾಗಗಳಲ್ಲಿ ಗಾಯದ ಗುರುತುಗಳು ಪತ್ತೆಯಾಗಿವೆ. ಆದರೆ, ಸಾವಿಗೆ ನಿಖರ ಕಾರಣ ತಿಳಿಯಲು ಮರಣೋತ್ತರ ಪರೀಕ್ಷೆಗಾಗಿ ಕಾಯಬೇಕಿದೆ ಎಂದು ಹೇಳಿದ್ದಾರೆ.
ಪೂಂಚ್ನಲ್ಲಿ ಸ್ಫೋಟಗೊಳ್ಳದ ೪೨ ಶೆಲ್ಗಳ ನಾಶ
ಜಮ್ಮು, ಮೇ ೧೮: ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ (ಎಲ್ಒಸಿ) ಬಳಿ ಇರುವ ವಿವಿಧ ಗ್ರಾಮಗಳಲ್ಲಿ ಸ್ಪೋಟಗೊಳ್ಳದ ೪೨ ಶೆಲ್ಗಳು ಪತ್ತೆಯಾಗಿದ್ದು, ಅವುಗಳನ್ನು ಭದ್ರತಾ ಸಿಬ್ಬಂದಿ ಭಾನುವಾರ ನಾಶಪಡಿಸಿದ್ದಾರೆ. ಇತ್ತೀಚೆಗೆ ನಡೆದ ಭಾರತ-ಪಾಕಿಸ್ತಾನ ಸಂಘರ್ಷದ ವೇಳೆ ಗಡಿ ಗ್ರಾಮಗಳನ್ನು ಗುರಿಯಾಗಿಸಿ ಶೆಲ್ ದಾಳಿ ನಡೆದಿತ್ತು. ಈ ವೇಳೆ ಸ್ಫೋಟಗೊಳ್ಳದ ಶೆಲ್ಗಳು ಕೂಡ ಗಡಿಗ್ರಾಮದ ಒಳಗೆ ಬಿದ್ದಿದ್ದವು. ಅವುಗಳನ್ನು ಈಗ ನಾಶಪಡಿಸಲಾಗಿದೆ. ಶೆಲ್ ದಾಳಿ ನಡೆದಿದ್ದ ಪ್ರದೇಶಗಳಲ್ಲಿ ಸಹಜಸ್ಥಿತಿ ಮರುಸ್ಥಾಪಿಸಿ ಜನರಿಗೆ ವಾಸಯೋಗ್ಯವಾಗಿಸಲು ಭದ್ರತಾ ಪಡೆಗಳು ಮುಂದಾಗಿವೆ. ಈ ಹಿನ್ನೆಲೆಯಲ್ಲಿ ಗ್ರಾಮಗಳಲ್ಲಿ ಪರಿಶೀಲನೆ ನಡೆಸಿ, ಸ್ಫೋಟಗೊಳ್ಳದ ಶೆಲ್ಗಳನ್ನು ಪತ್ತೆಹಚ್ಚಿ ಅವುಗಳನ್ನು ನಾಶಪಡಿಸಲಾಗಿದೆ ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ.
ಧರ್ಮಸ್ಥಳ ಮೂಲದ ಯುವತಿ ಪಂಜಾಬ್ನಲ್ಲಿ ನಿಗೂಢ ಸಾವು
ಮಂಗಳೂರು, ಮೇ ೧೮: ಧರ್ಮಸ್ಥಳ ಮೂಲದ ಯುವತಿ ಏರೋಸ್ಪೇಸ್ ಉದ್ಯೋಗಿ ಪಂಜಾಬ್ನಲ್ಲಿ ನಿಗೂಢವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಆಕಾಂಕ್ಷ ಎಸ್ ನಾಯರ್ (೨೨) ಮೃತ ಯುವತಿ. ಆಕಾಂಕ್ಷ ಎಸ್ ನಾಯರ್ ಏರೋಸ್ಪೇಸ್ ಉದ್ಯೋಗಿಯಾಗಿದ್ದರು. ಧರ್ಮಸ್ಥಳ ಬಳಿಯ ಬೊಳಿಯಾರ್ ಗ್ರಾಮದ ಆಕಾಂಕ್ಷ ಆರು ತಿಂಗಳ ಹಿಂದೆ ಏರೋಸ್ಪೇಸ್ ಇಂಜಿನಿಯರ್ ಆಗಿ ದೆಹಲಿಯಲ್ಲಿ ಉದ್ಯೋಗಕ್ಕೆ ಸೇರಿದ್ದರು. ಪಂಜಾಬಿನ ಎಲ್.ಪಿ.ಯು ಪಗ್ವಾಡ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಪಡೆದಿದುಕೊಂಡಿದ್ದರು. ಎಲ್.ಪಿ.ಯು ಪಗ್ವಾಡ ಕಾಲೇಜಿನಿಂದ ಸರ್ಟಿಫಿಕೇಟ್ ಪಡೆಯಲು ಆಕಾಂಕ್ಷ ಪಂಜಾಬ್ಗೆ ತೆರಳಿದ್ದರು. ಅಲ್ಲಿ ಉಳಿದುಕೊಂಡಿದ್ದ ಕೊಠಡಿಯ ೩ನೇ ಮಹಡಿಯಿಂದ ಬಿದ್ದು ಮೃತಪಟ್ಟಿದ್ದಾರೆ.
