ಸೋಮವಾರಪೇಟೆ,ಮೇ.೨೫: ತಾಲೂಕಿನಾದ್ಯಂತ ವಾಯು ವರುಣನ ಆರ್ಭಟ ಮುಂದುವರೆದಿದೆ. ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆ ಜನಜೀವನವೂ ಅಸ್ತವ್ಯಸ್ಥಗೊಂಡಿದೆ. ಮಳೆಯೊಂದಿಗೆ ಗಾಳಿಯ ರಭಸ ಹೆಚ್ಚಿದ್ದು, ಅಲ್ಲಲ್ಲಿ ಮರಗಳು, ಮರದ ಕೊಂಬೆಗಳು ವಿದ್ಯುತ್ ತಂತಿಯ ಮೇಲೆ ಬೀಳುತ್ತಿವೆ.
ಇನ್ನು ಗ್ರಾಮೀಣ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಕಚ್ಚಾ ರಸ್ತೆಗಳು ಸಂಚಾರಕ್ಕೆ ಅಯೋಗ್ಯವಾಗಿವೆ. ಚರಂಡಿ ವ್ಯವಸ್ಥೆ ಇಲ್ಲದೇ ಇರುವ ಕಡೆಗಳಲ್ಲಿ ಮಳೆ ನೀರು ರಸ್ತೆಯ ಮೇಲೆ ನಿಂತಿದ್ದು, ಪಾದಚಾರಿಗಳು ಹಾಗೂ ವಾಹನ ಸವಾರರಿಗೆ ತೊಂದರೆಯಾಗಿದೆ.
ಹಾನಗಲ್ಲು, ಚಂದನಮಕ್ಕಿ, ಕಿರಗಂದೂರು, ತಾಕೇರಿ, ತಲ್ತರೆಶೆಟ್ಟಳ್ಳಿ ಸಂಪರ್ಕ ರಸ್ತೆಯ ಹಾನಗಲ್ಲು ಗಣಪತಿ ದೇವಾಲಯದಿಂದ ಹಾನಗಲ್ಲು ಕೆರೆಯವರೆಗಿನ ರಸ್ತೆಯಲ್ಲಿ ನೀರು ಸಂಗ್ರಹಗೊAಡು ಸಂಚಾರಕ್ಕೆ ಸಮಸ್ಯೆಯಾಗಿದೆ. ಕಾಂಕ್ರೀಟ್ ರಸ್ತೆ ನಿರ್ಮಾಣಗೊಂಡಿದ್ದು, ಎರಡೂ ಬದಿಯಲ್ಲಿ ಚರಂಡಿ, ಮೋರಿ ಇಲ್ಲದೇ ಇರುವುದರಿಂದ ಮಳೆಯ ನೀರು ರಸ್ತೆಯ ಮೇಲೆ ಶೇಖರಣೆಗೊಂಡಿದೆ.
ಮಳೆಯೊAದಿಗೆ ಭಾರೀ ಗಾಳಿಯೂ ಬೀಸುತ್ತಿದ್ದು, ಬಹುತೇಕ ಕಾಫಿ ತೋಟಗಳಲ್ಲಿ ಕೆಲಸ ಸ್ಥಗಿತಗೊಳಿಸಲಾಗಿದೆ. ಮರಕಪಾತು, ಗೊಬ್ಬರ ಹಾಕುವುದು, ಕಾಫಿ ಗಿಡಗಳ ಚಿಗುರು ತೆಗೆಯುವ ಕೆಲಸ ಪ್ರಗತಿಯಲ್ಲಿತ್ತು. ಆದರೆ ದಿಢೀರ್ ಬಿರುಸುಗೊಂಡ ಮಳೆಯಿಂದಾಗಿ ಕೆಲಸ ಕಾರ್ಯಗಳು ಸ್ಥಗಿತಗೊಂಡಿವೆ.
ಇದರೊAದಿಗೆ ಲೋಕೋಪ ಯೋಗಿ, ಜಿಲ್ಲಾ ಪಂಚಾಯತ್ ಮೂಲಕ ಚಾಲ್ತಿಯಲ್ಲಿದ್ದ ಕಾಮಗಾರಿ ಗಳೂ ಸಹ ಮಳೆಯಿಂದಾಗಿ ಅರ್ಧಕ್ಕೆ ನಿಂತಿವೆ. ಕಳೆದೆರಡು ದಿನಗಳಿಂದ ಬಿಟ್ಟೂಬಿಡದೇ
(ಮೊದಲ ಪುಟದಿಂದ) ಮಳೆ ಸುರಿಯುತ್ತಿರುವುದರಿಂದ ಕೆರೆಕಟ್ಟೆಗಳಲ್ಲಿ ನೀರಿನ ಸಂಗ್ರಹ ಹೆಚ್ಚಾಗಿದೆ. ಹೊಳೆ ತೊರೆಗಳು, ನದಿಗಳಲ್ಲಿ ನೀರಿನ ಹರಿವು ಹೆಚ್ಚಿದೆ.
