ಮಡಿಕೇರಿ, ಮೇ ೨೩: ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ೬೨೫ ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ಮಡಿಕೇರಿ ಮೂಲದ ತನ್ಮಯ್ನನ್ನು ಮೈಸೂರಿನ ಶ್ರೀ ರಾಮಕೃಷ್ಣ ವಿದ್ಯಾಶಾಲಾ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭ ಸ್ವಾಮಿ ಮುಕ್ತಿದಾನಂದ ಮಹಾರಾಜ, ಯುಕ್ತೇಶನಂದಾಜಿ, ಪ್ರಾಂಶುಪಾಲ ಟಿ.ಕೆ. ಚಂದ್ರಶೇಖರ್, ತನ್ಮಯ್ ಪೋಷಕರಾದ ಮಡಿಕೇರಿ ವಕೀಲರ ಸಂಘದ ಅಧ್ಯಕ್ಷ ನಿರಂಜನ್ ಹಾಗೂ ಸೌಮ್ಯ ಹಾಜರಿದ್ದರು.