ಸಂಬAಧಿಕರAತೆ ತೆರಳಿ ರೂ. ೨೫ ಲಕ್ಷ ಮೌಲ್ಯದ ಚಿನ್ನ ಕಳ್ಳತನ
ಬೆಂಗಳೂರು, ಜೂ. ೩: ನಗರದ ಕಲ್ಯಾಣ ಮಂಟಪವೊAದರಲ್ಲಿ ಕಳ್ಳರು ಕೈಚಳಕ ತೋರಿಸಿದ್ದು, ಸಂಬAಧಿಕರAತೆ ವಧುವಿನ ಕೋಣೆಗೆ ತೆರಳಿ ರೂ. ೨೫ ಲಕ್ಷದ ಚಿನ್ನ ಕದ್ದು ಪರಾರಿಯಾಗಿರುವ ಘಟನೆ ಮಾಗಡಿ ರಸ್ತೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವೆಸ್ಟ್ ಆಫ್ ಕಾರ್ಡ್ ರಸ್ತೆಯ ಸಪ್ತಪದಿ ಕಲ್ಯಾಣ ಮಂಪಟದಲ್ಲಿ ನಡೆದ ಡಾ. ರಾಜ್ಕುಮಾರ್ ಅಭಿಮಾನಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಶಿವಶಂಕರ್ ಅವರ ಮಗಳ ಮದುವೆಯಲ್ಲಿ ಈ ಕಳ್ಳತನ ನಡೆದಿದೆ. ಈ ಬಗ್ಗೆ ಶಿವಶಂಕರ್ ದೂರು ಆದರಿಸಿ ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರತಕ್ಷತೆ ವೇಳೆ ಸಂಬAಧಿಕರ ಸೋಗಿನಲ್ಲಿ ವಧುವಿನ ಕೋಣೆಗೆ ತೆರಳಿರುವ ಕಿಡಿಗೇಡಿಗಳು ಆಭರಣವನ್ನು ಕಳವು ಮಾಡಿ ಪರಾರಿಯಾಗಿದ್ದಾರೆ. ಸಾಮಾನ್ಯವಾಗಿ, ಮದುವೆ ಮಂಟಪಗಳಿಗೆ ಬರುವ ಅತಿಥಿಗಳಿಗೆ ಕೋಣೆಯ ಬಾಗಿಲುಗಳಿಗೆ ತಮ್ಮದೇ ಆದ ಬೀಗಗಳನ್ನು ಬಳಸುವಂತೆ ಸೂಚಿಸಲಾಗುತ್ತದೆ. ಆದರೆ, ಈ ಮದುವೆ ಮಂಟಪದಲ್ಲಿ ಮದುವೆ ಮಂಟಪದ ಸಿಬ್ಬಂದಿಯೇ ಬೀಗಗಳನ್ನು ಒದಗಿಸುತ್ತಿದ್ದರು ಎನ್ನಲಾಗಿದೆ. ವಧುವಿನ ಕೋಣೆಯ ಕಡೆಗೆ ಹೋಗುವ ಮಾರ್ಗದಲ್ಲಿ ಯಾವುದೇ ಸಿಸಿಟಿವಿ ಕ್ಯಾಮೆರಾಗಳಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಹೂರ್ತ ಮುಗಿದ ಬಳಿಕ ಆಭರಣ ಪರಿಶೀಲಿಸಿದಾಗ ಕಳ್ಳತನ ಕೃತ್ಯವು ಬೆಳಕಿಗೆ ಬಂದಿದೆ. ವಧುವಿನ ಬ್ಯಾಗ್ಗಳಲ್ಲಿ ಇರಿಸಲಾಗಿದ್ದ ರೂ. ೩,೦೦,೦೦೦ ನಗದು ಮತ್ತು ಆಭರಣಗಳು ನಾಪತ್ತೆಯಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ತನಿಖೆ ನಡೆಯುತ್ತಿದೆ.
