ಸಿದ್ದಾಪುರ, ಮೇ ೨೩ : ಪೂರ್ವ ಮುಂಗಾರು ಮಳೆ ಹಿನ್ನೆಲೆಯಲ್ಲಿ ಗಾಳಿ ಮಳೆಯಿಂದ ಸಿಲುಕಿ ಅಮ್ಮತ್ತಿ ಭಾಗದಲ್ಲಿ ಮರವೊಂದು ವಿದ್ಯುತ್ ತಂತಿಯ ಮೇಲೆ ಬಿದ್ದ ಪರಿಣಾಮ ವಿದ್ಯುತ್ ಸಂಪರ್ಕ ಕಡಿತಗೊಂಡಿತು. ಬಳಿಕ ಚೆಸ್ಕಾಂ ಸಿಬ್ಬಂದಿಗಳು ಮಳೆಯ ನಡುವೆ ಮರವನ್ನು ಕಡಿದು ತೆರವುಗೊಳಿಸಿ ವಿದ್ಯುತ್ ಸಂಪರ್ಕ ಕಲ್ಪಿಸಿದರು.