ಸಿದ್ದಾಪುರ, ಮೇ೨೩ : ರಾಷ್ಟçಮಟ್ಟದ ಆನೆ ಗಣತಿ ಅಂಗವಾಗಿ ಕೊಡಗು ಜಿಲ್ಲೆಯ ವಿವಿಧ ವಲಯ ವ್ಯಾಪ್ತಿಯಲ್ಲಿ ಕಾಡಾನೆಗಳ ಗಣತಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಪ್ರಾರಂಭಿಸಿದ್ದಾರೆ. ವೀರಾಜಪೇಟೆ ತಾಲೂಕು ವ್ಯಾಪ್ತಿಗೆ ಒಳಪಡುವ ವೀರಾಜಪೇಟೆ ವಲಯ ಹಾಗೂ ತಿತಿಮತಿ ವಲಯ ಅರಣ್ಯ ವ್ಯಾಪ್ತಿಯಲ್ಲಿ ಕಾಫಿ ತೋಟಗಳಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳ ಹಾಗೂ ಅರಣ್ಯ ಪ್ರದೇಶದ ಭಾಗದಲ್ಲಿ ಇರುವ ಕಾಡಾನೆಗಳ ಗಣತಿ ಕಾರ್ಯ ನಡೆಯುತ್ತಿದೆ. ಕಾಡಾನೆಗಳು ಗುಂಪಿನಲ್ಲಿ ಬೇರ್ಪಟ್ಟಿರುವುದು ಹಾಗೂ ಕೆಲವು ಗುಂಪುಗಳು ಬೇರೆ ಬೇರೆಯಾಗಿ ಸುತ್ತಾಡುತ್ತಿವೆ. ಮಾಹಿತಿ ಲಭಿಸಿದೆ. ಕಾಡಾನೆಗಳ ಗಣತಿಯ ಕಾರ್ಯದಲ್ಲಿ ವೀರಾಜಪೇಟೆ ತಾಲೂಕು ಉಪ ಅರಣ್ಯ ಸಂರಕ್ಷಣಾಧಿಕಾರಿ ಎನ್.ಹೆಚ್. ಜಗನ್ನಾಥ್, ವೀರಾಜಪೇಟೆ ವಲಯ ಅರಣ್ಯ ಅಧಿಕಾರಿ ಶಿವರಾಮ್ ಕೆ.ವಿ. ತಿತಿಮತಿ ವಲಯ ಅರಣ್ಯ ಅಧಿಕಾರಿ ಗಂಗಾಧರ್.ಉಪವಲಯ ಅರಣ್ಯ ಅಧಿಕಾರಿ ಶಶಿ ಹಾಗೂ ಸಿಬ್ಬಂದಿಗಳು ಹಾಜರಿದ್ದರು.
ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಅಮ್ಮತ್ತಿ ವ್ಯಾಪ್ತಿಯಲ್ಲಿ ಹಾಗೂ ಬಾಡಗ ಬಾಣಂಗಲ ಗ್ರಾಮದಲ್ಲಿ ಹಾಗೂ ಈ ವ್ಯಾಪ್ತಿಯ ಅಧಿಕ ಕಾಡಾನೆಗಳು ಸಂಚರಿಸುವ ಸ್ಥಳಗಳಲ್ಲಿ ಆನೆ ಗಣತಿ ಮಾಡಿದರು.