ಮಡಿಕೇರಿ, ಮೇ ೨೧: ಹಸಿವು ಮುಕ್ತ ಸಮಾಜ ನಿರ್ಮಾಣಕ್ಕಾಗಿ ಜಾರಿಗೆ ಬಂದಿರುವ ಇಂದಿರಾ ಕ್ಯಾಂಟೀನ್ ಯೋಜನೆ ಸದುಪಯೋಗವಾಗಬೇಕು ಎಂದು ಮಡಿಕೇರಿ ಶಾಸಕ ಡಾ. ಮಂತರ್ಗೌಡ ಆಶಯ ವ್ಯಕ್ತಪಡಿಸಿದರು.
ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ ನೂತನ ಇಂದಿರಾ ಕ್ಯಾಂಟೀನನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು. ಮಡಿಕೇರಿಯ ನೂತನ ಖಾಸಗಿ ಬಸ್ ನಿಲ್ದಾಣದಲ್ಲಿರುವ ಇಂದಿರಾ ಕ್ಯಾಂಟೀನ್ನಿAದ ಸಾರ್ವಜನಿಕರಿಗೆ ಪರಿಣಾಮಕಾರಿಯಾಗಿ ಅನುಕೂಲವಾಗುತ್ತಿಲ್ಲ ಎಂಬ ಕಾರಣಕ್ಕಾಗಿ ಸಾರ್ವಜನಿಕ ಓಡಾಟ ಹಾಗೂ ಜನದಟ್ಟಣೆ ಹೆಚ್ಚಾಗಿರುವ ಜಿಲ್ಲಾಸ್ಪತ್ರೆಯ ಆವರಣದಲ್ಲಿ ಕ್ಯಾಂಟೀನ್ ಸ್ಥಾಪನೆಗೆ ಸಂಬAಧಿಸಿದ ಸಚಿವರಿಗೆ ಮನವಿ ಮಾಡಿದ್ದ ಹಿನ್ನೆಲೆಯಲ್ಲಿ ಇದೀಗ ಸರ್ಕಾರದಿಂದ ರೂ. ೫೦ ರಿಂದ ೫೫ ಲಕ್ಷದ ಕಟ್ಟಡ ಜಿಲ್ಲಾಸ್ಪತ್ರೆ ಆವರಣದಲ್ಲಿ ಮೆಡಿಕಲ್ ಕಾಲೇಜಿನ ಡೀನ್ ಲೋಕೇಶ್ ಅವರ ಸಹಕಾರದೊಂದಿಗೆ ನಿರ್ಮಾಣ ಗೊಂಡಿದೆ.
ಸೋಮವಾರಪೇಟೆಯಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ
ಸೋಮವಾರಪೇಟೆ, ಮೇ ೨೧: ಕಳೆದ ೮ ವರ್ಷಗಳ ಹಿಂದೆ ತಳಪಾಯ ಹಾಕಿದ ಇಂದಿರಾ ಕ್ಯಾಂಟೀನ್ ಕಾಮಗಾರಿ ಇದೀಗ ಪೂರ್ಣಗೊಂಡಿದ್ದು, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗೆ ಶಾಸಕ ಡಾ. ಮಂತರ್ ಗೌಡ ಚಾಲನೆ ನೀಡಿದರು.
ರಾಜ್ಯ ನಗರಾಭಿವೃದ್ಧಿ ಮತ್ತು ಪೌರಾಡಳಿತ ಇಲಾಖೆ ವತಿಯಿಂದ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸಿ.ಕೆ. ಸುಬ್ಬಯ್ಯ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಿರುವ ಇಂದಿರಾ ಕ್ಯಾಂಟೀನನ್ನು ಶಾಸಕರು ಲೋಕಾರ್ಪಣೆಗೊಳಿಸಿ ಮಾತನಾಡಿ, ಹಸಿವು ಮುಕ್ತ ಸಮಾಜ ನಿರ್ಮಾಣಕ್ಕೆ
(ಮೊದಲ ಪುಟದಿಂದ) ಇದರಿಂದಾಗಿ ಬಡವರಿಗೆ, ರೋಗಿಗಳಿಗೆ, ಸಾರ್ವಜನಿಕರಿಗೆ, ಕಾರ್ಮಿಕ ವರ್ಗಕ್ಕೆ, ಆಟೋ ಚಾಲಕರಿಗೆ ಸೇರಿದಂತೆ ಬಹಳಷ್ಟು ಮಂದಿಗೆ ಅನುಕೂಲವಾಗಲಿದೆ ಎಂದು ಮಂತರ್ಗೌಡ ಅಭಿಪ್ರಾಯಪಟ್ಟರು. ಇಂದಿರಾ ಕ್ಯಾಂಟೀನ್ನಲ್ಲಿ ಮೂರು ಹೊತ್ತು ತಲಾ ಮುನ್ನೂರು ಊಟ ವಿತರಿಸಲಾಗುತ್ತದೆ ಎಂದು ಅವರು ಹೇಳಿದರು. ಇಂದಿರಾ ಕ್ಯಾಂಟೀನ್ ಕಟ್ಟಡದ ಮೇಲೆ ಮಳೆಗಾಲದ ಸಂದರ್ಭ ನೀರುನಿಲ್ಲದ ರೀತಿಯಲ್ಲಿ ಅಗತ್ಯ ಕ್ರಮವಹಿಸುವಂತೆ ಸಂಬAಧಿಸಿದವರಿಗೆ ಸೂಚಿಸಿದರು. ಇಂದಿರಾ ಕ್ಯಾಂಟೀನ್ನಲ್ಲಿ ಪ್ರತಿಯೊಬ್ಬರೂ ಶುಚಿತ್ವ ಕಾಪಾಡಿಕೊಳ್ಳಬೇಕೆಂದು ಸಲಹೆಯಿತ್ತರು.
