ನಟ ದರ್ಶನ್ ದಂಪತಿಗೆ ಸಮನ್ಸ್
ಬೆಂಗಳೂರು, ಮೇ ೨೩: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ದೊರೆತು ಇತ್ತೀಚೆಗಷ್ಟೇ ೨೨ ವರ್ಷದ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡ ಚಾಲೆಂಜಿAಗ್ ಸ್ಟಾರ್ ದರ್ಶನ್ ಮತ್ತು ಅವರ ಪತ್ನಿ ವಿಜಯಲಕ್ಷಿö್ಮಗೆ ಸಂಕಷ್ಟ ಎದುರಾಗಿದೆ. ದರ್ಶನ್ ತಮ್ಮ ಮೈಸೂರು ಫಾರಂಹೌಸ್ನಲ್ಲಿ ವಿದೇಶಿ ಬಾತುಕೋಳಿ ಸಾಕಿದ್ದಕ್ಕೆ ಈ ಹಿಂದೆ ಪ್ರಕರಣ ದಾಖಲಾಗಿತ್ತು. ಇದೇ ಪ್ರಕರಣಕ್ಕೆ ಸಂಬAಧಿಸಿದAತೆ ಮೈಸೂರಿನ ನರಸೀಪುರ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ‘ಬಾರ್ ಹೆಡೆಡ್ ಗೂಸ್’ ಎಂಬ ಬಾತುಕೋಳಿಗಳನ್ನು ಸಾಕಿದ್ದ ದರ್ಶನ್ ಅವರ ಮೈಸೂರಿನ ಕೆಂಪಯ್ಯನ ಹುಂಡಿಯಲ್ಲಿರುವ ತೋಟದ ಮೇಲೆ ಅರಣ್ಯಾಧಿಕಾರಿಗಳು ದಾಳಿ ಮಾಡಿದ್ದರು. ಈ ವೇಳೆ ವಿದೇಶಿ ಪ್ರಭೇದದ ಬಾತು ಕೋಳಿ ವಶಕ್ಕೆ ಪಡೆದಿದ್ದರು. ಪ್ರಕರಣದ ವಿಚಾರಣೆಯು ಮೈಸೂರು ಜಿಲ್ಲೆ ಟಿ. ನರಸೀಪುರ ನ್ಯಾಯಾಲಯದಲ್ಲಿ ನಡೆಯುತ್ತಿದ್ದು, ಇದೀಗ ನ್ಯಾಯಾಲಯವು ದರ್ಶನ್ ಹಾಗೂ ವಿಜಯಲಕ್ಷಿö್ಮ ಅವರಿಗೆ ಸಮನ್ಸ್ ಜಾರಿ ಮಾಡಿ ಜುಲೈ ೪ ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಿದೆ.
ಪಾಕಿಸ್ತಾನಕ್ಕೆ ಕೊನೆಗಾಲ ಹತ್ತಿರವಾಗುತ್ತಿದೆ-ಯೋಗಿ
ಆಯೋಧ್ಯೆ, ಮೇ ೨೩: ಪಾಕಿಸ್ತಾನಕ್ಕೆ ಕೊನೆಗಾಲ ಹತ್ತಿರವಾಗುತ್ತಿದೆ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದ್ದಾರೆ. ಶುಕ್ರವಾರ ಆಯೋಧ್ಯೆಯ ಹನುಮಾನ್ಗಿರಿಯಲ್ಲಿ ಹನುಮಾನ್ ಮಂಟಪವನ್ನು ಉದ್ಘಾಟಿಸಿ ಮಾತನಾಡಿದರು. ಭಾರತೀಯ ಸೇನೆಯು ಪಾಕಿಸ್ತಾನದ ಮೇಲೆ ದಾಳಿ ಮಾಡಿಲ್ಲ. ಪಾಕಿಸ್ತಾನವೇ ನಮ್ಮ ಅಮಾಯಕ ಜನರ ಧರ್ಮವನ್ನು ಕೇಳಿ ಅವರನ್ನು ಗುಂಡಿಟ್ಟು ಕೊಂದಿದೆ ಎಂದರು. ಭಾರತೀಯ ಸೇನೆಯ ಪ್ರತೀಕಾರದ ದಾಳಿಯಲ್ಲಿ ೧೨೪ ಉಗ್ರಗಾಮಿಗಳು ಮೃತಪಟ್ಟಿದ್ದಾರೆ. ಇದರಲ್ಲಿ ಭಾರತದ ತಪ್ಪಿಲ್ಲ, ಬದಲಾಗಿ ಭಯೋತ್ಪಾದಕರಿಗೆ ಆಶ್ರಯ ಕೊಡುತ್ತಿರುವ ಪಾಕಿಸ್ತಾನಿಯರು ಘಟನೆಯ ಹೊಣೆ ಹೊರಬೇಕು ಎಂದು ತಿಳಿಸಿದರು. ಅವರು ಭಯೋತ್ಪಾದನೆಯನ್ನು ಪ್ರೋತ್ಸಾಹಿಸುತ್ತಿದ್ದಾರೆ, ಮುಂದೊAದು ದಿನ ಅದೇ ಪಾಕಿಸ್ತಾನವನ್ನು ನಾಶಮಾಡಲಿದೆ ಎಂದರು. ಇದು ಹೊಸ ಭಾರತ. ನಾವು ಯಾರ ತಂಟೆಗೂ ಹೋಗುವುದಿಲ್ಲ, ನಮ್ಮ ತಂಟೆಗೆ ಬಂದವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಗುಡುಗಿದರು.
ಬೆಟ್ಟಿಂಗ್ ಆ್ಯಪ್ ಮೇಲೆ ನಿಯಂತ್ರಣ ಅಗತ್ಯ-ನ್ಯಾಯ ಪೀಠ
ನವದೆಹಲಿ, ಮೇ ೨೩: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಹೆಸರಿನಲ್ಲಿ ಯುವಜನರು ಬೆಟ್ಟಿಂಗ್ ಹಾಗೂ ಜೂಜಾಡುತ್ತಿರುವುದು ಗಂಭೀರ ಸಮಸ್ಯೆಯಾಗಿದೆ ಎಂದು ಶುಕ್ರವಾರ ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಬೆಟ್ಟಿಂಗ್ ಅಪ್ಲಿಕೇಶನ್ಗಳ ಮೇಲೆ ನಿಯಂತ್ರಣ ತರಬೇಕು ಎಂದು ಕೆ.ಎ.ಪೌಲ್ ಅವರು ಸಲ್ಲಿಸಿದ್ದ ಪಿಐಎಲ್ ಅರ್ಜಿ ವಿಚಾರಣೆಯ ಸಂದರ್ಭದಲ್ಲಿ ನ್ಯಾ. ಸೂರ್ಯಕಾಂತ್ ಹಾಗೂ ನ್ಯಾ. ಎನ್. ಕೋಟೀಶ್ವರ್ ಸಿಂಗ್ ಪೀಠವು ಐಪಿಎಲ್ ಕುರಿತು ಮಾತನಾಡಿದೆ. ಸಾಮಾಜಿಕ ಜಾಲತಾಣಗಳ ಪ್ರಭಾವಿಗಳು, ನಟರು, ಕ್ರಿಕೆಟಿಗರು ಈ ರೀತಿಯ ಆನ್ಲೈನ್ ಅಪ್ಲಿಕೇಶನ್ಗಳನ್ನು ಬಳಸುವಂತೆ ಜಾಹೀರಾತು ನೀಡುತ್ತಿರುವುದು ಮಕ್ಕಳನ್ನು ದಾರಿ ತಪ್ಪಿಸುತ್ತಿದೆ. ಸಿಗರೇಟ್ ಪ್ಯಾಕ್ನ ಮೇಲೆ ಧೂಮಪಾನದ ಕುರಿತು ಎಚ್ಚರಿಕೆಯಾದರೂ ಇರುತ್ತದೆ. ಆದರೆ, ಬೆಟ್ಟಿಂಗ್ ಅಪ್ಲಿಕೇಶನ್ಗಳಲ್ಲಿ ಯಾವುದೇ ಸೂಚನೆ ಇರುವುದಿಲ್ಲ. ಅಷ್ಟೇ ಅಲ್ಲದೇ, ಮಾಜಿ ಕ್ರಿಕೆಟಿಗರು ಕೂಡ ಇವುಗಳ ಪ್ರಚಾರ ಮಾಡುತ್ತಿದ್ದಾರೆ ಎಂದು ಪಿಐಎಲ್ ಅರ್ಜಿಯಲ್ಲಿ ಆರೋಪಿಸಲಾಗಿದೆ. ಆನ್ಲೈನ್ ಬೆಟ್ಟಿಂಗ್ ಹಾಗೂ ಜೂಜಾಡುವ ಅಪ್ಲಿಕೇಶನ್ಗಳ ವ್ಯಸನದಿಂದ ಹಲವು ಮಕ್ಕಳು ಮೃತಪಟ್ಟಿದ್ದು, ಇದರ ನಿಯಂತ್ರಣಕ್ಕೆ ಸರ್ಕಾರವು ತೆಗೆದುಕೊಂಡಿರುವ ಕ್ರಮಗಳ ಕುರಿತು ವರದಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನ್ಯಾಯ ಪೀಠವು ಆದೇಶಿಸಿದೆ.
ಅಧಿಕಾರಿಗೆ ಬೆದರಿಕೆ - ಶಾಸಕ ಸ್ಥಾನ ರದ್ದು
ಜೈಪುರ, ಮೇ ೨೩: ಬಿಜೆಪಿಯ ಕನ್ವರ್ ಲಾಲ್ ಮೀನಾ ಅವರ ಶಾಸಕ ಸ್ಥಾನವನ್ನು ರಾಜಸ್ಥಾನ ವಿಧಾನಸಭೆ ಶುಕ್ರವಾರ ರದ್ದುಪಡಿಸಿದೆ. ೨೦ ವರ್ಷಗಳ ಹಿಂದೆ ಸರ್ಕಾರಿ ಅಧಿಕಾರಿಗೆ ಪಿಸ್ತೂಲ್ ತೊರಿಸಿ ಬೆದರಿಸಿದ ಆರೋಪದ ಹಿನ್ನೆಲೆಯಲ್ಲಿ ಅವರ ಮೇಲೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ಬಗ್ಗೆ ವಿಚಾರಣೆ ನಡೆಸಿದ್ದ ಜಲವಾರ್ ನ್ಯಾಯಾಲಯ ೨೦೨೦ರ ಡಿಸೆಂಬರ್ನಲ್ಲಿ ಕನ್ವರ್ ಲಾಲ್ ಮೀನಾಗೆ ಮೂರು ವರ್ಷಗಳ ಶಿಕ್ಷೆ ವಿಧಿಸಿತ್ತು. ಇದನ್ನು ಪ್ರಶ್ನಿಸಿ ಕನ್ವರ್ ಲಾಲ್ ಮೀನಾ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಸುಪ್ರೀಂ ಕೋರ್ಟ್ ಕೂಡ ಸ್ಥಳೀಯ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿದಿತ್ತು. ಶಾಸಕ ಸ್ಥಾನವನ್ನು ಉಳಿಸಿಕೊಳ್ಳಲು ಕನ್ವರ್ ಲಾಲ್ ಶಿಕ್ಷೆ ಪ್ರಮಾಣವನ್ನು ೨೩ ತಿಂಗಳಿಗೆ ಇಳಿಸುವಂತೆ ಮನವಿ ಮಾಡಿದ್ದರು. ಅಂತಿಮವಾಗಿ ಸುಪ್ರೀಂ ಕೋರ್ಟ್ ಕೆಳ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿಯಿತು. ಸದ್ಯ ಕನ್ವರ್ ಲಾಲ್ ಮೀನಾ ಮೇ ೨೧ರಿಂದ ಜಲವಾರ್ ಜೈಲಿನಲ್ಲಿದ್ದಾರೆ.
