ಶ್ರೀಮಂಗಲ, ಜೂ. ೪: ಪೊನ್ನಂಪೇಟೆ ಕೊಡವ ಸಮಾಜದ ೨೦೨೫-೨೮ನೇ ಸಾಲಿನ ಆಡಳಿತ ಮಂಡಳಿಗೆ ಅಧ್ಯಕ್ಷರಾಗಿ ಕಾಳಿಮಾಡ ಎಂ.ಮೋಟಯ್ಯ, ಗೌರವ ಕಾರ್ಯದರ್ಶಿಯಾಗಿ ಕೋಟೇರ ಕಿಶನ್ ಉತ್ತಪ್ಪ, ಉಪಾಧ್ಯಕ್ಷೆಯಾಗಿ ಚಿರಿಯಪಂಡ ಇಮ್ಮಿ ಬೋಜಮ್ಮ, ಜಂಟಿ ಕಾರ್ಯದರ್ಶಿಯಾಗಿ ಅಲೇಮಾಡ ಸುಧೀರ್ ಎರಡನೇ ಅವಧಿಗೆ ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ. ಪದಾಧಿಕಾರಿಗಳೊಂದಿಗೆ ಖಜಾಂಚಿಯಾಗಿ ಚೆಪ್ಪುಡಿರ ಕಾರ್ಯಪ್ಪ ಆಯ್ಕೆಯಾಗಿದ್ದಾರೆ.

ಪೊನ್ನಂಪೇಟೆ ಕೊಡವ ಸಮಾಜದಲ್ಲಿ ಕೊಡವ ಸಮಾಜದ ನ್ಯಾಯಪೀಠ ಅಧ್ಯಕ್ಷ ಚಿರಿಯಪಂಡ ಉಮೇಶ್ ಉತ್ತಪ್ಪ ಅಧ್ಯಕ್ಷತೆಯಲ್ಲಿ ಪದಾಧಿಕಾರಿಗಳ ಆಯ್ಕೆ ಸಭೆ ನಡೆಯಿತು.

ಸಭೆಯಲ್ಲಿ ಖಾಯಂ ಆಹ್ವಾನಿತ ನಿರ್ದೇಶಕ ಚೆಪ್ಪುಡಿರ ಕಿಟ್ಟು ಅಯ್ಯಪ್ಪ, ನಿರ್ದೇಶಕರಾದ ಕಳ್ಳಿಚಂಡ ಎಸ್. ದೇವಯ್ಯ (ಚಿಪ್ಪ), ಕೊಣಿಯಂಡ ಎಸ್. ಸೋಮಯ್ಯ (ಸಂಜು), ಗುಮ್ಮಟ್ಟಿರ ಜಿ. ಗಂಗಮ್ಮ, ಮೂಕಳೇರ ಕಾವೇರಮ್ಮ (ಕಾವ್ಯ), ಚೀರಂಡ ಕಂದಾ ಸುಬ್ಬಯ್ಯ, ಅಜ್ಜಿಕುಟ್ಟಿರ ಪ್ರಥ್ವಿ ಸುಬ್ಬಯ್ಯ, ಅಡ್ಡಂಡ ಪ್ರಕಾಶ್ ಕುಶಾಲಪ್ಪ ಹಾಜರಿದ್ದರು.