ಸೂಕ್ತ ಚರಂಡಿ ನಿರ್ವಹಣೆ ಇಲ್ಲದೇ ಗ್ರಾಮೀಣ ಭಾಗದ ರಸ್ತೆಗಳು ಹದಗೆಟ್ಟಿವೆ. ಸಣ್ಣಪುಟ್ಟ ಗುಂಡಿಗಳಲ್ಲಿ ಮಳೆ ನೀರು ಸಂಗ್ರಹಗೊAಡಿದೆ. ತಾಲೂಕಿನ ಪುಷ್ಪಗಿರಿ ಬೆಟ್ಟಶ್ರೇಣಿ ಪ್ರದೇಶದ ಶಾಂತಳ್ಳಿ ಹೋಬಳಿಯಾದ್ಯಂತ ಧಾರಾಕಾರ ಮಳೆಯಾಗುತ್ತಿದೆ. ಇದರೊಂದಿಗೆ ಸೂರ್ಲಬ್ಬಿ, ಗರ್ವಾಲೆ ಭಾಗಕ್ಕೂ ದಾಖಲೆಯ ಮಳೆಯಾಗುತ್ತಿದೆ.
ಬೆಟ್ಟದಳ್ಳಿ, ಶಾಂತಳ್ಳಿ, ಕುಂದಳ್ಳಿ, ತಡ್ಡಿಕೊಪ್ಪ, ನಾಡ್ನಳ್ಳಿ, ಕೊತ್ನಳ್ಳಿ, ಹಂಚಿನಳ್ಳಿ, ಮಲ್ಲಳ್ಳಿ, ಬೀದಳ್ಳಿ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಿಗೆ ಭಾರೀ ಮಳೆಯಾಗುತ್ತಿರುವ ಬಗ್ಗೆ ವರದಿಯಾಗಿದೆ. ಮಳೆಯೊಂದಿಗೆ ಗಾಳಿಯೂ ಬೀಸುತ್ತಿರುವುದರಿಂದ ಅಲ್ಲಲ್ಲಿ ಮರಗಳು ಧರೆಗುರುಳುತ್ತಿವೆ.
ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯಲ್ಲಿ ಸುರಿದ ಮಳೆಗಾಳಿಗೆ ಮರಗಳು ನೆಲಕ್ಕುರುಳಿ ಕೊಡ್ಲಿಪೇಟೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಂಡಿತ್ತು. ನಿನ್ನೆ ಮಧ್ಯಾಹ್ನದಿಂದ ಭಾರೀ ಮಳೆ ಸುರಿದ ಪರಿಣಾಮ ಅಲ್ಲಲ್ಲಿ ಮರ ಹಾಗೂ ಮರದ ಕೊಂಬೆಗಳು ವಿದ್ಯುತ್ ತಂತಿಗಳ ಮೇಲೆ ಬಿದ್ದು, ನಿನ್ನೆ ಮಧ್ಯಾಹ್ನದಿಂದ ವಿದ್ಯುತ್ ಸ್ಥಗಿತಗೊಂಡಿತ್ತು. ರಾತ್ರಿಯಿಡೀ ಪಟ್ಟಣ ಕತ್ತಲಲ್ಲಿತ್ತು.
ಇಂದು ಮಧ್ಯಾಹ್ನ ಕುಶಾಲನಗರ-ಸೋಮವಾರಪೇಟೆ ರಾಜ್ಯ ಹೆದ್ದಾರಿಯ ಕೋವರ್ಕೊಲ್ಲಿ ಜಂಕ್ಷನ್ ಬಳಿಯಲ್ಲಿ ರಸ್ತೆಗೆ ಅಡ್ಡಲಾಗಿ ಮೂರು ಮರಗಳು ಬಿದ್ದಿದ್ದು, ಎರಡು ವಿದ್ಯುತ್ ಕಂಬಗಳು ಹಾನಿಯಾಗಿವೆ. ರಸ್ತೆಗೆ ಅಡ್ಡಲಾಗಿ ಮರ ಬಿದ್ದ ಹಿನ್ನೆಲೆ ಕೆಲಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಸೆಸ್ಕ್ ಹಾಗೂ ಅರಣ್ಯ ಇಲಖಾ ಸಿಬ್ಬಂದಿಗಳೊAದಿಗೆ ಸ್ಥಳೀಯರು ಸಹಕರಿಸಿ ಮರ ತೆರವು ಮಾಡಿದರು.
ತಾಲೂಕಿನ ತೋಳೂರುಶೆಟ್ಟಳ್ಳಿ ಶ್ರೀ ಸಬ್ಬಮ್ಮ ದೇವರ ಸುಗ್ಗಿ ಬನದಲ್ಲಿದ್ದ ಬೃಹತ್ ಗಾತ್ರದ ಮರಬಿದ್ದು, ಸುಗ್ಗಿ ಆವರಣಕ್ಕೆ ಅಲ್ಪಹಾನಿಯಾಗಿದ್ದು, ಸುಗ್ಗಿ ಕಂಬ ಹಾಗೂ ದೇಗುಲಕ್ಕೆ ಯಾವುದೇ ಹಾನಿಯಾಗಿಲ್ಲ.