ಚೆಯ್ಯಂಡಾಣೆ, ಮೇ ೨೩: ನಾಪೋಕ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೇತು ಗ್ರಾಮದ ಚೆರಿಯಪರಂಬುವಿನಲ್ಲಿ ಕಳೆದ ಹಲವು ವರ್ಷಗಳಿಂದ ಹದಗೆಟ್ಟಿದ್ದ ರಸ್ತೆಯ ಅಭಿವೃದ್ಧಿ ಕಾಮಗಾರಿಯು ಪೂರ್ಣಗೊಂಡು ಗ್ರಾಮಸ್ಥರ ಸುಗಮ ಸಂಚಾರಕ್ಕೆ ಮುಕ್ತಗೊಂಡಿದೆ.

ಬೇತು ಗ್ರಾಮದ ಚೆರಿಯಪರಂಬುವಿನಿAದ ಕಕ್ಕುಂದಕಾಡು ಶ್ರೀ ವೆಂಕಟೇಶ್ವರ ದೇವಾಲಯಕ್ಕೆ ತೆರಳುವ ರಸ್ತೆ ಗುಂಡಿ ಬಿದ್ದು ಸಂಚಾರಕ್ಕೆ ಸಮಸ್ಯೆ ಉಂಟಾಗಿತ್ತು. ಈ ರಸ್ತೆ ಕಾಮಗಾರಿಯನ್ನು ನಡೆಸಿಕೊಡುವಂತೆ ಇಲ್ಲಿನ ನಿವಾಸಿಗಳು ಸ್ಥಳೀಯ ಜನಪ್ರತಿನಿಧಿಗಳ ಮೂಲಕ ಶಾಸಕ ಪೊನ್ನಣ್ಣ ಅವರಲ್ಲಿ ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿದ ಶಾಸಕ ಪೊನ್ನಣ್ಣ ರೂ. ೧೫ ಲಕ್ಷ ಅನುದಾನವನ್ನು ಬಿಡುಗಡೆಗೊಳಿಸಿದ್ದರು. ಇದೀಗ ರಸ್ತೆ ಕಾಮಗಾರಿ ಪೂರ್ಣಗೊಂಡಿದೆ. ನೂತನ ಕಾಂಕ್ರೀಟ್ ರಸ್ತೆಯನ್ನು ನಾಪೋಕ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್ ಉದ್ಘಾಟಿಸಿದರು. ಈ ಸಂದರ್ಭ ನಾಪೋಕ್ಲು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಕಂಗಾAಡ ಶಶಿ ಮಂದಣ್ಣ, ಕೆಡಿಪಿ ಸದಸ್ಯ ಕಲಿಯಂಡ ಕೌಶಿ ಕುಶಾಲಪ್ಪ, ವಲಯ ಕಾಂಗ್ರೆಸ್ ಅಧ್ಯಕ್ಷ ಮಾಚೇಟಿರ ಕುಶು ಕುಶಾಲಪ್ಪ, ಗ್ರಾಮಸ್ಥರಾದ ಪರವಂಡ ಶಫೀಕ್, ಅಪ್ಪಸ್ವಾಮಿ, ಅಬ್ದುಲ್ಲಾ, ಬಾಳೆಯಡ ಪ್ರಿಯಾ, ಅಣ್ಣಯ್ಯ ಮತ್ತಿತರರು ಹಾಜರಿದ್ದರು.