ಕೋವಿಡ್ ಸಭೆ: ಜ್ವರ, ನೆಗಡಿ ಇರುವ ವಿದ್ಯಾರ್ಥಿಗಳಿಗೆ ರಜೆ
ಬೆಂಗಳೂರು, ಮೇ ೨೬: ರಾಜ್ಯದಲ್ಲಿ ಮತ್ತೆ ಕೊರೊನಾ ಉಲ್ಬಣಗೊಳ್ಳುವ ಆತಂಕ ಎದುರಾಗಿದ್ದು, ಪರಿಸ್ಥಿತಿಯನ್ನು ಅವಲೋಕಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಆರೋಗ್ಯ ಇಲಾಖೆ ಮತ್ತು ಶಿಕ್ಷಣ ಇಲಾಖೆ ಸಚಿವರು, ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ಅಧಿಕಾರಿಗಳು, ತಜ್ಞರು ಮತ್ತು ಸಚಿವರುಗಳಿಂದ ಮಾಹಿತಿ ಪಡೆದ ಮುಖ್ಯಮಂತ್ರಿಗಳು ಹಲವು ಸೂಚನೆಗಳನ್ನು ನೀಡಿದ್ದಾರೆ. ಕೊರೊನಾ ನಿಯಂತ್ರಣಕ್ಕೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಿ. ಕಳೆದ ಬಾರಿ ಆದಂತೆ ಈ ಬಾರಿ ಸಮಸ್ಯೆ ಆಗಬಾರದು. ಕೋವಿಡ್ ಸಹಾಯವಾಣಿ ತೆರೆಯಿರಿ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸಿಎಂ ಮಹತ್ವದ ಸೂಚನೆ ನೀಡಿದರು. ಅಲ್ಲದೇ ಜ್ವರ, ನೆಗಡಿ ಇರುವ ಮಕ್ಕಳಿಗೆ ರಜೆ ನೀಡುವಂತೆ ಶಾಲೆಗಳಿಗೆ ಸೂಚಿಸಿದ್ದಾರೆ. ಪ್ರತಿ ವಾರ ಕೋವಿಡ್ ಟಾಸ್ಕ್ಫೋರ್ಸ್ ಸಭೆ ನಡೆಸಿ ಪರಿಸ್ಥಿತಿ ಅವಲೋಕಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಸದ್ಯಕ್ಕೆ ಆತಂಕ ಪಡುವ ಪರಿಸ್ಥಿತಿ ಬಂದಿಲ್ಲವಾದರೂ ವೆಂಟಿಲೇಟರ್, ಆಕ್ಸಿಜನ್, ಔಷಧ ಸೇರಿ ಇತ್ಯಾದಿ ಅಗತ್ಯಗಳನ್ನು ಸಿದ್ದಪಡಿಸಿಟ್ಟುಕೊಳ್ಳಿ. ವಯಸ್ಸಾದವರು, ಗರ್ಭಿಣಿಯರು, ಹೃದಯ ಸಂಬAಧಿ, ಶ್ವಾಸಕೋಶ ಸಮಸ್ಯೆ ಇರುವವರು ಮುನ್ನೆಚ್ಚರಿಕೆ ಕ್ರಮವಾಗಿ ಮಾಸ್ಕ್ ಧರಿಸುವುದು ಒಳ್ಳೆಯದು. ಗರ್ಭಿಣಿಯರಲ್ಲಿ ಆರೋಗ್ಯ ಸಮಸ್ಯೆ ಕಂಡುಬAದರೆ, ಅವರನ್ನು ಒಂದು ಆಸ್ಪತ್ರೆಯಿಂದ ಮತ್ತೊಂದು ಆಸ್ಪತ್ರೆಗೆ ವರ್ಗಾಯಿಸುವುದನ್ನು ನಿಲ್ಲಿಸಿ, ಎಲ್ಲಾ ಆಸ್ಪತ್ರೆಗಳಲ್ಲೂ ಅಗತ್ಯ ವ್ಯವಸ್ಥೆ ಮಾಡಿಕೊಂಡಿರಬೇಕು. ಶೀತ, ನೆಗಡಿ, ಜ್ವರ ಇರುವ ಮಕ್ಕಳನ್ನು ಪೋಷಕರು ಶಾಲೆಗೆ ಕಳುಹಿಸದಿರುವುದು ಆರೋಗ್ಯಕರ. ಕಳೆದ ಜನವರಿಯಿಂದಲೂ ಕೊರೊನಾ ಪ್ರಕರಣಗಳು ಅಲ್ಲಲ್ಲಿ ಒಂದೊ - ಎರಡು ಕಾಣಬರುತ್ತಿದ್ದು, ಮೇ ತಿಂಗಳಲ್ಲಿ ಉಲ್ಬಣವಾಗಿದ್ದು ಮೇ ತಿಂಗಳ ನಾಲ್ಕನೇ ವಾರಕ್ಕೆ ೬೨ ಪ್ರಕರಣಗಳು ವರದಿಯಾಗಿವೆ.
