ಸುಳ್ಯ, ಮೇ ೧೮: ಕೆ.ವಿ.ಜಿ. ಇಂಜಿನಿಯರಿAಗ್ ಕಾಲೇಜಿನ ಮೆಕ್ಯಾನಿಕಲ್ ಇಂಜಿನಿಯರಿAಗ್ ವಿಭಾಗದ ಅಸೋಸಿಯೇಷನ್ ವತಿಯಿಂದ ತಾಂತ್ರಿಕ ಉಪನ್ಯಾಸ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾದ ಸುರತ್ಕಲ್ ಎನ್.ಐ.ಟಿ.ಕೆ.ಯ ದೀಪಕ್ ಬಿ.ಸಿ. ಮಾತನಾಡಿ, ‘Pಡಿoಜuಛಿಣ ಆesigಟಿ & ಆeveಟoಠಿmeಟಿಣ’ ಎಂಬ ವಿಷಯದಲ್ಲಿ ಉಪನ್ಯಾಸ ನೀಡಿದರು. ಕಾಲೇಜಿನ ಸಿ.ಇ.ಓ., ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರು ಮತ್ತು ವಿ.ಟಿ.ಯು.ನ ಕಾರ್ಯಕಾರಿ ಮಂಡಳಿ ಸದಸ್ಯ ಡಾ. ಉಜ್ವಲ್ ಯು.ಜೆ. ಹೊಸ ತಂತ್ರಜ್ಞಾನಕ್ಕೆ ಮೆಕ್ಯಾನಿಕಲ್ ಇಂಜಿನಿಯರಿAಗ್ ವಿಭಾಗವನ್ನು ಉಪಯೋಗಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಸಂದೇಶ ನೀಡಿದರು.

ವಿಭಾಗ ಮುಖ್ಯಸ್ಥ ಪ್ರೊ. ರಾಘವೇಂದ್ರ ಬಿ. ಕಾಮತ್ ಅವರು ‘Pಡಿoಜuಛಿಣ ಆesigಟಿ’ ಬಗ್ಗೆ ಮಾತನಾಡಿ, ಇದು ಪ್ರಾಜೆಕ್ಟ್ಗಳಿಗೆ ಉಪಯೋಗಕಾರಿ. ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಕಾಲೇಜಿನ ಪ್ರಾಂಶುಪಾಲ ಡಾ. ಸುರೇಶ ವಿ. ಮಾತನಾಡಿದರು.

ಕಾರ್ಯಕ್ರಮದಲ್ಲಿ ಮೆಕ್ಯಾನಿಕಲ್ ಇಂಜಿನಿಯರಿAಗ್ ವಿಭಾಗದ ವಿದ್ಯಾರ್ಥಿಗಳಾದ ಪ್ರತೀಕ್ ಸಿ.ಎಸ್. ಮತ್ತು ಪುನೀತ್ ಪ್ರಾರ್ಥಿಸಿದರು. ಪೃಥ್ವಿರಾಜ್ ಅತಿಥಿಗಳನ್ನು ಪರಿಚಯಿಸಿದರು. ಮೈಪಾಲ್ ಸಿಂಗ್ ಸ್ವಾಗತಿಸಿ, ಶಿವಪ್ರಸಾದ್ ವಂದಿಸಿದರು. ಜೀವಿತ ಮತ್ತು ನಿಶಾ ಜೆ. ಕಾರ್ಯಕ್ರಮ ನಿರೂಪಿಸಿದರು. ಈ ಕಾರ್ಯಕ್ರಮದಲ್ಲಿ ಡಾ. ಸುನಿಲ್ ಕುಮಾರ್ ಎಂ., ಪ್ರೊ. ಅಭಿಜ್ಞ ಬಿ.ಬಿ. ಮತ್ತು ಪ್ರೊ. ಸುಧೀರ್ ಕೆ.ವಿ. ಹಾಗೂ ಮೆಕ್ಯಾನಿಕಲ್ ಇಂಜಿನಿಯರಿAಗ್ ವಿಭಾಗದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.