ಮಡಿಕೇರಿ, ಮೇ ೨೪ : ರಾಷ್ಟಿçÃಯ ಜನಗಣತಿಯ ಸಂದರ್ಭ ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಂನ್ನು ಸೇರಿಸÀಬೇಕು, ಸಂಸತ್ ಹಾಗೂ ವಿಧಾನಸಭೆಯಲ್ಲಿ ಕೊಡವರಿಗೆ ವಿಶೇಷ ರಾಜಕೀಯ ಪ್ರಾತಿನಿದ್ಯ ನೀಡಬೇಕು ಎಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ತಾ. ೨೬ ರಂದು ಟಿ. ಶೆಟ್ಟಿಗೇರಿಯಲ್ಲಿ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮ ನಡೆಯಲಿದೆ ಎಂದು ಸಿಎನ್ಸಿ ಅಧ್ಯಕ್ಷ ಎನ್.ಯು. ನಾಚಪ್ಪ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸೋಮವಾರ ಬೆಳಿಗ್ಗೆ ೧೦.೩೦ ಗಂಟೆಗೆ ಟಿ. ಶೆಟ್ಟಿಗೇರಿ ಜಂಕ್ಷನ್ನಲ್ಲಿ ಮಾನವ ಸರಪಳಿ ನಿರ್ಮಿಸಿ ವಿವಿಧ ಬೇಡಿಕೆಗಳ ಕುರಿತು ಹಕ್ಕೊತ್ತಾಯ ಮಂಡಿಸಲಾಗುವುದು. ಜನಗಣತಿ ಸಂದರ್ಭ ಪ್ರತ್ಯೇಕ ಕಾಲಂ ಮತ್ತು ಕೋಡ್ ಸೇರಿಸುವುದರಿಂದ ಕೊಡವ ಸಮುದಾಯಕ್ಕೆ ಆಗಬಹುದಾದ ಲಾಭಗಳನ್ನು ವಿವರಿಸಲಾಗುವುದು ಎಂದು ಹೇಳಿದ್ದಾರೆ.