ವೀರಾಜಪೇಟೆ, ಮೇ ೧೮: ವೀರಾಜಪೇಟೆ ನಗರ ವ್ಯಾಪ್ತಿಯ, ವಿಜಯನಗರ ೩ನೇ ಹಂತದಲ್ಲಿ ನೂತನವಾಗಿ ನಿರ್ಮಿಸಿದ ರಸ್ತೆಯನ್ನು ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಉದ್ಘಾಟಿಸಿದರು. ಬಳಿಕ ಮಾತನಾಡಿದ ಶಾಸಕರು, ಈಗಾಗಲೇ ಗ್ರಾಮೀಣ ರಸ್ತೆಗಳು ಸೇರಿದಂತೆ ಪಟ್ಟಣದ ಸುತ್ತಮುತ್ತಲಿನ ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಹಲವು ಗ್ರಾಮಗಳಲ್ಲಿ ಕಾಮಗಾರಿಗಳು ಪೂರ್ಣಗೊಂಡು ಸಾರ್ವಜನಿಕರ ಬಳಕೆಗೆ ಅನುವು ಮಾಡಿಕೊಡಲಾಗಿದೆ.
ವಿಜಯನಗರ ೩ನೇ ಹಂತದಲ್ಲಿ ಜನಸಾಮಾನ್ಯರ ಅನುಕೂಲಕ್ಕೆ ಎಂದು ಉತ್ತಮ ಗುಣಮಟ್ಟದ ಕಾಂಕ್ರೀಟ್ ರಸ್ತೆ ನಿರ್ಮಾಣಗೊಂಡಿದ್ದು, ಇದೀಗ ಸಾರ್ವಜನಿಕರ ಉಪಯೋಗಕ್ಕೆ ಸಿದ್ಧಗೊಂಡಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲಾಗುವುದು ಎಂದರು.
ಈ ಸಂದರ್ಭ ವೀರಾಜಪೇಟೆ ಬ್ಲಾಕ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಪುರಸಭೆ ಅಧ್ಯಕ್ಷೆÀ ದೇಚಮ್ಮ ಕಾಳಪ್ಪ ಹಾಗೂ ಪುರಸಭಾ ಸದಸ್ಯರುಗಳಾದ ಸಿ.ಕೆ. ಪ್ರಥ್ವಿನಾಥ್, ಮಹಮ್ಮದ್ ರಾಫಿ ಹಾಗೂ ಸ್ಥಳೀಯರಾದ ಮರ್ವಿನ್ ಲೋಬೊ, ಮೇಲ್ರಾಯ್ ಲೋಬೊ, ಕೊಡಗು ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಹನೀಫ್ ಸೇರಿದಂತೆ ಕಾಂಗ್ರೆಸ್ ಮುಖಂಡರುಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.