ಕೂಡಿಗೆ, ಜೂ. ೧೪: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುದುಗೂರು ಗ್ರಾಮದ ಉಮಾಮಹೇಶ್ವರ ದೇವಾಲಯಕ್ಕೆ ತೆರಳುವ ರಸ್ತೆಯು ಸಂಪೂರ್ಣವಾಗಿ ಹಾಳಾಗಿರುವ ಹಿನ್ನೆಲೆಯಲ್ಲಿ ರಸ್ತೆಗೆ ಡಾಂಬರೀಕರಣ ಮಾಡುವ ಮೂಲಕ ಅಭಿವೃದ್ಧಿಪಡಿಸುವಂತೆ ಹುದುಗೂರು ಗ್ರಾಮಸ್ಥರು ಶಾಸಕ ಡಾ. ಮಂತರ್ ಗೌಡ ಅವರಿಗೆ ಮನವಿಯನ್ನು ನೀಡಿದರು.
ಮನವಿಯನ್ನು ಸ್ವೀಕರಿಸಿದ ಶಾಸಕ ಮಂತರ್ ಗೌಡ ಈ ಸಾಲಿನಲ್ಲಿ ರಸ್ತೆ ಅಭಿವೃದ್ಧಿ ನಿಗಮದ ವತಿಯಿಂದ ಪ್ರಥಮ ಹಂತದಲ್ಲಿ ರೂ. ೫ ಲಕ್ಷಗಳನ್ನು ನೀಡುವುದಾಗಿ ಭರವಸೆ ನೀಡಿದರು.
ಈ ಸಂದರ್ಭ ಉಮಾಮಹೇಶ್ವರ ದೇವಾಲಯ ಸಮಿತಿ ಅಧ್ಯಕ್ಷ ಟಿ.ಎಂ. ಚಾಮಿ, ಕಾರ್ಯದರ್ಶಿ ವಿ.ಎಲ್. ಸುರೇಶ್, ನೀರಾವರಿ ಸಲಹಾ ಸಮಿತಿ ಸದಸ್ಯೆ ಉಮಾ ಪ್ರಭಾಕರ್, ಗ್ರಾಮ ಪಂಚಾಯಿತಿ ಸದಸ್ಯರಾದ ಹೆಚ್.ಎಸ್. ರವಿ, ರತ್ನಮ್ಮ, ಗ್ರಾಮದ ಪ್ರಮುಖರಾದ. ಕಿಶೋರ್, ಐ.ಎಸ್. ಗಣೇಶ್, ನಾಣಯ್ಯ, ಮಂಜುನಾಥ, ಪೂವಯ್ಯ, ಸೇರಿದಂತೆ ವಿವಿಧ ಸಂಘಟನೆಯ ಪ್ರಮುಖರು ಹಾಜರಿದ್ದರು.