ಸಾಮೂಹಿಕ ಅತ್ಯಾಚಾರ - ಮೂವರ ಬಂಧನ
ಸಾAಗ್ಲಿ, ಮೇ ೨೩: ಮಹಾರಾಷ್ಟçದ ಸಾಂಗ್ಲಿ ಜಿಲ್ಲೆಯಲ್ಲಿ ಮೂರನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿಯ ಮೇಲೆ ಆಕೆಯ ಇಬ್ಬರು ಸಹಪಾಠಿಗಳು ಮತ್ತು ಅವರ ಸ್ನೇಹಿತರೊಬ್ಬರು ಮದ್ಯ ಸೇವಿಸಿ ಅತ್ಯಾಚಾರ ಎಸಗಿರುವ ಘಟನೆ ವರದಿಯಾಗಿದೆ. ಪುಣೆ, ಸೋಲಾಪುರ ಮತ್ತು ಸಾಂಗ್ಲಿಯ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನ್ಯಾಯಾಲಯ ಅವರನ್ನು ಮೇ ೨೭ ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ೨೨ ವರ್ಷದ ವೈದ್ಯಕೀಯ ವಿದ್ಯಾರ್ಥಿನಿ ಮೇ ೧೮ ರಂದು ರಾತ್ರಿ ೧೦ ಗಂಟೆ ಸುಮಾರಿಗೆ ಚಿತ್ರಮಂದಿರದಲ್ಲಿ ಸಿನಿಮಾ ನೋಡಲು ಯೋಜಿಸಿದ್ದಾಗ ಆಕೆಯ ಮೇಲೆ ದಾಳಿ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಕರ್ನಾಟಕದ ಬೆಳಗಾವಿ ಮೂಲದ ಸಂತ್ರಸ್ತೆ ನಂತರ ತನ್ನ ಪೋಷಕರಿಗೆ ಘಟನೆಯನ್ನು ವಿವರಿಸಿದಳು, ನಂತರ ಅವರು ವಿಶ್ರಂಬಾಗ್ ಪೊಲೀಸ್ ಠಾಣೆಯನ್ನು ಸಂಪರ್ಕಿಸಿದರು. ಆರೋಪಿಗಳ ವಿರುದ್ಧ ಸಾಮೂಹಿಕ ಅತ್ಯಾಚಾರ ಮತ್ತು ಇತರ ಆರೋಪಗಳಿಗಾಗಿ ಭಾರತೀಯ ನ್ಯಾಯ ಸಂಹಿತಾ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆ ಮುಂದುವರಿಕೆ
ಕಿಶ್ತ್ವಾರ್, ಮೇ ೨೩: ಜಮ್ಮು ಮತ್ತು ಕಾಶ್ಮೀರದ ಕಿಶ್ತಾ÷್ವರ್ನ ಸಿಂಗ್ಪೋರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವಿನ ಗುಂಡಿನ ಚಕಮಕಿ ಎರಡನೇ ದಿನವೂ ಮುಂದುವರೆದಿದೆ. ಚತ್ರೂವಿನ ಸಿಂಗ್ಪೋರಾ ಪ್ರದೇಶದಲ್ಲಿ ೩-೪ ಉಗ್ರರು ಅಡಗಿ ಕುಳಿತಿರುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಗುರುವಾರ ಕಾರ್ಯಾಚರಣೆ ಆರಂಭಿಸಿದ್ದವು. ಈ ವೇಳೆ ಉಗ್ರರು ಅಡಗಿದ್ದ ಸ್ಥಳ ಸಮೀಪಿಸುತ್ತಿದ್ದಂತೆಯೇ ಯೋಧರ ಮೇಲೆ ಗುಂಡಿನ ದಾಳಿ ಆರಂಭಿಸಿದ್ದರು. ಇದರಂತೆ ಉಗ್ರರ ವಿರುದ್ಧದ ಸೇನಾ ಕಾರ್ಯಾಚರಣೆ ಎನ್ಕೌಂಟರ್ ಆಗಿ ಮಾರ್ಪಟ್ಟಿದ್ದು, ನಿನ್ನೆಯಿಂದಲೂ ಕಾರ್ಯಾಚರಣೆ ಮುಂದುವರೆದಿದೆ. ಛತ್ರು ಪ್ರದೇಶದಲ್ಲಿ ಭದ್ರತಾ ಪಡೆಗಳು ಭಯೋತ್ಪಾದಕರೊಂದಿಗೆ ಸಂಪರ್ಕ ಸಾಧಿಸಿದ ನಂತರ ಇಂದು ಮುಂಜಾನೆ ಎನ್ಕೌಂಟರ್ ಪ್ರಾರಂಭವಾಗಿದೆ. ಪ್ರಸ್ತುತ ಯೋಧರು ಹಾಗೂ ಉಗ್ರರ ನಡುವೆ ಗುಂಡಿನ ಕಾಳಗ ಮುಂದುವರೆಸಿದ್ದು, ಗುಂಡಿನ ಚಕಮಕಿಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದಾರೆಂದು ತಿಳಿದುಬಂದಿದೆ.