ಡಿಫೆನ್ಸ್ ಕಾರಿಡಾರ್ಗೆ ಎಂಬಿ ಪಾಟೀಲ್ ಪಟ್ಟು
ಬೆಂಗಳೂರು, ಮೇ ೨೬: ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಹೆಚ್ಎಎಲ್ನ ಅಡ್ವಾನ್ಸ್÷್ಡ ಮೀಡಿಯಂ ಕಾಂಬ್ಯಾಟ್ ಏರ್ಕ್ರಾಫ್ಟ್ (ಎಎಂಸಿಎ) ಮತ್ತು ಲೈಟ್ ಕಾಂಬ್ಯಾಟ್ ಏರ್ಕ್ರಾಫ್ಟ್ (ಎಲ್ಸಿಎ) ಉತ್ಪಾದನೆಯನ್ನು ಕರ್ನಾಟಕದಿಂದ ತಮ್ಮ ರಾಜ್ಯಕ್ಕೆ ಸ್ಥಳಾಂತರಿಸಲು ಒತ್ತಾಯಿಸುತ್ತಿದ್ದಾರೆ ಎಂಬ ವರದಿಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರು, ಅವರ ಹೇಳಿಕೆ "ಅನುಚಿತ ಮತ್ತು ಕಳವಳಕಾರಿ" ಎಂದು ಕರೆದಿದ್ದಾರೆ. ಇದೇ ವೇಳೆ ಭಾರತದ ಬಾಹ್ಯಾಕಾಶ ಮತ್ತು ರಕ್ಷಣಾ ವಲಯಕ್ಕೆ ರಾಜ್ಯದ ಕೊಡುಗೆಯನ್ನು ಎತ್ತಿ ತೋರಿಸಿದ ಸಚಿವ ಎಂಬಿ ಪಾಟೀಲ್ ಅವರು, ಕರ್ನಾಟಕಕ್ಕೆ ರಕ್ಷಣಾ ಕೈಗಾರಿಕಾ ಕಾರಿಡಾರ್ ನೀಡಬೇಕೆಂದು ಒತ್ತಾಯಿಸಿದರು. ಈ ಸಂಬAಧ ಶೀಘ್ರದಲ್ಲೇ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ, ರಾಜ್ಯಕ್ಕೆ ಸಿಗಬೇಕಾಗಿರುವ ಡಿಫೆನ್ಸ್ ಕಾರಿಡಾರ್ ಕೊಡುವಂತೆ ಆಗ್ರಹಿಸಲಾಗುವುದು ಪಾಟೀಲ್ ತಿಳಿಸಿದ್ದಾರೆ. "ನಾನು ಇದರ ಬಗ್ಗೆ ಪ್ರಧಾನ ಕಾರ್ಯದರ್ಶಿಯೊಂದಿಗೆ ಚರ್ಚಿಸುತ್ತಿದ್ದೇನೆ ಮತ್ತು ಮುಖ್ಯಮಂತ್ರಿಯೊAದಿಗೆ ಚರ್ಚಿಸುತ್ತೇನೆ. ನಮ್ಮ ರಾಜ್ಯದ ಕೇಂದ್ರ ಸಚಿವರೊಂದಿಗೆ ಸಹ ಮಾತನಾಡುತ್ತೇನೆ. ಚಂದ್ರಬಾಬು ನಾಯ್ಡು ಅಂತಹ ಹೇಳಿಕೆ ನೀಡಿದ್ದರೆ, ಅದು ತಪ್ಪಾಗುತ್ತದೆ. ಅವರು ತಮ್ಮ ರಾಜ್ಯದಲ್ಲಿ ಊಂಐ ಘಟಕವನ್ನು ಸ್ಥಾಪಿಸಲು ಕೇಳಬಹುದು, ಆದರೆ ಅವರು ಕರ್ನಾಟಕದಲ್ಲಿ ಇರುವುದನ್ನು ಸ್ಥಳಾಂತರಿಸಲು ಕೇಳಿದ್ದರೆ ಅದು ಸರಿಯಲ್ಲ ಮತ್ತು ಕಳವಳಕಾರಿ" ಎಂದು ಸಚಿವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಜೂ. ೧ ರಂದು ಯಕ್ಷಧ್ರುವ ಪಟ್ಲ ದಶಮ ಸಂಭ್ರಮ
