ಮಡಿಕೇರಿ, ಮೇ ೨೪: ಮುಖ್ಯ ಮಂತ್ರಿ ಕಾನೂನು ಸಲಹೆಗಾರ, ವೀರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಅವರ ಆಪ್ತ ಸಹಾಯಕನ ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮಹೇಂದ್ರ ಅವರ ಪತ್ನಿ ಸಕಲೇಶಪುರದ ಶೃತಿ (೩೫) ವಿಷ ಸೇವಿಸಿ ಪಿಡಬ್ಲ್ಯೂಡಿ ಕ್ವಾಟರ್ಸ್ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಕಲೇಶಪುರ ತಾಲೂಕಿನ ಕಲ್ಗಣೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದ ಶೃತಿ ಕೆಲ ತಿಂಗಳುಗಳಿAದ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಇಂದು ಮನೆಯಲ್ಲಿಯೇ ವಿಷ ಸೇವಿಸಿದ್ದು ತೀವ್ರ ಅಸ್ವಸ್ಥಗೊಂಡಿದ ಅವರನ್ನು ಚಿಕಿತ್ಸೆಗಾಗಿ ಹಾಸನದ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆಯೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟಿರುವ ‘ಶೃತಿ ನಾನು ಕೆಲವು ದಿನಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದೇನೆ. ನನ್ನ ಗಂಡ ನನ್ನನ್ನು ಚೆನ್ನಾಗಿ ನೋಡಿ ಕೊಂಡಿದ್ದಾರೆ. ನನ್ನ ಮಕ್ಕಳನ್ನು ಚೆನ್ನಾಗಿ ಓದಿಸಿ’ ಎಂದು ಬರೆದಿದ್ದಾರೆ ಎಂದು ತಿಳಿದುಬಂದಿದೆ. ಮೃತರ ಅಂತ್ಯಕ್ರಿಯೆ ಆಲೂರು ತಾಲೂಕಿನ ಗಂಜಿಗೆರೆಯಲ್ಲಿ ತಾ. ೨೫ ರಂದು (ಇಂದು) ನಡೆಯಲಿದೆ.