ಮಡಿಕೇರಿ, ಜೂ. ೧೪: ಕೊಡಗು ಜಿಲ್ಲಾ ಮರಾಠ ಮರಾಟಿ ಸಮಾಜ ಸೇವಾ ಸಂಘದ ೨೯ನೇ ವಾರ್ಷಿಕ ಮಹಾಸಭೆ, ಸಮಾಜ ಬಾಂಧವರಿಗಾಗಿ ಆಟೋಟ ಸ್ಪರ್ಧೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಸಂಭ್ರಮದಿAದ ನಡೆಯಿತು.

ಮಡಿಕೇರಿ ಸಮೀಪದ ತಾಳತ್ತಮನೆ ಗ್ರಾಮದಲ್ಲಿರುವ ಸಂಘದ ನಿವೇಶನದ ಆವರಣದಲ್ಲಿ ನಡೆದ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಎಂ.ಎA. ಪರಮೇಶ್ವರ ಅವರು ಸಮಾಜ ಬಾಂಧವರ ಪ್ರಗತಿಗೆ ಮತ್ತು ಸಾಮಾಜಿಕ ಚಟುವಟಿಕೆಗಳಿಗಾಗಿ ಸಂಘಕ್ಕೆ ಐದು ಎಕರೆ ಭೂಮಿ ಪಡೆಯಲು ಪ್ರಯತ್ನಿಸಬೇಕು.

ಸಮುದಾಯದ ಮಂದಿಯ ಆರೋಗ್ಯ ಸುಧಾರಣೆಗೆ ಆರೋಗ್ಯ ನಿಧಿ ಸಂಗ್ರಹಿಸಿ ಪ್ರತ್ಯೇಕ ಖಾತೆ ತೆರೆಯಬೇಕು, ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡುವ ಸಲುವಾಗಿ ಮರಾಠ ಮರಾಟಿ ವಿದ್ಯಾಭಿವೃದ್ಧಿ ನಿಧಿ ಖಾತೆಯನ್ನು ಆರಂಭಿಸಬೇಕು, ಸರ್ಕಾರದ ಸಮಿತಿಗಳ ಸಭೆಯಲ್ಲಿ ಸಂಘವನ್ನು ಪ್ರತಿನಿಧಿಸಲು ಸಮಾಜ ಬಾಂಧವರು ಮುಂದೆ ಬರಬೇಕು, ಸರ್ವರು ಸಂಘದ ಅಜೀವ ಸದಸ್ಯತ್ವವನ್ನು ಪಡೆದು ಸಮಾಜದ ಅಭ್ಯುದಯಕ್ಕೆ ಸಹಕಾರ ನೀಡಬೇಕೆಂದು ಕರೆ ನೀಡಿದರು.

ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಬೆಂಗಳೂರಿನ ಐಎಫ್‌ಎಸ್ ಅಧಿಕಾರಿ ಸುಂದರ ನಾಯ್ಕ್ ಅವರು ಸಂಘದ ಏಳಿಗೆಗೆ ಹಾಗೂ ಸಂಘದ ಆಡಳಿತ ಮಂಡಳಿ ನಿರ್ಮಿಸುತ್ತಿರುವ ಕಟ್ಟಡ ಕಾಮಗಾರಿಯನ್ನು ಪೂರ್ಣಗೊಳಿಸಲು ಎಲ್ಲರೂ ಕೈಜೋಡಿಸಬೇಕೆಂದು ಮನವಿ ಮಾಡಿದರು.

ಕರ್ನಾಟಕ ಮರಾಟಿ ಒಕ್ಕೂಟದ ಕುರಿತು ಸಭೆಗೆ ಮಾಹಿತಿ ನೀಡಿದ ಅವರು ಕೊಡಗು ಜಿಲ್ಲೆಯನ್ನು ಪ್ರತಿನಿಧಿಸಲು ಐವರು ಪ್ರತಿನಿಧಿಗಳು ಸಹಕರಿಸಬೇಕೆಂದು ತಿಳಿಸಿದರು.