ಮಣಿಪುರದಲ್ಲಿ ಬಂಡುಕೋರರ ಬಂಧನ
ಇAಫಾಲ್, ಮೇ ೧೮: ಮಣಿಪುರದ ಇಂಫಾಲ್ನಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ನಾಲ್ವರು ಬಂಡುಕೋರರನ್ನು ಭದ್ರತಾ ಪಡೆಗಳು ಬಂಧಿಸಿವೆ. ಪೂರ್ವ ಮತ್ತು ಪಶ್ಚಿಮ ಇಂಫಾಲ್ ಮತ್ತು ತೌಬಲ್ ಜಿಲ್ಲೆಗಳಲ್ಲಿ ಬಂಧಿತರು ಸುಲಿಗೆ ಮತ್ತು ಹೊಸ ಸದಸ್ಯರನ್ನು ನೇಮಕ ಮಾಡಿಕೊಳ್ಳುವ ಕೃತ್ಯಗಳಲ್ಲಿ ಭಾಗಿಯಾಗಿದ್ದರು ಎಂದು ಭಾನುವಾರ ಪೊಲೀಸರು ತಿಳಿಸಿದ್ದಾರೆ.
ಉಕ್ರೇನ್ ಮೇಲೆ ರಷ್ಯಾ ಕ್ಷಿಪಣಿ ದಾಳಿ
ಕೀವ್, ಮೇ ೧೮: ರಷ್ಯಾ ಮತ್ತು ಉಕ್ರೇನ್ ನಡುವೆ ಶಾಂತಿ ಮಾತುಕತೆ ನಡೆದಿರುವ ಬೆನ್ನಲ್ಲೇ, ಉಕ್ರೇನ್ನ ಪ್ರಮುಖ ಸ್ಥಳಗಳನ್ನು ಗುರಿಯಾಗಿಸಿ ರಷ್ಯಾ ೨೭೩ ಕ್ಷಿಪಣಿಗಳನ್ನು ಉಡಾಯಿಸಿದೆ. ಈ ಘಟನೆಯಲ್ಲಿ ಒಬ್ಬ ಮಹಿಳೆ ಮೃತಪಟ್ಟಿದ್ದು, ನಾಲ್ಕು ವರ್ಷದ ಮಗು ಸೇರಿದಂತೆ ಕನಿಷ್ಠ ಮೂವರು ಗಾಯಗೊಂಡಿದ್ದಾರೆ ಎಂದು ಉಕ್ರೇನ್ ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಕದನ ವಿರಾಮದ ನಿಟ್ಟಿನಲ್ಲಿ ರಷ್ಯಾ ಅಧ್ಯಕ್ಷ ಬ್ಲಾದಿಮಿರ್ ಪುಟಿನ್ ಮತ್ತು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝಲೆನ್ಸ್ಕಿ ಅವರೊಂದಿಗೆ ಸೋಮವಾರ ಮಾತುಕತೆ ನಡೆಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದರು. ಇದರ ಬೆನ್ನಲ್ಲೇ, ರಷ್ಯಾ ಡ್ರೋನ್ ದಾಳಿ ನಡೆಸಿದೆ.
ಮೋಸ್ಟ್ ವಾಟೆಂಡ್ ಉಗ್ರ ಸೈಫುಲ್ಲಾ ಖಾಲಿದ್ ಹತ್ಯೆ
ನವದೆಹಲಿ, ಮೇ ೧೮: ಭಾರತದಲ್ಲಿ ನಡೆದ ಮೂರು ಪ್ರಮುಖ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಲಷ್ಕರ್-ಎ-ತೈಬಾ ಸಂಘಟನೆಯ ಟಾಪ್ ಉಗ್ರನನ್ನು ಪಾಕಿಸ್ತಾನದ ಸಿಂದ್ ಪ್ರಾಂತ್ಯದಲ್ಲಿ ಹತ್ಯೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಸೈಫುಲ್ಲಾ ಖಾಲಿದ್ ಮೋಸ್ಟ್ ವಾಂಟೆಡ್ ಆಗಿದ್ದ ಲಷ್ಕರ್ ಉಗ್ರರನನ್ನು ಸಿಂದ್ ಪ್ರಾಂತ್ಯದ ಬಾದಿನ್ ಜಿಲ್ಲೆಯ ಮಟ್ಟಿ ತಾಲೂಕಿನಲ್ಲಿ ಅಪರಿಚಿತ ಗುಂಪೊAದು ಹತ್ಯೆ ಮಾಡಿದೆ. ೨೦೦೧ ರಲ್ಲಿ ರಾಂಪುರದಲ್ಲಿ ನಡೆದ ಸಿಆರ್ಪಿಎಫ್ ಶಿಬಿರದ ಮೇಲಿನ ದಾಳಿ, ೨೦೦೫ರಲ್ಲಿ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ನಡೆದಿದ್ದ ಗುಂಡಿನ ದಾಳಿ ಹಾಗೂ ೨೦೦೬ ರಲ್ಲಿ ನಾಗುರದ ಆರ್ಎಸ್ಎಸ್ ಪ್ರಧಾನ ಕಚೇರಿ ಮೇಲೆ ನಡೆದಿದ್ದ ದಾಳಿಗಳಿಗೆ ಖಾಲಿದ್ ಪ್ರಮುಖ ಸಂಚುಕೋರನಾಗಿದ್ದ. ಇತ್ತೀಚೆಗೆ ಖಾಲಿದ್ ನೇಪಾಳ ಬಿಟ್ಟು ಸಿಂದ್ ಪ್ರಾಂತ್ಯದ ಬಾದಿನ್ ಜಿಲ್ಲೆಯ ಮತ್ತಿಗೆ ಗ್ರಾಮದಲ್ಲಿ ನೆಲೆಸಿದ್ದ. ಅಲ್ಲಿ ನಿಷೇಧಿತ ಜಮಾತ್-ಉದ್-ದವಾ ಉಗ್ರ ಸಂಘಟನೆಯಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.
