ಸೋಮವಾರಪೇಟೆ, ಮೇ ೨೨: ಇಲ್ಲಿನ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಚನ್ನಬಸಪ್ಪ ಸಭಾಂಗಣದಲ್ಲಿ ಪಿಎಂಶ್ರೀ ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಬಿಇಓ ಭಾಗ್ಯಮ್ಮ ಉದ್ಘಾಟಿಸಿದರು. ನಂತರ ಮಾತನಾಡಿ, ಸರ್ಕಾರದಿಂದ ಸಿಗುವ ಎಲ್ಲಾ ಸವಲತ್ತುಗಳನ್ನು ಪೋಷಕರು ಪಡೆದುಕೊಂಡು, ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಬೇಕೆಂದು ಹೇಳಿದರು.

ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಹೇಮಂತ್ ಅವರು ಪಿಎಂಶ್ರೀ ಶಾಲೆಗೆ ಸರ್ಕಾರದಿಂದ ಸಿಗುವಂತಹ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಜಿ.ಕೆ. ದಿನೇಶ್ ವಹಿಸಿದ್ದರು.

ವೇದಿಕೆಯಲ್ಲಿ ಸೋಮವಾರಪೇಟೆ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಬೆಳ್ಳಿಯಪ್ಪ, ಐಗೂರು ಪದವಿಪೂರ್ವ ಕಾಲೇಜಿನ ಪ್ರಬಾರ ಪ್ರಾಂಶುಪಾಲ ಉಮೇಶ್, ಸೋಮವಾರಪೇಟೆ ಸರ್ಕಾರಿ ಪ್ರೌಢಶಾಲೆಯ ಪ್ರಬಾರ ಮುಖ್ಯ ಶಿಕ್ಷಕಿ ಹೇಮಲತಾ, ಪೋಷಕರ ಸಮಿತಿಯ ಅಧ್ಯಕ್ಷ ಅಯ್ಯಪ್ಪ, ಕಲ್ಕಂದೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಉಮೇಶ್, ಅಜೀಂ ಪ್ರೇಮ್ ಜಿ ಫೌಂಡೇಶನ್ ಎನ್‌ಜಿಓ ರೋಹಿತ್, ಚೌಡ್ಲು ಪಂಚಾಯಿತಿ ಸದಸ್ಯ ಮಹೇಶ್ ತಿಮ್ಮಯ್ಯ ಇದ್ದರು.

ಕಾರ್ಯಕ್ರಮದ ಉದ್ದೇಶ ಹಾಗೂ ಸವಲತ್ತುಗಳ ಕುರಿತು ದೈಹಿಕ ಶಿಕ್ಷಣ ಶಿಕ್ಷಕ ನಾಗೇಶ್‌ರವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಶಾಲೆಯ ಸಹ ಶಿಕ್ಷಕಿಯರಾದ ಕೆ.ಟಿ. ಚಂದ್ರಕಲಾ, ರಾಧ, ಸವಿತಾ, ಅಬಿದಾ ಬಾನು ಕಾರ್ಯಕ್ರಮ ನಿರ್ವಹಿಸಿದರು.