ಮಡಿಕೇರಿ, ಮೇ ೨೩: ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವೀರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ನೇತೃತ್ವದ ನಿಯೋಗ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.

ಕೊಡಗು ಜಿಲ್ಲೆಯ ದೇವಸ್ಥಾನಗಳ ಅಭಿವೃದ್ಧಿ ಹಾಗೂ ಗ್ರಾಮೀಣ ಪ್ರದೇಶಗಳಿಗೆ ಹೊಸ ಬಸ್ ಮಾರ್ಗಗಳನ್ನು ಒದಗಿಸುವಂತೆ ಮನವಿ ಮಾಡಿತು.

ಈ ಸಂದರ್ಭ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ತೀತಿರÀ ಧರ್ಮಜ ಉತ್ತಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಾನಂಡ ಪೃಥ್ಯು, ಆದೇಂಗಡ ವಾಸು ಬೆಳ್ಳಿಯಪ್ಪ, ಬಾಳಲೆ ಗ್ರಾಮ ಪಂಚಾಯಿತಿ ಸದಸ್ಯ ಆದೇಂಗಡ ವಿನು ಉತ್ತಪ್ಪ ಉಪಸ್ಥಿತರಿದ್ದರು.