ಕಕ್ಷೆ ಸೇರುವಲ್ಲಿ ಪಿಎಸ್ಎಲ್ವಿ ರಾಕೆಟ್ ವಿಫಲ
ಶ್ರೀಹರಿಕೋಟಾ, ಮೇ ೧೮: ಭೂ ಸರ್ವೇಕ್ಷಣೆಯ ಉದ್ದೇಶದಿಂದ ಉಡಾವಣೆ ಮಾಡಲಾಗಿದ್ದ ಪಿಎಸ್ಎಲ್ವಿ ರಾಕೆಟ್ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಕಕ್ಷೆ ಸೇರುವಲ್ಲಿ ಅದು ಭಾನುವಾರ ವಿಫಲವಾಯಿತು. ಇದು ಇಸ್ರೋದ ೧೦೧ನೇ ಉಡ್ಡಯನವಾಗಿತ್ತು. ಪೂರ್ವನಿಗದಿಯಂತೆ ಭಾನುವಾರ ಬೆಳಿಗ್ಗೆ ೫.೫೯ಕ್ಕೆ ರಾಕೆಟ್ ಉಡಾವಣೆ ಮಾಡಲಾಯಿತು. ಒಟ್ಟು ನಾಲ್ಕು ಹಂತದಲ್ಲಿ ನಡೆಯುವ ಕಾರ್ಯಾಚರಣೆ ಇದಾಗಿತ್ತು. ಎರಡು ಹಂತಗಳವರೆಗೆ ಎಲ್ಲವೂ ಅಂದುಕೊAಡAತೆಯೇ ನಡೆಯಿತು. ಆದರೆ, ಮೂರನೇ ಹಂತದಲ್ಲಿ ಕಾರ್ಯಾಚರಣೆ ವಿಫಲವಾಯಿತು ಎಂದು ಇಸ್ರೋ ಹೇಳಿದೆ. ಇನ್ನಷ್ಟು ಮೇಲೆ ಹೋಗಲು ರಾಕೆಟ್ನ ಎಂಜಿನ್ಗೆ ಬೇಕಾಗಿದ್ದ ಒತ್ತಡ ಸೃಷ್ಟಿಯಾಗಲಿಲ್ಲ. ಎಂಜಿನ್ಗೆ ಒತ್ತಡ ಸೃಷ್ಟಿಸಿಕೊಡಬೇಕಿದ್ದ ಇಂಧನ ಟ್ಯಾಂಕ್ನಲ್ಲಿಯೂ ಒತ್ತಡ ಸೃಷ್ಟಿಯಾಗಲಿಲ್ಲ. ಆದ್ದರಿಂದ ನೆಲಮಟ್ಟದಿಂದ ೪೫೦ ಕಿ.ಮೀ.ನಷ್ಟು ಎತ್ತರಕ್ಕೆ ಹಾರಿದ್ದ ರಾಕೆಟ್ ಸಮುದ್ರ ಸೇರಿತು ಎಂದಿದೆ. ಮೂರನೇ ಹಂತದಲ್ಲಿ ಮೇಲೇರಲು ವಿಫಲವಾದ ರಾಕೆಟ್ನಲ್ಲಿ ಕಂಡುಬAದ ಸಮಸ್ಯೆಯ ಕುರಿತು ವಿಶ್ಲೇಷಣೆ ಮಾಡಲಾಗುವುದು. ಈ ಬಗ್ಗೆ ಆದಷ್ಟು ಬೇಗ ಮಾಹಿತಿ ನೀಡಲಾಗುವುದು ಎಂದು ಇಸ್ರೋ ಅಧ್ಯಕ್ಷ ನಾರಾಯಣನ್ ಹೇಳಿದರು.