ಮಡಿಕೇರಿ, ಮೇ ೨೭: ಮಡಿಕೇರಿ ನಗರದ ದೇಚೂರು ಶ್ರೀರಾಮ-ವಿದ್ಯಾ ಗಣಪತಿ ದೇವಸ್ಥಾನದ ೨೮ನೇ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು.
ಈ ಪ್ರಯುಕ್ತ ಬೆಳಗ್ಗೆಯಿಂದಲೇ ಉದಯ್ ಕುಮಾರ್ ತಂತ್ರಿಗಳ ನೇತೃತ್ವದಲ್ಲಿ ನಿರ್ಮಾಲ್ಯ, ಪುಣ್ಯಾಹ ವಾಚನ, ದೇವತಾ ಪ್ರಾರ್ಥನೆ, ಮಹಾಗಣಪತಿ ಮೂರ್ತಿಗೆ ಅಭಿಷೇಕ, ಬಯಲು ಆಂಜನೇಯ ಪೂಜೆಯೊಂದಿಗೆ ಮಹಾಮಂಗಳಾರತಿ, ಅಷ್ಠದ್ರವ್ಯ ಮಹಾಗಣಪತಿ, ನವಗ್ರಹ ಹೋಮ, ನಾಗಪೂಜೆ, ಮಧ್ಯಾಹ್ನ ಮಹಾಪೂಜೆಯೊಂದಿಗೆ ಮಹಾಮಂಗಳಾರತಿ ನಂತರ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನೆರವೇರಿತು.