ಮಡಿಕೇರಿ, ಮೇ ೨೧: ಪೌರಾಣಿಕ ಹಿನ್ನೆಲೆಯ ಬೇಡು ಹಬ್ಬವನ್ನು ದುರ್ಬಳಕೆ ಮಾಡಿಕೊಂಡು ಬಲವಂತವಾಗಿ ವಾಹನ ಅಡ್ಡಗಟ್ಟಿ, ಹಣ ವಸೂಲಿ ಮಾಡುವುದು ಕಂಡುಬAದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ಇಲಾಖೆ ಪ್ರಕಟಣೆ ಮೂಲಕ ಎಚ್ಚರಿಸಿದೆ.

ದೇವರಪುರದಲ್ಲಿ ನಡೆಯುವ ಬೇಡು ಹಬ್ಬದ ಹಿನ್ನೆಲೆ ವೇಷಧಾರಿಗಳಾಗಿ ಭಕ್ತರು ಕುಣಿಯುತ್ತ ಹಬ್ಬ ಆಚರಿಸುತ್ತಿರುವುದು ವಾಡಿಕೆಯಾಗಿದೆ. ಆದರೆ, ಕೆಲವರು ಇದನ್ನು ದುರುಪಯೋಗಪಡಿಸಿಕೊಂಡು ಮದ್ಯಪಾನ ಮಾಡಿಕೊಂಡು ಸಾರ್ವಜನಿಕ ಸ್ಥಳದಲ್ಲಿ ಸಾರ್ವಜನಿಕರನ್ನು ಅವಾಚ್ಯ ಶಬ್ದಗಳಿಂದ ಬೈದು, ವಾಹನವನ್ನು ಬಲವಂತವಾಗಿ ಅಡ್ಡಗಟ್ಟಿ, ದೇವರ ಹೆಸರಿನಲ್ಲಿ ಬಲವಂತವಾಗಿ ಹಣ ವಸೂಲಿ ಮಾಡುವುದು ಕಂಡುಬರುತ್ತಿದೆ. ಇದರಿಂದ ಸಾರ್ವಜನಿಕ ಮತ್ತು ವಾಹನ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದೆ. ಈ ನಿಟ್ಟಿನಲ್ಲಿ ಪೊಲೀಸ್ ಭದ್ರತೆ ನೀಡಲಾಗಿದೆ. ಬಲವಂತವಾಗಿ ವಾಹನ ತಡೆದು ಹಣಕ್ಕಾಗಿ ಒತ್ತಾಯ ಮಾಡಿ ತೊಂದರೆ ನೀಡಿದರೆ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ಎಚ್ಚರಿಸಿದೆ.