ಮಡಿಕೇರಿ, ಮೇ ೨೩: ಮಡಿಕೇರಿ ವಕೀಲರ ಸಂಘದ ಅಧ್ಯಕ್ಷ ಎಂ. ಎ. ನಿರಂಜನ್ ಮತ್ತು ಸೌಮ್ಯ ದಂಪತಿ ಪುತ್ರ ಮೈಸೂರಿನ ಶ್ರೀ ರಾಮಕೃಷ್ಣ ವಿದ್ಯಾಲಯದಲ್ಲಿ ವ್ಯಾಸಂಗ ಮಾಡಿದ ತನ್ಮಯ್‌ಗೆ ಇತ್ತೀಚೆಗೆ ಪ್ರಕಟಗೊಂಡ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶದಲ್ಲಿ ೬೨೫ ಕ್ಕೆ ೬೨೨ ಅಂಕ ದೊರಕಿತ್ತು. ಈ ಮೂಲಕ ರಾಜ್ಯಕ್ಕೆ ನಾಲ್ಕನೇ ಸ್ಥಾನವನ್ನು ತನ್ಮಯ್ ಗಳಿಸಿದ್ದ. ನಂತರ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದ ತನ್ಮಯ್, ಮರು ಮೌಲ್ಯಮಾಪನದಲ್ಲಿ ೬೨೫ ಕ್ಕೆ ೬೨೫ ಅಂಕ ಗಳಿಸಿ ಸಾಧನೆ ಗೈದಿದ್ದಾನೆ. ಈ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ಕೀರ್ತಿಗೆ ಪಾತ್ರನಾಗಿದ್ದಾನೆ.