ಮಡಿಕೇರಿ, ಮೇ ೨೧: ತೆರವಾಗಿರುವ ತಿತಿಮತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೋಕ್ಯ ಕ್ಷೇತ್ರದ ಸದಸ್ಯ ಸ್ಥಾನಕ್ಕೆ ಉಪಚುನಾವಣೆ ನಡೆಯುತ್ತಿರುವ ಹಿನ್ನೆಲೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಶಸ್ತಾçಸ್ತç ಠೇವಣಿ ಹಾಗೂ ಮದ್ಯ ಮಾರಾಟ ನಿಷೇಧಿಸಿ ಆದೇಶಿಸಿದ್ದಾರೆ.

ಉಪಚುನಾವಣೆಯನ್ನು ಪಾರದರ್ಶಕ ಹಾಗು ಶಾಂತಿಯುತವಾಗಿ ನಡೆಸುವ ಉದ್ದೇಶದಿಂದ ತಿತಿಮತಿ ಗ್ರಾ.ಪಂ. ವ್ಯಾಪ್ತಿಯ ಪರವಾನಗಿ ಹೊಂದಿರುವ ಶಸ್ತಾçಸ್ತçಗಳನ್ನು, ವಿನಾಯಿತಿ ಹೊಂದಿರುವ ಪೈಕಿ ಕ್ರಿಮಿನಲ್, ರೌಡಿಶೀಟರ್, ಕೋಮು ಗಲಭೆ ಹಿನ್ನೆಲೆಯುಳ್ಳವರು, ನ್ಯಾಯಾಲಯದಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ವ್ಯಕ್ತಿಗಳು ಕೂಡಲೇ ಶಸ್ತಾçಸ್ತçಗಳನ್ನು ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವ ತನಕ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಠೇವಣಿ ಇಡುವಂತೆ ಸೂಚಿಸಿದ್ದಾರೆ.

ಇದರೊಂದಿಗೆ ತಿತಿಮತಿ ಗ್ರಾ.ಪಂ. ವ್ಯಾಪ್ತಿಯಲ್ಲಿ ತಾ. ೨೩ರ ಸಂಜೆ ೫ ಗಂಟೆ ಯಿಂದ ತಾ. ೨೫ರ ಮಧ್ಯರಾತ್ರಿ ೧೨ ಗಂಟೆ ತನಕ ಎಲ್ಲಾ ವಿಧದ ಮದ್ಯ ತಯಾರಿಕೆ, ಸಾಗಾಣಿಕೆ, ಶೇಖರಣೆ ಮತ್ತು ಎಲ್ಲಾ ರೀತಿಯ ಅಂಗಡಿ, ಬಾರ್, ರೆಸ್ಟೋರೆಂಟ್, ಕ್ಲಬ್, ಹೊಟೇಲ್ ಮುಂತಾದವುಗಳಲ್ಲಿ ಮದ್ಯ ಮಾರಾಟ ನಿಷೇಧಿಸಿದ್ದಾರೆ.

ಸಂತೆ ನಿಷೇಧ

ತಾ. ೨೫ ರಂದು ತಿತಿಮತಿ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಸಂತೆ, ಜಾತ್ರೆಯನ್ನು ಜಿಲ್ಲಾಧಿಕಾರಿ ವೆಂಕಟ್ ರಾಜಾ ನಿರ್ಬಂಧಿಸಿ ಆದೇಶಿಸಿದ್ದಾರೆ.