ಸಂಘದ ಕಟ್ಟಡ ನಿರ್ಮಾಣಕ್ಕೆ ಸರ್ಕಾರದಿಂದ ಅನುದಾನ ಬಿಡುಗಡೆಗೊಳಿಸಲು ಸಂಬAಧಪಟ್ಟ ಇಲಾಖೆಗಳೊಂದಿಗೆ ಸಂಪರ್ಕ ಸಾಧಿಸುವುದಾಗಿ ಭರವಸೆ ನೀಡಿದ ಅವರು, ಕಟ್ಟಡ ಕಾಮಗಾರಿ ಮುಂದುವರಿಸಲು ವೈಯಕ್ತಿಕವಾಗಿ ರೂ. ೫೦ ಸಾವಿರ ದೇಣಿಗೆಯನ್ನು ಘೋಷಿಸಿದರು. ಸಮಾಜದ ಹಿರಿಯರಾದ ದೇವಿ ಪ್ರಸಾದ್ ವಾಮನ ನಾಯ್ಕ್ ಮಾತನಾಡಿ, ಸಮಾಜ ಬಾಂಧವರು ಸಮಾಜದ ಏಳಿಗೆಗೆ ಆಡಳಿತ ಮಂಡಳಿಯೊAದಿಗೆ ಕೈಜೋಡಿಸಬೇಕೆಂದು ಕೋರಿದರು.

ಮುಖ್ಯ ಅತಿಥಿ ಜಿ.ಪಂ. ಮಾಜಿ ಸದಸ್ಯ ಎಂ.ಟಿ. ನಾರಾಯಣ ಅವರು ಸಂಘದ ಆಡಳಿತ ಮಂಡಳಿಗೆ ನಿವೇಶನವನ್ನು ಪಡೆಯುವಲ್ಲಿ ಸಂಘದ ಹಿರಿಯ ಸದಸ್ಯರು ಪಟ್ಟ ಶ್ರಮವನ್ನು ಸ್ಮರಿಸಿದರು.

ಸಭೆಯಲ್ಲಿ ಸಂಘದ ಮಾಜಿ ಅಧ್ಯಕ್ಷ ಚನಿಯಪ್ಪ ನಾಯ್ಕ್ ದೊಡ್ಡತ್ತೂರು, ಉಪಾಧ್ಯಕ್ಷರಾದ ದೇವಕಿ ಜಿ.ಆರ್ ನಾಯಕ್, ಯುವ ವೇದಿಕೆ ಅಧ್ಯಕ್ಷ ಮೋಹನ ಎಂ.ಆರ್. ಕಾನೂರು, ಮಹಿಳಾ ವೇದಿಕೆ ಅಧ್ಯಕ್ಷರಾದ ರತ್ನಮಂಜರಿ ಎಂ.ಆರ್., ಕಟ್ಟಡ ಸಮಿತಿ ಅಧ್ಯಕ್ಷ ಗುರುವಪ್ಪ ಎಂ.ಟಿ. ಚಿಕ್ಕತ್ತೂರು, ಉಪ ಸಮಿತಿ ಅಧ್ಯಕ್ಷರಾದ ವೆಂಕಪ್ಪ ಎಂ.ಎಸ್. ೨ನೇ ಮೊಣ್ಣಂಗೇರಿ, ಧನಂಜಯ ಕುಮಾರ್, ಕುಂಡಾಡು ಹೊನ್ನಪ್ಪ ಹೆಚ್.ಕೆ. ಕರಿಕೆ ಹಾಗೂ ನಿರಲ್ ಕುಮಾರ್ ಕಾನೂರು ಉಪಸ್ಥಿತರಿದ್ದರು.

೨೦೨೪-೨೫ನೇ ಸಾಲಿನ ವಾರ್ಷಿಕ ವರದಿಯನ್ನು ಕಾರ್ಯದರ್ಶಿ ಹೊನ್ನಮ್ಮ ಹಾಗೂ ಲೆಕ್ಕಪತ್ರವನ್ನು ಮೋಹನ್ ಎಂ.ಆರ್. ಮಂಡಿಸಿದರು. ಭಾರತಿ ರಾಮಣ್ಣ ಪ್ರಾರ್ಥಿಸಿ, ನರಸಿಂಹ ಎ.ಎಂ ಸ್ವಾಗತಿಸಿ, ರತ್ನಮಂಜರಿ ನರಸಿಂಹ ವಂದಿಸಿದರು.

೨೦೨೩-೨೪ನೇ ಸಾಲಿನಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ೭ನೇ ತರಗತಿ, ೧೦ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಪ್ರೋತ್ಸಾಹಿಸಲಾಯಿತು.

ವಿವಿಧ ಆಟೋಟ ಸ್ಪರ್ಧೆ ಮತ್ತು ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ೨೯ನೇ ವಾರ್ಷಿಕೋತ್ಸವದ ಪ್ರಯುಕ್ತ ಆಯೋಜಿಸಲಾಗಿದ್ದ ಲಕ್ಕಿಡಿಪ್‌ನ್ನು ಇದೇ ಸಂದರ್ಭ ಡ್ರಾ ಮಾಡಲಾಯಿತು.