ಮAಗಳೂರು, ಮೇ ೨೬: ಜೂನ್ ೧ ರಂದು ಮಂಗಳೂರಿನಲ್ಲಿ ನಡೆಯುವ ಒಂದು ದಿನದ ಯಕ್ಷಧ್ರುವ ಪಟ್ಲ ದಶಮ ಸಂಭ್ರಮ ೨೦೨೫ ಮತ್ತು ರಾಷ್ಟಿçÃಯ ಕಲಾ ಸಮ್ಮೇಳನವನ್ನು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಅವರು ಉದ್ಘಾಟಿಸಲಿದ್ದಾರೆ. ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಆಯೋಜಿಸಿರುವ ಈ ಕಾರ್ಯಕ್ರಮ, ಜೂನ್ ೧ ರಂದು ಬೆಳಿಗ್ಗೆ ೯.೩೦ ರಿಂದ ರಾತ್ರಿ ೧೧ ರವರೆಗೆ ದಿನವಿಡೀ ನಡೆಯಲಿದೆ. ಕಾರ್ಯಕ್ರಮದಲ್ಲಿ ಕಲಾ ಪ್ರದರ್ಶನಗಳು ಮತ್ತು ಸಾಂಸ್ಕೃತಿಕ ಪ್ರದರ್ಶನಗಳು ನಡೆಯಲಿವೆ. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವೈಪಿಎಫ್ಟಿಯ ಸತೀಶ್ ಶೆಟ್ಟಿ ಅವರು, ವಿವಿಧ ಕ್ಷೇತ್ರಗಳಲ್ಲಿನ ಸಾಧಕರನ್ನು ಈ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು ಎಂದು ತಿಳಿಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಎಂ. ಮೋಹನ್ ಆಳ್ವ ಅವರ ಸಮನ್ವಯದಲ್ಲಿ, ಈ ಕಾರ್ಯಕ್ರಮದಲ್ಲಿ ಯಕ್ಷಗಾನ ಮತ್ತು ಸಾಂಪ್ರದಾಯಿಕ ಕಲಾ ಛಾಯಾಗ್ರಹಣ ಪ್ರದರ್ಶನದ ಜೊತೆಗೆ ಎಂಟು ಭಾರತೀಯ ಶಾಸ್ತ್ರೀಯ ಕಲಾ ಪ್ರಕಾರಗಳನ್ನು ಪ್ರದರ್ಶಿಸಲಾಗುವುದು ಎಂದರು. ಅಂದು ಮಧ್ಯಾಹ್ನ ೧ ಗಂಟೆಗೆ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರನ್ನು ಸನ್ಮಾನಿಸಲಾಗುವುದು ಮತ್ತು ಕ್ರಿಕೆಟಿಗ ರೋಹಿತ್ ಶರ್ಮಾ ಅವರು ವಿಶೇಷ ಅತಿಥಿಯಾಗಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ಅವರು ಹೇಳಿದರು.
