ಮಡಿಕೇರಿ, ಮೇ ೨೪: ಅಪ್ಪಂಗಳದ ಐಸಿಎಆರ್-ಭಾರತೀಯ ಸಂಬಾರ ಬೆಳೆಗಳ ಸಂಶೋಧನಾ ಸಂಸ್ಥೆ ಪ್ರಾದೇಶಿಕ ಕೇಂದ್ರಕ್ಕೆ ಪಶುಸಂಗೋಪನೆ ಮತ್ತು ಆಹಾರ ಸಂಸ್ಕರಣೆ ಸಂಸದೀಯ ಸ್ಥಾಯಿ ಸಮಿತಿ ಭೇಟಿ ನೀಡಿತು.
ಸಂಸದ ಚರಣ್ ಜಿತ್ ಸಿಂಗ್ ಚನ್ನಿ ನೇತೃತ್ವದ ಲೋಕಸಭೆಯ ೧೨ ಸದಸ್ಯರು, ರಾಜ್ಯಸಭೆ ೪ ಸದಸ್ಯರು ಮತ್ತು ಲೋಕಸಭಾ ಸಚಿವಾಲಯದ ಅಧಿಕಾರಿಗಳನ್ನು ಒಳಗೊಂಡ ಕೃಷಿ, ಪಶು ಸಂಗೋಪನೆ ಮತ್ತು ಆಹಾರ ಸಂಸ್ಕರಣೆ ಕುರಿತ ಸಂಸದೀಯ ಸ್ಥಾಯಿ ಸಮಿತಿಯು ಭೇಟಿ ನೀಡಿ ಅಪ್ಪಂಗಳದ ಸಂಸ್ಥೆಯಲ್ಲಿ ಅಭಿವೃದ್ಧಿಪಡಿಸಿದ ಸಂಬಾರ ಬೆಳೆಗಳ ತಳಿಗಳು ಮತ್ತು ತಂತ್ರಜ್ಞಾನಗಳ ವಸ್ತು ಪ್ರದರ್ಶನವನ್ನು ವೀಕ್ಷಿಸಿತು. ಸಮಿತಿಯ ಅಧ್ಯಕ್ಷ ಚರಣ್ಜಿತ್ ಸಿಂಗ್ ಪ್ರದರ್ಶನವನ್ನು ಉದ್ಘಾಟಿಸಿದರು.
ಸಭೆಯಲ್ಲಿ ಕೋಯಿಕೋಡು ಐಸಿಎಆರ್ ನಿರ್ದೇಶಕ ಡಾ. ಆರ್. ದಿನೇಶ್ ಸಂಸ್ಥೆಯ ಚಟುವಟಿಕೆಗಳು ಮತ್ತು ಸಾಧನೆಗಳ ಸಮಗ್ರ ಅವಲೋಕನವನ್ನು ಪ್ರಸ್ತುತಪಡಿಸಿದರು. ಸಮಿತಿಯು ವಿಜ್ಞಾನಿಗಳು ಮತ್ತು ಅಧಿಕಾರಿಗಳೊಂದಿಗೆ ಸಂವಾದ ನಡೆಯಿತು. ಕಾರ್ಯಕ್ರಮದಲ್ಲಿ ನವದೆಹಲಿ ಐಸಿಎಆರ್ ಸಹಾಯಕ ನಿರ್ದೇಶಕ ಡಾ. ಸುಧಾಕರ್ ಪಾಂಡೆ, ಅಪ್ಪಂಗಳದ ಪ್ರಾದೇಶಿಕ ಕೇಂದ್ರದ ಮುಖ್ಯಸ್ಥ ಡಾ. ಎಸ್. ಜೆ. ಅಂಕೇಗೌಡ, ಕೇಂದ್ರದ ಹಿರಿಯ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.
ಈ ಸಂದರ್ಭ ಮರಗೋಡುವಿನ ಪ್ರಗತಿಪರ ರೈತ ಮಹಿಳೆ ಪ್ರೇಮಾ ಗಣೇಶ್, ಸಂಬಾರಬೆಳೆಗಳ ಕೃಷಿಯಲ್ಲಿ ತಮ್ಮ ಅನುಭವ ಹಂಚಿಕೊAಡರು.