ಕೂಡಿಗೆ, ಜೂ. ೧೪: ಕೂಡಿಗೆ ಗ್ರಾಮ ಪಂಚಾಯಿತಿ ಮಾಸಿಕ ಸಭೆಯು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಟಿ. ಗಿರೀಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಜರುಗಿತು.
ಸಭೆಯಲ್ಲಿ ಪ್ರಮುಖವಾಗಿ ಮಳೆಗಾಲ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವ ಬಗ್ಗೆ, ಮತ್ತು ಶೇಕಡಾ ೨೫ರ ಅನುದಾನದಲ್ಲಿ ಪರಿಶಿಷ್ಟ ಜಾತಿ, ಪಂಗಡದವÀರಿಗೆ ಮನೆಗಳಿಗೆ ಅನುಕೂಲವಾಗುವಂತೆ ಪ್ಲಾಸ್ಟಿಕ್ ಹೊದಿಕೆಯನ್ನು ನೀಡುವ ಬಗ್ಗೆ, ಅಲ್ಲದೆ ಶುಚಿತ್ವಕ್ಕೆ ಹೆಚ್ಚಿನ ಅಧ್ಯತೆ ನೀಡುವುದರ ಜೊತೆಯಲ್ಲಿ ಎಲ್ಲಾ ವಾರ್ಡ್ಗಳಿಗೆ ಸಮರ್ಪಕವಾಗಿ ಕುಡಿಯುವ ನೀರಿನ ಸರಬರಾಜು ಮಾಡುವ ಮೂಲಕ ನೀರಿನ ಸಮಸ್ಯೆಯನ್ನು ಬಗೆಹರಿಸುವ ಬಗ್ಗೆ ಹಾಜರಿದ್ದ ಸದಸ್ಯರು ತಮ್ಮ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.
ಅಧ್ಯಕ್ಷ ಕೆ.ಟಿ. ಗಿರೀಶ್ ಮಾತನಾಡಿ, ಸಭೆಯಲ್ಲಿ ಚರ್ಚೆಗೊಂಡ ವಿಷಯಗಳ ಬಗ್ಗೆ ಸಮಗ್ರವಾದ ವ್ಯವಸ್ಥೆಯನ್ನು ಕೈಗೊಳ್ಳುವ ಮೂಲಕ ಗ್ರಾಮ ಪಂಚಾಯಿತಿ ಅಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ಕೈಗೊಳ್ಳಲಾಗುವುದು.
ಅಲ್ಲದೆ ೧೫ನೇ ಹಣಕಾಸು ಯೋಜನೆಯ ಎಲ್ಲಾ ಕಾಮಗಾರಿಗಳನ್ನು ಪೂರ್ಣ ಗೊಳಿಸಲು ಪ್ರಯತ್ನ, ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕ್ರಮಕ್ಕೆ ಮುಂದಾಗುತ್ತೇವೆ ಎಂದರು. ಅಭಿವೃದ್ಧಿ ಅಧಿಕಾರಿ ಮಂಜುಳಾ ಸಭೆಗೆ ಸರಕಾರದ ಹೊಸ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.
ಉಪಾಧ್ಯಕ್ಷೆ ಜಯಶ್ರೀ, ಸದಸ್ಯ ಟಿ.ಪಿ. ಹಮೀದ್, ಮಂಗಳ, ಮೋಹಿನಿ, ಅರುಣ್ ರಾವ್, ಕೆ.ಎಸ್. ಶಿವಕುಮಾರ್, ಅನಂತ, ವಾಣಿ, ಹೆಚ್.ಎಸ್. ರವಿ, ರತ್ನಮ್ಮ, ಪಲ್ಲವಿ, ಲಕ್ಷಿö್ಮ, ಚಂದ್ರು, ಜಯಶೀಲಾ. ಸೇರಿದಂತೆ ಕಾರ್ಯದರ್ಶಿ ಪುನೀತ್ ಹಾಜರಿದ್ದರು.