ಇದೇ ಸಂದರ್ಭ ಸಿಎಸ್ಆರ್ ಅನುದಾನದಲ್ಲಿ ಮೆಡಿಕಲ್ ಕಾಲೇಜಿಗೆ ಮಂಜೂರಾಗಿರುವ ತಲಾ ರೂ. ೨೭ ಲಕ್ಷದ ಎರಡು ಬಸ್ಗಳಿಗೂ ಚಾಲನೆ ನೀಡಿದ ಶಾಸಕ ಮಂತರ್ಗೌಡ ಈ ವಾಹನಗಳಿಂದಾಗಿ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದರು.
ಜಿಲ್ಲಾಧಿಕಾರಿ ಕಚೇರಿ ತಡೆಗೋಡೆ ಸಂಬAಧ ಇನ್ನಷ್ಟು ಹೆಚ್ಚಿನ ಅನುದಾನ ನೀಡಿದರೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಕಾಮಗಾರಿಗೆ ಸಂಬAಧಿಸಿದವರು ಪ್ರತಿಕ್ರಿಯಿಸಿದ್ದಾರೆ. ಆದರೆ ಹೆಚ್ಚಿನ ಅನುದಾನ ನೀಡಿಯೂ ಕಾಮಗಾರಿ ಮತ್ತೊಮ್ಮೆ ಕಳಪೆಯಾದರೆ ಬೀಳುವ ಸ್ಥಿತಿಗೆ ತಲುಪಿದರೆ ಎಂಬ ಆತಂಕವಿದೆ. ಲೋಕೋಪಯೋಗಿ ಇಲಾಖೆ ಜವಾಬ್ದಾರಿ ವಹಿಸಿಕೊಂಡಿದೆ ಎಂದು ಮಂತರ್ಗೌಡ ತಿಳಿಸಿದರು.
ನಗರಸಭೆ ಅಧ್ಯಕ್ಷೆ ಪಿ. ಕಲಾವತಿ, ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ, ನಗರಸಭೆ ಉಪಾಧ್ಯಕ್ಷ ಮಹೇಶ್ ಜೈನಿ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಜೇಶ್ ಯಲ್ಲಪ್ಪ, ಗ್ಯಾರಂಟಿ ಯೋಜನೆಗಳ ತಾಲೂಕು ಅನುಷ್ಠಾನ ಸಮಿತಿ ಅಧ್ಯಕ್ಷ ಮಂದ್ರೀರ ಮೋಹನ್ ದಾಸ್, ನಗರಸಭೆ ಸದಸ್ಯರಾದ ಮುಸ್ತಫಾ ಎಂ.ಎ., ಅರುಣ್ ಶೆಟ್ಟಿ, ಮನ್ಸೂರ್ ಅಲಿ, ಬಿ.ಸಿ. ಜಗದೀಶ್, ಜುಲೈಕಾಬಿ, ಮುದ್ದುರಾಜು ಬಿ.ಎನ್., ಪೌರಾಯುಕ್ತ ಹೆಚ್.ಆರ್. ರಮೇಶ್, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಬಿ. ಸತೀಶ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ. ಲೋಕೇಶ್, ಜಿಲ್ಲಾ ಸರ್ಜನ್ ಡಾ. ನಂಜುAಡಯ್ಯ, ಸ್ಥಾನಿಕ ವೈದ್ಯಾಧಿಕಾರಿ ಡಾ. ಸತೀಶ್, ವೈದ್ಯಾಧಿಕಾರಿಗಳಾದ ಡಾ. ಪುರುಷೋತ್ತಮ, ಡಾ. ಶ್ವೇತಾ, ಇತರರು ಇದ್ದರು.