ಮಡಿಕೇರಿ, ಮೇ ೨೧: ಮಳೆಗಾಲದ ಸಂದರ್ಭ ಸ್ಥಳಾಂತರಿಸಲ್ಪಡುವ ಅಪಾಯದಂಚಿನಲ್ಲಿ ಮನೆ ಮಾಡಿಕೊಂಡಿರುವ ನಿವಾಸಿಗಳಿಗೆ ಶಾಶ್ವತ ಪರಿಹಾರ ಕಲ್ಪಿಸಲು ನಗರಸಭೆ ಮುಂದಾಗುವAತೆ ಶಾಸಕ ಡಾ. ಮಂತರ್ ಗೌಡ ಸೂಚಿಸಿದರು.
ಪ್ರಸಕ್ತ ಸಾಲಿನ ಮಳೆಗಾಲವನ್ನು ಎದುರಿಸುವ ನಿಟ್ಟಿನಲ್ಲಿ ಪೂರ್ವ ಸಿದ್ಧತೆ ಕೈಗೊಳ್ಳುವ ಸಂಬAಧ ನಗರಸಭೆಯಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ ಅವರು ಮಾತನಾಡಿದರು. ಮಳೆಗಾಲದ ಸಂದರ್ಭ ಅಪಾಯದಂಚಿನಲ್ಲಿರುವ ಮನೆಗಳ ನಿವಾಸಿಗಳಿಗೆ ನೋಟಿಸ್ ನೀಡುವ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಶಾಸಕರು, ಪ್ರತಿವರ್ಷವೂ ಮಳೆಗಾಲದ ವೇಳೆ ಅಪಾಯದಂಚಿನಲ್ಲಿ ನೆಲೆಸಿರುವವರಿಗೆ ನೋಟಿಸ್ ನೀಡುವುದು; ತಾತ್ಕಾಲಿಕವಾಗಿ ಪರಿಹಾರ ಕೇಂದ್ರಗಳಿಗೆ ಸ್ಥಳಾಂತರ ಮಾಡುವುದು ನಂತರ ಮಳೆಗಾಲ ಮುಗಿದ ಬಳಿಕ ಮತ್ತೆ ಮೊದಲಿದ್ದ ಸ್ಥಳಕ್ಕೆ ಕಳುಹಿಸುವುದು ಮಾಮೂಲಿ ಎಂಬAತಾಗಿದೆ. ಆದ್ದರಿಂದ ಇದಕ್ಕೊಂದು ಶಾಶ್ವತ ಪರಿಹಾರ ಕಂಡುಕೊಳ್ಳಬೇಕು. ಅಪಾಯದಂಚಿನಲ್ಲಿ ವಾಸಿಸುವ ಮಂದಿಗೆ ಶಾಶ್ವತ ವ್ಯವಸ್ಥೆ ಕಲ್ಪಿಸಬೇಕು. ಈ ನಿಟ್ಟಿನಲ್ಲಿ ಯೋಜನೆ ರೂಪಿಸುವಂತೆ ಸಂಬAಧಿಸಿದವರಿಗೆ ಮಂತರ್ ಗೌಡ ಸೂಚನೆ ನೀಡಿದರು.
ಮಳೆ ಈಗಾಗಲೇ ಆರಂಭವಾಗಿದೆ. ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡುವುದು ಬೇಡ ಎಂದ ಶಾಸಕರು ಜನಪ್ರತಿನಿಧಿಗಳೆಲ್ಲರೂ ಒಟ್ಟಾಗಿ ಸಾರ್ವಜನಿಕರಿಗಾಗಿ ಕೆಲಸ ಮಾಡೋಣ ಎಂದು ಹೇಳಿದರು. ನಗರಸಭೆಯ ಜನಪ್ರತಿನಿಧಿಗಳಿಂದ ನಗರದಲ್ಲಿನ ಸಮಸ್ಯೆ ಹಾಗೂ ಪರಿಸ್ಥಿತಿಗಳ ಬಗ್ಗೆ ಮಾಹಿತಿ ಪಡೆದ ಮಂತರ್ ಗೌಡ ಸಮಸ್ಯೆಗಳ ಪರಿಹಾರಕ್ಕೆ ಜನಪ್ರತಿನಿಧಿಗಳಿಗೆ ಅಗತ್ಯ ಸಹಕಾರ ನೀಡುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಮಳೆಗಾಲ ಎದುರಿಸಲು ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ನಗರದ ವಿವಿಧ ಪ್ರದೇಶಗಳಲ್ಲಿ ಹೆಚ್ಚಿನ ಮಳೆ ಸಂದರ್ಭದಲ್ಲಿ ಕಾಳಜಿ ವಹಿಸಬೇಕು. ಯಾವುದೇ ರೀತಿಯ ತೊಂದರೆ ಆಗದಂತೆ ಮುನ್ನೆಚ್ಚರ ವಹಿಸಬೇಕು. ಪರಿಸರ ಶುಚಿತ್ವಕ್ಕೆ ಹೆಚ್ಚಿನ ಒತ್ತು ನೀಡಬೇಕು. ಮಳೆ ನೀರು ಸರಾಗವಾಗಿ ಹರಿಯುವಂತೆ ಮಾಡಬೇಕು. ರಾಜ ಕಾಲುವೆಯಲ್ಲಿ ಕಸ ಕಡ್ಡಿ ಸೇರದಂತೆ ಕಾಲ ಕಾಲಕ್ಕೆ ಸ್ವಚ್ಛಗೊಳಿಸಬೇಕು. ಸಹಾಯವಾಣಿ ಆರಂಭ ಹೀಗೆ ಮುಂಗಾರು ಸಂಬAಧ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು.
ರಾಜಾಸೀಟು ಮತ್ತು ಜನರಲ್ ತಿಮ್ಮಯ್ಯ ಮುಖ್ಯರಸ್ತೆ ಅಭಿವೃದ್ಧಿಪಡಿಸಲು ಮುಂದಾಗಲಾಗಿದೆ. ಆ ನಿಟ್ಟಿನಲ್ಲಿ ಪಾದಚಾರಿ ದಾರಿ, ಚರಂಡಿ, ವಾಹನಗಳ ಪಾರ್ಕಿಂಗ್ ಹೀಗೆ ಎಲ್ಲವನ್ನೂ ಒಳಗೊಂಡ ರಸ್ತೆ ಅಭಿವೃದ್ಧಿಪಡಿಸಲು ಮುಂದಾಗಲಾಗಿದೆ ಎಂದು ಶಾಸಕರು ತಿಳಿಸಿದರು.
ಫಾರ್ಮ್ ನಂ.೩ ನ್ನು ಸರಿಯಾಗಿ ನಿರ್ವಹಣೆ ಮಾಡುವಂತೆ ಶಾಸಕರು ಸೂಚಿಸಿದರು.
ನಗರಸಭೆ ಅಧ್ಯಕ್ಷೆ ಪಿ. ಕಲಾವತಿ, ಉಪಾಧ್ಯಕ್ಷ ಮಹೇಶ್ ಜೈನಿ ಅವರು ಹಲವು ವಿಚಾರಗಳ ಕುರಿತು ಪ್ರಸ್ತಾಪಿಸಿದರು.