ಭಾರತಕ್ಕೆ ಗೊಡ್ಡು ಬೆದರಿಕೆಯೊಡ್ಡಿದ ಪಾಕ್
ಇಸ್ಲಾಮಾಬಾದ್, ಮೇ ೨೩: ಭಾರತ ಹಾಗೂ ಪಾಕಿಸ್ತಾನದ ನಡುವೆ ಕದನ ವಿರಾಮ ಏರ್ಪಟ್ಟಿದ್ದು, ಉಭಯ ರಾಷ್ಟçಗಳ ನಡುವಿನ ಉದ್ವಿಗ್ನತೆ ಸ್ವಲ್ಪಮಟ್ಟಿಗೆ ಕಡಿಮೆಯಾಗಿದೆ. ಈ ನಡುವಲ್ಲೇ ಮತ್ತೆ ಪಾಕಿಸ್ತಾನ ತನ್ನ ಬಾಲ ಬಿಚ್ಚಿದ್ದು, ನೀರು ಹರಿಸದಿದ್ದರೆ, ಉಸಿರು ನಿಲ್ಲಿಸುತ್ತೇವೆಂದು ಭಾರತಕ್ಕೆ ಬೆದರಿಕೆ ಹಾಕಿದೆ. ಸಿಂಧೂ ಜಲ ಒಪ್ಪಂದವನ್ನು ಭಾರತ ರದ್ದುಗೊಳಿಸಿದ್ದಕ್ಕೆ ಸಂಬAಧಿಸಿದAತೆ ಸಾರ್ವಜನಿಕ ಸಭೆಯಲ್ಲಿ ಮಾತನಾಡಿರುವ ಪಾಕಿಸ್ತಾನದ ಮಿಲಿಟರಿ ವಕ್ತಾರ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ ಭಾರತಕ್ಕೆ ಬೆದರಿಕೆ ಹಾಕಿದ್ದಾರೆ. ಭಾರತ ನೀರು ನೀಡದಿದ್ದರೆ ನಾವು ಅವರ ಉಸಿರು ನಿಲ್ಲಿಸುತ್ತೇವೆ ಎಂಬ ಗೊಡ್ಡು ಬೆದರಿಕೆ ಹಾಕಿ, ನಾಲಿಗೆ ಹರಿಬಿಟ್ಟಿದ್ದಾರೆ. ಪಹಲ್ಗಾಮ್ ಉಗ್ರರ ದಾಳಿಯ ಬಳಿಕ ಭಾರತ ಸಿಂಧೂ ನದಿ ನೀರಿನ ಒಪ್ಪಂದವನ್ನು ರದ್ದುಗೊಳಿಸಿದೆ. ಪಾಕಿಸ್ತಾನ ಹಲವು ಬಾರಿ ಈ ಕುರಿತು ಮಾತನಾಡುವಂತೆ ಭಾರತಕ್ಕೆ ಮನವಿ ಮಾಡಿದೆ. ಆದರೆ, ಭಾರತ ನದಿ ನೀರು ಹಂಚಿಕೆಗೆ ನಿರಾಕರಿಸಿದೆ.