ವೀರಾಜಪೇಟೆ, ಮೆ. ೨೩ : ಭಾರಿ ಮಳೆಯಿಂದ ದೇಗುಲದ ಬೃಹತ್ ತಡೆಗೋಡೆ ಕುಸಿದು ಬಿದ್ದ ಘಟನೆ ಮಗ್ಗುಲ ಗ್ರಾಮದಲ್ಲಿ ನಡೆದಿದೆ.
ಮಗ್ಗುಲ ಗ್ರಾಮದ ಶ್ರೀ ಶನೀಶ್ವರ ಸ್ವಾಮಿ ದೇವಾಲಯದ ಬೃಹತ್ ತಡೆಗೋಡೆ ಭಾರಿ ಮಳೆಗೆ ಕುಸಿದು ಬಿದ್ದಿದೆ. ೨೦೨೪ ರಲ್ಲಿ ದೇವಾಲಯದ ಅಡಳಿತ ಮಂಡಳಿಯು ಸುಮಾರು ೫ ಲಕ್ಷದ ವೆಚ್ಚದಲ್ಲಿ ಬೃಹತ್ ಕಾಂಕ್ರೀಟ್ ತಡೆಗೋಡೆಯನ್ನು ನಿರ್ಮಾಣ ಮಾಡಿತ್ತು. ಧಾರಾಕಾರ ಮಳೆಯಿಂದ ಮಳೆ ನೀರು ಸಂಗ್ರಹಗೊAಡು ಬೆಳಿಗ್ಗೆ ೧೧.೩೦ರ ಸಮಯದಲ್ಲಿ ತಡೆಗೋಡೆ ಕುಸಿದು ಬಿದ್ದಿದೆ. ಗೋಡೆಯ ಅವಶೇಷಗಳು ಗ್ರಾಮಕ್ಕೆ ತೆರಳುವ ರಸ್ತೆಗೆ ಅಡ್ಡಲಾಗಿ ಬಿದ್ದಿತ್ತು. ದೇಗುಲದ ಆಡಳಿತ ಮಂಡಳಿ ಜೆ.ಸಿ.ಬಿ. ಯಂತ್ರದ ಸಹಾಯದಿಂದ ತೆರವುಗೊಳಿಸಿತು.
ಈ ಸಂದÀರ್ಭದಲ್ಲಿ ಪತ್ರಿಕೆಯೊಂದಿಗೆ ಮಾತನಾಡಿದ ದೇವಾಲಯದ ಅಧ್ಯಕ್ಷ ಚೋಕಂಡ ರಮೇಶ್ ಮಂದಣ್ಣ, ಮಳೆಯಿಂದಾಗಿ ದೇವಾಲಯದ ತಡೆಗೋಡೆ ಕುಸಿದು ಬಿದ್ದಿದೆ. ಇದರಿಂದ ದೇವಾಲಯಕ್ಕೆ ಅಪಾರ ಪ್ರಮಾಣದಲ್ಲಿ ನಷ್ಟ ಉಂಟಾಗಿದೆ. ಸರ್ಕಾರವು ಮಳೆ ಹಾನಿ ಪರಿಹಾರ ಯೋಜನೆ ಅಡಿಯಲ್ಲಿ ಪರಿಹಾರ ದೊರಕಿಸಿಕೊಡುವಂತೆ ಮನವಿ ಮಾಡಿದರು.
ವೀರಾಜಪೇಟೆ ನಗರ ಪುರಸಭೆಯ ಮುಖ್ಯಾಧಿಕಾರಿ ನಾಚಪ್ಪ, ಅಧ್ಯಕ್ಷ್ಷೆ ದೇಚಮ್ಮ ಕಾಳಪ್ಪ ಮತ್ತು ಸದಸ್ಯ ಡಿ.ಪಿ. ರಾಜೇಶ್ ಪದ್ಮನಾಭ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.