ಕೂಡಿಗೆ, ಮೇ ೨೧: ಕೊಣನೂರು-ಮಾಕುಟ್ಟ ರಾಜ್ಯ ಹೆದ್ದಾರಿ ೯೧ ರ ಕೂಡಿಗೆ-ಕುಶಾಲನಗರ ರಾಜ್ಯ ಹೆದ್ದಾರಿಯ ಮರು ಡಾಂಬರೀಕರಣ ಸೇರಿದಂತೆ ಸಣ್ಣ ಪ್ರಮಾಣದ ಮೋರಿ ನಿರ್ಮಾಣದ ರೂ. ೪.೫೦ ಕೋಟಿ ವೆಚ್ಚದ ಕಾಮಗಾರಿಗೆ ಕೂಡುಮಂಗಳೂರು ಗ್ರಾಮದ ಹತ್ತಿರ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಭೂಮಿಪೂಜೆ ಸಲ್ಲಿಸಿ ಚಾಲನೆ ನೀಡಿದರು.

ನಂತರ ನಡೆದ ಸಮಾರಂಭದಲ್ಲಿ ಅಧ್ಯಕ್ಷತೆಯನ್ನು ವಹಿಸಿದ್ದ ಅವರು ಮಾತನಾಡಿ, ಪ್ರಥಮವಾಗಿ ಕ್ಷೇತ್ರದ ವ್ಯಾಪ್ತಿಯಲ್ಲಿ ಅಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ಜಾರಿಗೆತಂದು ಅದರ ಮೂಲಕ ಮೂಲಭೂತ ಸೌಕರ್ಯಗಳ ಜೊತೆಯಲ್ಲಿ ಅಭಿವೃದ್ಧಿಗೆ ಚಿಂತನೆ ಹರಿಸಲಾಗುವುದು.

ಕೂಡಿಗೆ-ಕುಶಾಲನಗರ ರಸ್ತೆಯಲ್ಲಿ ವಾಹನಗಳ ದಟ್ಟಣೆಯು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ಲೋಕೋಪಯೋಗಿ ಇಲಾಖೆಯ ವತಿಯಿಂದ ರೂ. ೪.೫೦ ಕೋಟಿ ವೆಚ್ಚದ ರಸ್ತೆಯ ಮರು ಡಾಂಬರೀಕರಣದ ಭೂಮಿಪೂಜೆ ನೆರವೇರಿಸಲಾಗಿದೆ. ಗುಣಮಟ್ಟದ ಕಾಮಗಾರಿಯನ್ನು ನಿರ್ವಹಣೆ ಮಾಡಲು ಸಂಬAಧಿಸಿದAತೆ ಇಲಾಖೆಯವರಿಗೆ ಮತ್ತು ಗುತ್ತಿಗೆದಾರರಿಗೆ ಸೂಚನೆ ನೀಡಿದರು.

ಈ ಸಂದರ್ಭ ಕುಶಾಲನಗರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್ ಮಾತನಾಡಿ ಮಾಹಿತಿಯನ್ನು ನೀಡಿದರು. ವೇದಿಕೆಯಲ್ಲಿ ಕುಶಾಲನಗರ ಪುರಸಭೆ ಅಧ್ಯಕ್ಷೆ ಜಯಲಕ್ಷಿö್ಮ ಚಂದ್ರ, ಕೂಡಿಗೆ ಗ್ರಾಮ ಪಂಚಾಯಿತಿ ಸದಸ್ಯ ಟಿ.ಪಿ. ಹಮೀದ್, ಕೂಡುಮಂಗಳೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ವಿ. ಸಣ್ಣಪ್ಪ, ಸದಸ್ಯರಾದ ಸುರೇಶ್, ಸಾಗರ್, ಈರಪ್ಪ, ಕುಶಾಲನಗರ ಕಾಂಗ್ರೆಸ್ ನಗರ ಅಧ್ಯಕ್ಷ ಸೋನ್ ವಿಕ್ಟರ್, ತಾಲೂಕು ಲೋಕೋಪ ಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಅಭಿಯಂತರ ಇಂಜಿನಿಯರ್ ವೆಂಕಟೇಶ ನಾಯಕ್ ಸೇರಿದಂತೆ ಕಾಂಗ್ರೆಸ್ ಪಕ್ಷದ ವಿವಿಧ ಘಟಕದ ಪದಾಧಿಕಾರಿಗಳು, ಸಾರ್ವಜನಿಕರು ಹಾಜರಿದ್ದರು. ಸಭೆಯಲ್ಲಿ ಕಾವ್ಯ ಪ್ರಾರ್ಥಿಸಿ, ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂತೋಷ್ ಸ್ವಾಗತಿಸಿ, ವಂದಿಸಿದರು.