ಬಾಲಕಿಯ ಮೇಲೆ ಅತ್ಯಾಚಾರ : ಆರೋಪಿ ಬಂಧನ
ಚಿಕ್ಕಬಳ್ಳಾಪುರ, ಜೂ. ೩: ೬ ವರ್ಷ ವಯಸ್ಸಿನ ಬಾಲಕಿ ಮೇಲೆ ೫೫ ವರ್ಷದ ವ್ಯಕ್ತಿ ಅತ್ಯಾಚಾರ ಎಸಗಿರುವ ಆರೋಪ ಚಿಕ್ಕಬಳ್ಳಾಪುರದಲ್ಲಿ ಕೇಳಿಬಂದಿದೆ. ಸಂತ್ರಸ್ತ ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಚಿಕ್ಕಬಳ್ಳಾಪುರ ಮಹಿಳಾ ಪೊಲೀಸರು ಮೌಲ್ವಿಯ ತಂದೆಯ ವಿರುದ್ಧ ಎಫ್ಐಆರ್ ದಾಖಲಿಸಿ ನಂತರ ಬಂಧನಕ್ಕೊಳಪಡಿಸಿದ್ದಾರೆ. ಮೌಲ್ವಿಯ ತಂದೆಯಾಗಿರುವ ಆರೋಪಿಗೆ ಗೌರವದ ದೃಷ್ಟಿಯಿಂದ ಮಸೀದಿ ಆವರಣದಲ್ಲಿ ಉಳಿಯಲು ಕೊಠಡಿ ನೀಡಲಾಗಿದ್ದು, ಇದನ್ನು ದುರುಪಯೋಗಪಡಿಸಿಕೊಂಡಿರುವ ಆರೋಪಿಯು ಬಾಲಕಿಗೆ ಚಾಕೊಲೇಟ್ ಕೊಡಿಸುವ ಆಸೆ ತೋರಿಸಿ, ಅತ್ಯಾಚಾರ ಎಸಗಿದ್ದಾನೆಂದು ಆರೋಪಿಸಲಾಗಿದೆ.
೧೮ ಬಾರಿ ಸ್ಕೂçಡ್ರೆöÊವರ್ನಿಂದ ಚುಚ್ಚಿ ಯುವತಿಯ ಹತ್ಯೆ
ಮೊರಾದಾಬಾದ್, ಜೂ. ೩: ಮೊರಾದಾಬಾದ್ ಜಿಲ್ಲೆಯ ಮಿಲಾಕ್ ಗ್ರಾಮದಲ್ಲಿ ಯುವತಿಯೊಬ್ಬಳನ್ನು ಸ್ಕೂçಡ್ರೆöÊವರ್ನಿಂದ ೧೮ ಬಾರಿ ಇರಿದು ಕೊಂದಿರುವ ಭೀಕರ ಘಟನೆ ನಡೆದಿದೆ. ೨೦ ವರ್ಷದ ಯುವತಿ ಹೊಲಕ್ಕೆ ತೆರಳಿ ಹಿಂತಿರುಗಿರಲಿಲ್ಲ. ಆಕೆಯ ಶವ ಹೊಲದಲ್ಲಿ ಚಾಕುವಿನಿಂದ ಇರಿದ ಗುರುತುಗಳೊಂದಿಗೆ ಪತ್ತೆಯಾಗಿತ್ತು. ಆರಿಫ್ ತನ್ನ ಮಗಳನ್ನು ಹಿಂಬಾಲಿಸಿ ಮಾತನಾಡುವಂತೆ ಒತ್ತಾಯಿಸುತ್ತಿದ್ದ ಎಂದು ಯುವತಿಯ ತಾಯಿ, ಆರೋಪಿ ಮೊಹಮ್ಮದ್ ರಫಿ ಅಲಿಯಾಸ್ ಆರಿಫ್ ವಿರುದ್ಧ ಎಫ್ಐಆರ್ ದಾಖಲಿಸಿದಸದರು. ಪೊಲೀಸರು ಆರೋಪಿಯನ್ನು ಬಂಧಿಸಿದ್ದು ತೀವ್ರ ವಿಚಾರಣೆ ನಡೆಸಿದ್ದಾರೆ. ಆರೋಪಿಯು ತನಗೆ ಯುವತಿಯ ಪರಿಚಯವಿದ್ದು ಇಬ್ಬರೂ ಫೋನ್ನಲ್ಲಿ ಮಾತನಾಡುತ್ತಿದ್ದೆವು ಎಂದು ಹೇಳಿಕೊಂಡಿದ್ದಾನೆ. ಯುವತಿ ಆರೋಪಿಗೆ ಕರೆ ಮಾಡಿ ತನ್ನನ್ನು ಭೇಟಿಯಾಗಲು ಕೇಳಿಕೊಂಡಿದ್ದಳು. ಸಂಜೆ ಆರೋಪಿ ಯುವತಿಯನ್ನು ಭೇಟಿಯಾಗಲು ಬಂದಾಗ, ಆಕೆ ಮೆಕ್ಕೆಜೋಳದ ಹೊಲದಲ್ಲಿ ಹುಲ್ಲು ಕತ್ತರಿಸುತ್ತಿದ್ದಳು. ರಫಿಯನ್ನು ನೋಡಿದ ಯುವತಿ ಆತನ ಮೇಲೆ ಹಲ್ಲೆಗೆ ಮುಂದಾಗಿದ್ದಾಳೆ. ಇದರಿಂದ ಕೋಪಗೊಂಡ ಮೊಹಮ್ಮದ್ ರಫಿ ಯುವತಿಗೆ ದುಪ್ಪಟ್ಟಾದಿಂದ ಕತ್ತು ಹಿಸುಕಿದ್ದಾನೆ. ಇದರಿಂದಾಗಿ ಆಕೆ ಮೂರ್ಛೆ ಹೋಗಿದ್ದಾಳೆ. ನಂತರ ಆಕೆಯ ಮೇಲೆ ಸ್ಕೂçಡ್ರೆöÊವರ್ನಿಂದ ೧೮ ಬಾರಿ ಇರಿದು ಆಕೆಯನ್ನು ಅಲ್ಲಿಯೇ ಬಿಟ್ಟು ಓಡಿಹೋಗಿದ್ದಾನೆ. ಪೊಲೀಸರು ಆರೋಪಿಯಿಂದ ಸ್ಕೂçಡ್ರೆöÊವರ್ ಮತ್ತು ಯುವತಿಯ ಫೋನ್ ಅನ್ನು ವಶಪಡಿಸಿಕೊಂಡಿದ್ದಾರೆ.
ಪಾಕಿಸ್ತಾನ ಜೊತೆ ಸೇನೆಯ ಸೂಕ್ಷö್ಮ ಮಾಹಿತಿ ಹಂಚಿಕೆ: ಬಂಧನ
ಪAಜಾಬ್, ಜೂ. ೩: ಆಪರೇಷನ್ ಸಿಂಧೂರದ ಸಮಯದಲ್ಲಿ ಸೇನೆಯ ಚಲನವಲನಗಳಿಗೆ ಸಂಬAಧಿಸಿದ ಸೂಕ್ಷö್ಮ ಮಾಹಿತಿಯನ್ನು ಪಾಕಿಸ್ತಾನಿ ಗುಪ್ತಚರರೊಂದಿಗೆ ಹಂಚಿಕೊAಡ ಆರೋಪದ ಮೇಲೆ ಪಂಜಾಬ್ನ ತರಣ್ ಜಿಲ್ಲೆಯ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪಾಕಿಸ್ತಾನಿ ಗುಪ್ತಚರ ಕಾರ್ಯಕರ್ತರೊಂದಿಗೆ (ಪಿಐಒ) ಮಾಹಿತಿ ಹಂಚಿಕೊAಡ ಮೊಬೈಲ್ ಫೋನ್ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಯು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಇಂಟರ್ ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಜೊತೆ ಸಂಪರ್ಕದಲ್ಲಿದ್ದನೆAದು ಆರೋಪಿಸಲಾಗಿದೆ. ಸೂಕ್ಷ್ಮ ಮಾಹಿತಿಯನ್ನು ನೀಡಲು ಹಣವನ್ನು ಸಹ ಪಡೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ತರಣ್ನ ಮೊಹಲ್ಲಾ ನಿವಾಸಿ ಗಗನ್ದೀಪ್ ಸಿಂಗ್ ಅಲಿಯಾಸ್ ಗಗನ್ ಎಂದು ಗುರುತಿಸಲಾಗಿದೆ ಎಂದು ಪೊಲೀಸ್ ಮಹಾನಿರ್ದೇಶಕ ಗೌರವ್ ಯಾದವ್ ತಿಳಿಸಿದ್ದಾರೆ. ತರಣ್ ಪೊಲೀಸರು ಮತ್ತು ಪೊಲೀಸರ ಕೌಂಟರ್ ಇಂಟೆಲಿಜೆನ್ಸ್ ವಿಭಾಗದ ಜಂಟಿ ಕಾರ್ಯಾಚರಣೆಯಲ್ಲಿ ಆತನನ್ನು ಬಂಧಿಸಲಾಗಿದೆ.
ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಹತ್ಯೆ: ಇಬ್ಬರಿಗೆ ಗಲ್ಲು ಶಿಕ್ಷೆ
ಪಾಟ್ನಾ, ಜೂ. ೩: ಎಂಟು ವರ್ಷದ ದಲಿತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಹತ್ಯೆ ಮಾಡಿದ ಪ್ರಕರಣದಲ್ಲಿ ಸುಶೀಲ್ ಕುಮಾರ್ ರೈ ಮತ್ತು ಓಂ ಪ್ರಕಾಶ್ ಝಾ ಎಂಬ ಇಬ್ಬರಿಗೆ ಮಧುಬನಿ ಜಿಲ್ಲೆಯ ನ್ಯಾಯಾಲಯ ಮಂಗಳವಾರ ಮರಣದಂಡನೆ ಶಿಕ್ಷೆ ವಿಧಿಸಿದೆ. ಮಧುಬನಿಯ ಪೋಕ್ಸೋ ನ್ಯಾಯಾಲಯದ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಸೈಯದ್ ಮೊಹಮ್ಮದ್ ಫಜ್ಲುಲ್ ಬಾರಿ ಅವರು, ಅಪರಾಧಿಗಳಿಗೆ ಗಲ್ಲು ಶಿಕ್ಷೆ ಹಾಗೂ ತಲಾ ರೂ. ೧.೨೦ ಲಕ್ಷ ದಂಡವನ್ನು ವಿಧಿಸಿದ್ದಾರೆ. ಇಬ್ಬರು ಅಪರಾಧಿಗಳಿಂದ ದಂಡವಾಗಿ ಪಡೆದ ಮೊತ್ತವನ್ನು ಸಂತ್ರಸ್ತ ಬಾಲಕಿಯ ಕುಟುಂಬಕ್ಕೆ ನೀಡಲಾಗುವುದು ಎಂದು ನ್ಯಾಯಾಲಯವು ತನ್ನ ಆದೇಶದಲ್ಲಿ ತಿಳಿಸಿದೆ. ಇದರ ಜೊತೆಗೆ, ಅತ್ಯಾಚಾರ ಸಂತ್ರಸ್ತೆಯ ಕುಟುಂಬಕ್ಕೆ ಪರಿಹಾರವಾಗಿ ರೂ. ೮ ಲಕ್ಷಗಳನ್ನು ಪಾವತಿಸಲು ನ್ಯಾಯಾಲಯ, ಸರ್ಕಾರಕ್ಕೆ ನಿರ್ದೇಶನ ನೀಡಿದೆ. ೨೦೨೩ ರಲ್ಲಿ ಮಧುಬನಿ ಜಿಲ್ಲೆಯ ಹಳ್ಳಿಯೊಂದರಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿತ್ತು. ಈ ಘಟನೆ ‘ಅಪರೂಪದ' ವರ್ಗಕ್ಕೆ ಸೇರಿದ್ದು, ಅಪರಾಧಿಗಳಿಗೆ ನೀಡಲಾಗುವ ಕಠಿಣ ಶಿಕ್ಷೆಯು ಮಹಿಳೆಯರ ಮೇಲಿನ ಅಪರಾಧ ಘಟನೆಗಳನ್ನು ತಡೆಯುವಲ್ಲಿ ಕೆಲಸ ಮಾಡುತ್ತದೆ ಎಂದು ನ್ಯಾಯಾಲಯ ಹೇಳಿದೆ.