ಭೋವಿ ಅಭಿವೃದ್ಧಿ ನಿಗಮ ಹಗರಣ ಆಸ್ತಿ ಮುಟ್ಟುಗೋಲು
ಬೆಂಗಳೂರು, ಮೇ ೨೬: ರಾಜ್ಯ ಸರ್ಕಾರದ ಇಲಾಖೆಯಲ್ಲಿ ನಡೆದಿರುವ ಹಣಕಾಸು ಅಕ್ರಮಗಳ ತನಿಖೆಯ ಭಾಗವಾಗಿ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ (ಕೆಬಿಡಿಸಿ) ಇಬ್ಬರು ಮಾಜಿ ಅಧಿಕಾರಿಗಳ ೨೬ ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿರುವುದಾಗಿ ಜಾರಿ ನಿರ್ದೇಶನಾಲಯ ಸೋಮವಾರ ತಿಳಿಸಿದೆ. ಭೋವಿ ಪರಿಶಿಷ್ಟ ಜಾತಿಗೆ ಸೇರಿದ ವ್ಯಕ್ತಿಗಳ ಕಲ್ಯಾಣಕ್ಕಾಗಿ ಕೆಬಿಡಿಸಿ ಕೆಲಸ ಮಾಡುತ್ತದೆ. ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ರೂ. ೨೬.೨೭ ಕೋಟಿ ಮೌಲ್ಯದ ಆದರೆ ಪ್ರಸ್ತುತ ಮಾರುಕಟ್ಟೆ ಮೌಲ್ಯ ರೂ. ೪೦ ಕೋಟಿ ಹೊಂದಿರುವ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ತಾತ್ಕಾಲಿಕ ಆದೇಶ ಹೊರಡಿಸಲಾಗಿದೆ ಎಂದು ಕೇಂದ್ರ ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ. ಈ ತನಿಖೆಯ ಭಾಗವಾಗಿ ನಾಗರಾಜಪ್ಪ ಮತ್ತು ಲೀಲಾವತಿ ಅವರನ್ನು ಏಪ್ರಿಲ್ನಲ್ಲಿ ಇಡಿ ಬಂಧಿಸಿದೆ ಮತ್ತು ಪ್ರಸ್ತುತ ಅವರು ನ್ಯಾಯಾಂಗ ಬಂಧನದಲ್ಲಿ ಜೈಲಿನಲ್ಲಿದ್ದಾರೆ. ಮಧ್ಯವರ್ತಿಗಳು ಮತ್ತು ಅವರ ಸಹಚರರೊಂದಿಗೆ ಶಾಮೀಲಾಗಿ, ೭೫೦ಕ್ಕೂ ಹೆಚ್ಚು ನಕಲಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಸಾಲ, ಸಬ್ಸಿಡಿ ಮತ್ತು ಹಣಕಾಸಿನ ನೆರವು ನೀಡುವ ಮೂಲಕ ಕೆಬಿಡಿಸಿಯಿಂದ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಇಡಿ ಆರೋಪಿಸಿದೆ.
