ಪೊನ್ನಂಪೇಟೆ, ಮೇ ೨೨: ಗೋಣಿಕೊಪ್ಪಲು ಕಾವೇರಿ ಕಾಲೇಜಿನ ಪದವಿ ವಿದ್ಯಾರ್ಥಿಗಳ ಪೋಷಕರು ಮತ್ತು ಬೋಧಕ ಸಭೆ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕಾವೇರಿ ಎಜುಕೇಷನ್ ಸೊಸೈಟಿ ಅಧ್ಯಕ್ಷ ಎಂ.ಎಸ್. ಮುತ್ತಣ್ಣ ಮಾತನಾಡಿ, ನಮ್ಮ ಶಿಕ್ಷಣ ಸಂಸ್ಥೆಯ ವತಿಯಿಂದ ವಿದ್ಯಾರ್ಥಿಗಳ ಸರ್ವ ತೋಮುಖ ಬೆಳವಣಿಗೆಗೆ ಶ್ರಮಿಸಲಾಗುತ್ತಿದೆ. ಪೋಷಕರೂ ಕೂಡ ಮಕ್ಕಳ ಶಿಕ್ಷಣದ ಕಡೆಗೆ ಹೆಚ್ಚಿನ ಮುತುವರ್ಜಿ ವಹಿಸುವ ಮೂಲಕ ಅವರು ತಮ್ಮ ಭವಿಷ್ಯವನ್ನು ಉತ್ತಮವಾಗಿ ರೂಪಿಸಿಕೊಳ್ಳುವಂತೆ ಮಾಡಬೇಕು ಎಂದರು.
ಮತ್ತೊಬ್ಬರು ಅತಿಥಿ ಕಾವೇರಿ ಎಜುಕೇಷನ್ ಸೊಸೈಟಿ ನಿರ್ದೇಶಕ ಕೆ.ಪಿ. ಅಚ್ಚಯ್ಯ ಮಾತನಾಡಿ, ಮಕ್ಕಳು ಪೋಷಕರನ್ನು ಅನುಸರಿಸುತ್ತಾರೆ. ಆದ್ದರಿಂದ ಪೋಷಕರು ಮಕ್ಕಳೆದುರು ಯಾವುದೇ ರೀತಿಯ ಕೆಟ್ಟ ನಡವಳಿಕೆಯನ್ನು ತೋರ್ಪಡಿಸಿ ಕೊಳ್ಳಬಾರದು.
ಕೆಲವು ಮಕ್ಕಳು ಇತ್ತೀಚಿನ ದಿನಗಳಲ್ಲಿ ದುಶ್ಚಟಗಳಿಗೆ ದಾಸರಾಗುತ್ತಿದ್ದಾರೆ. ಆದ್ದರಿಂದ ಪೋಷಕರು ತಮ್ಮ ಮಕ್ಕಳ ದಿನಚರಿಯ ಬಗ್ಗೆ ಗಮನವಿಡಬೇಕು. ಅತಿಯಾದ ಮೊಬೈಲ್ ಬಳಕೆಗೆ ಕಡಿವಾಣ ಹಾಕಬೇಕು ಎಂದರು.
ಅಧ್ಯಕ್ಷತೆ ವಹಿಸಿಕೊಂಡಿದ್ದ ಪ್ರಾಂಶುಪಾಲ ಡಾ. ಎಂ.ಬಿ. ಕಾವೇರಿಯಪ್ಪ ಮಾತನಾಡಿ, ಕಾಲೇಜಿನಲ್ಲಿ ಶಿಕ್ಷಣದ ಜೊತೆಗೆ ಕ್ರೀಡೆ, ಎನ್ಸಿಸಿ, ಎನ್ಎಸ್ಎಸ್, ರೋವರ್ಸ್ ರೆಂಜರ್ಸ್ ನಲ್ಲಿಯೂ ವಿದ್ಯಾರ್ಥಿಗಳ ಬೆಳವಣಿಗೆ ಅವಕಾಶ ಮಾಡಿಕೊಟ್ಟಿದ್ದು, ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಾಧನೆ ಮಾಡುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಲಾಗುತ್ತಿದೆ. ಗ್ರಾಮೀಣ ಭಾಗದಿಂದ ಬರುವ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕಾಲೇಜು ಬಸ್ ವ್ಯವಸ್ಥೆಯನ್ನು ಮಾಡಲಾಗಿದ್ದು ವಿದ್ಯಾರ್ಥಿಗಳು ಸದುಪಯೋಗಪಡಿಸಿ ಕೊಳ್ಳುವಂತೆ ತಿಳಿಸಿದರು.
ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳ ಪೋಷಕರು ಸಭೆಗೆ ಆಗಮಿಸಿ ಕಾಲೇಜಿನ ಶಿಸ್ತು ಹಾಗೂ ಶಿಕ್ಷಣ ವ್ಯವಸ್ಥೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಕೆಲವು ಸಲಹೆ ಗಳನ್ನು ನೀಡಿ, ತಮ್ಮ ಮಕ್ಕಳ ಶೈಕ್ಷಣಿಕ ಪ್ರಗತಿ ಬಗ್ಗೆ ಮಾಹಿತಿ ಪಡೆದರು. ಈ ಸಂದರ್ಭ ಉಪ ಪ್ರಾಂಶುಪಾಲೆ ಪ್ರೊ. ಎಂ.ಎಸ್. ಭಾರತಿ, ಐಕ್ಯೂಎಸಿ ಸಂಚಾಲಕಿ ಡಾ. ನಯನ ತಮ್ಮಯ್ಯ, ಪೋಷಕರ ಹಾಗೂ ಅಧ್ಯಾಪಕರ ಸಂಘದ ಸಂಚಾಲಕಿ ಡಾ. ರೇವತಿ ಪೂವಯ್ಯ, ಪೋಷಕರ ಮತ್ತು ಅಧ್ಯಾಪಕರ ಸಂಘದ ಉಪಾಧ್ಯಕ್ಷೆ ಧನಲಕ್ಷಿö್ಮ ಎಸ್., ಜಂಟಿ ಕಾರ್ಯದರ್ಶಿಗಳಾದ ಮೀನ ಎಂ.ಬಿ., ಎಂ.ಎA. ಭವಾನಿ, ಕೆ.ಕೆ. ಪೂಣಚ್ಚ, ಖಜಾಂಚಿ ಗಾಯತ್ರಿ ದೇವಯ್ಯ ಇನ್ನಿತರರು ಹಾಜರಿದ್ದರು.