ಪೊನ್ನಂಪೇಟೆ, ಜೂ. ೪: ಗೋಣಿಕೊಪ್ಪಲು ಕಾವೇರಿ ಪದವಿ ಪೂರ್ವ ಕಾಲೇಜಿನ ೨೦೨೫-೨೬ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ವಿದ್ಯಾರ್ಥಿಗಳನ್ನು ಸಡಗರ ಸಂಭ್ರಮದಿAದ ಬರಮಾಡಿಕೊಂಡರು.
ವಿದ್ಯಾರ್ಥಿಗಳನ್ನು ಕಾಲೇಜಿಗೆ ಆತ್ಮೀಯವಾಗಿ ಪರಿಚಯ ಮಾಡಿಕೊಂಡ ಉಪನ್ಯಾಸಕರು, ಎಲ್ಲಾ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಒಂದು ಸುತ್ತು ಕಾಲೇಜು ಆವರಣದ ಪರಿಚಯ ಮಾಡಿಸಿದರು. ಕಾಲೇಜು ಅವರಣದೊಳಗೆ ಇರುವ ವಿರಾಸೇನಾನಿಗಳಾದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಮತ್ತು ಜನರಲ್ ತಿಮ್ಮಯ್ಯ ಅವರ ಜೋಡಿ ಪ್ರತಿಮೆಗಳ ದರ್ಶನ ಮಾಡಿಸಿ, ಆ ಇಬ್ಬರು ಮಹನೀಯರನ್ನು ಆದರ್ಶವಾಗಿಟ್ಟುಕೊಂಡು, ಸಮಯಪಾಲನೆ, ಶಿಸ್ತು ಹಾಗೂ ದೇಶಭಕ್ತಿಯನ್ನು ಮೈಗೂಡಿಸಿಕೊಂಡು ಉತ್ತಮ ಪ್ರಜೆಗಳಾಗಿ ರೂಪುಗೊಳ್ಳುವಂತೆ ಉಪನ್ಯಾಸಕರು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಈ ಸಂದರ್ಭ ಮಾತನಾಡಿದ ಪ್ರಾಂಶುಪಾಲ ಎಸ್. ಎಸ್. ಮಾದಯ್ಯ ಪಿಯುಸಿ ವಯಸ್ಸು ಹರೆಯದ ವಯಸ್ಸು, ಅಲ್ಲದೆ ವಿದ್ಯಾರ್ಥಿಗಳ ಭವಿಷ್ಯವನ್ನೇ ಬದಲಾಯಿಸುವಂತಹ ಕಾಲಘಟ್ಟ. ಆದ್ದರಿಂದ ತಾವೆಲ್ಲರೂ ಉತ್ತಮ ನಡತೆಯ ಜೊತೆಗೆ, ಏಕಾಗ್ರತೆಯನ್ನು ಮೈಗೂಡಿಸಿಕೊಂಡು ವಿದ್ಯಾಭ್ಯಾಸದಲ್ಲಿ ತೊಡಗಿಕೊಂಡು ಜೀವನ ರೂಪಿಸಿಕೊಳ್ಳಬೇಕು. ಕೆಟ್ಟ ಆಲೋಚನೆಗಳು ಹಾಗೂ ದುಶ್ಚಟಗಳಿಂದ ದೂರವಿದ್ದು ಸಾಧನೆ ಮಾಡವ ಮೂಲಕ ಹೆತ್ತವರಿಗೆ ಹಾಗೂ ಕಾಲೇಜಿಗೆ ಕೀರ್ತಿ ತರಬೇಕು ಎಂದರು.