ಆಪರೇಷನ್ ಸಿಂಧೂರ್ ಆರಂಭಿಸಿದ ಅರ್ಧ ಗಂಟೆ ನಂತರ ಪಾಕಿಸ್ತಾನಕ್ಕೆ ಮಾಹಿತಿ
ನವದೆಹಲಿ, ಮೇ ೨೬: ಭಾರತ ಆಪರೇಷನ್ ಸಿಂಧೂರ್ ಬಗ್ಗೆ ಪಾಕಿಸ್ತಾನದ ಸೇನೆಗೆ ಮೊದಲೇ ಮಾಹಿತಿ ನೀಡಿದೆ ಎಂಬ ಕಾಂಗ್ರೆಸ್ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು, ಇಸ್ಲಾಮಾಬಾದ್ನ ಭೂಪ್ರದೇಶದಲ್ಲಿರುವ ಒಂಬತ್ತು ಭಯೋತ್ಪಾದಕ ತಾಣಗಳ ಮೇಲೆ ಭಾರತ ದಾಳಿ ನಡೆಸಿದ ನಂತರವೇ ಮಾಹಿತಿ ನೀಡಲಾಯಿತು ಎಂದು ಸೋಮವಾರ ಸಂಸದೀಯ ಸಮಿತಿಗೆ ತಿಳಿಸಿದ್ದಾರೆ. ಈ ತಿಂಗಳ ಆರಂಭದಲ್ಲಿ ಜೈಶಂಕರ್ ಮಾಧ್ಯಮಗಳಿಗೆ ಕಾರ್ಯಾಚರಣೆಯ ಆರಂಭದಲ್ಲಿ ಭಾರತವು, ನಾವು ಭಯೋತ್ಪಾದಕ ನೆಲೆಗಳ ಮೇಲೆ ಮಾತ್ರ ದಾಳಿ ಮಾಡುತ್ತಿದ್ದೇವೆ ಮತ್ತು ಮಿಲಿಟರಿಯ ಮೇಲೆ ಅಲ್ಲ. ಆದ್ದರಿಂದ ನೀವು ಈ ದಾಳಿಯಿಂದ ದೂರವಿರಬೇಕು ಮತ್ತು ಮಧ್ಯಪ್ರವೇಶಿಸಬಾರದು ಎಂಬ ಸಂದೇಶವನ್ನು ಪಾಕಿಸ್ತಾನಕ್ಕೆ ಕಳುಹಿಸಲಾಗಿತ್ತು ಎಂದು ಹೇಳಿದ್ದರು. ಜೈಶಂಕರ್ ಅವರ ಈ ಹೇಳಿಕೆ ಕಾಂಗ್ರೆಸ್ನಿAದ ತೀವ್ರ ಟೀಕೆಗೆ ಗುರಿಯಾಗಿತ್ತು. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಈ ಕ್ರಮವನ್ನು ಅಪರಾಧ ಎಂದು ಟೀಕಿಸಿದ್ದರು ಮತ್ತು ಸಚಿವರಿಗೆ ಇದಕ್ಕೆ ಅಧಿಕಾರ ನೀಡಿದವರು ಯಾರು? ಎಂದು ಪ್ರಶ್ನಿಸಿದ್ದರು. ಅಲ್ಲದೆ ಇದರ ಪರಿಣಾಮವಾಗಿ ಭಾರತ ಎಷ್ಟು ವಿಮಾನಗಳನ್ನು ಕಳೆದುಕೊಂಡಿತು ಎಂದು ಪದೇ ಪದೇ ಕೇಳಿದ್ದರು. ಇಂದು ವಿದೇಶಾಂಗ ವ್ಯವಹಾರಗಳ ಕುರಿತ ಸಂಸದೀಯ ಸಮಾಲೋಚನಾ ಸಮಿತಿಯ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ ವಿದೇಶಾಂಗ ಸಚಿವರು, ಪಾಕಿಸ್ತಾನದೊಂದಿಗೆ ತಾವು ಎಂದಿಗೂ ಮಾತನಾಡಿಲ್ಲ. ಪಾಕಿಸ್ತಾನದ ಕೋರಿಕೆಯ ಮೇರೆಗೆ ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸುವ ನಿರ್ಧಾರವನ್ನು ದ್ವಿಪಕ್ಷೀಯವಾಗಿ ತೆಗೆದುಕೊಳ್ಳಲಾಗಿದೆ ಎಂದು ಹೇಳುವ ಮೂಲಕ ಅಮೇರಿಕಾದ ಹಸ್ತಕ್ಷೇಪದ ಬಗ್ಗೆ ಸ್ಪಷ್ಟನೆ ನೀಡಿದರು.