ಮುಳ್ಳೂರು, ಜೂ. ೧೨: ಸಮೀಪದ ನಿಡ್ತ ಗ್ರಾ.ಪಂ.ಗೆ ಸೇರಿದ ಮಾದೇಗೋಡು ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕಟ್ಟಡ ನಿರ್ಮಿಸಿ ನಾಲ್ಕು ವರ್ಷದಲ್ಲಿ ಕಟ್ಟಡದ ಗೋಡೆ ಬಿರುಕು ಬಿಟ್ಟಿದ್ದು, ಕಟ್ಟಡದ ಮೇಲ್ಛಾವಣಿಯ ಸಿಮೆಂಟ್ ಪ್ಲಾಸ್ಟರ್ ಬೀಳುತ್ತಿದೆ. ಕಳಪೆ ಗುಣಮಟ್ಟದ ಕಟ್ಟಡ ಕಾಮಗಾರಿ ನಡೆದಿರುವುದರಿಂದ ಕೇವಲ ೪ ವರ್ಷಕ್ಕೆ ಅಂಗನವಾಡಿ ಕಟ್ಟಡ ಶಿಥಿಲಗೊಂಡಿದೆ ಎಂಬ ಆರೋಪ ಕೇಳಿಬಂದಿದೆ. ೨೦೨೧ರಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ರೂ. ೧೩ ಲಕ್ಷ ವೆಚ್ಚದಲ್ಲಿ ಅಂಗನವಾಡಿ ಕಟ್ಟಡವನ್ನು ನಿರ್ಮಿಸಲಾಗಿತ್ತು. ಆದರೆ ಕಳಪೆ ಗುಣಮಟ್ಟದಲ್ಲಿ ಕಾಮಗಾರಿ ನಡೆದ ಹಿನ್ನೆಲೆ ಕಟ್ಟಡದ ಗೋಡೆಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಮಳೆಗಾಲದಲ್ಲಿ ಕಟ್ಟಡದ ಗೋಡೆ ಮತ್ತು ಮೇಲ್ಛಾವÀಣಿ (ಸೀಲಿಂಗ್) ಸೋರುತ್ತದೆ. ಮೂರು ತಿಂಗಳ ಹಿಂದೆ ಕಟ್ಟಡದ ಒಳಗಡೆಯ ಮೇಲ್ಛಾವಣಿಯಿಂದ ಸಿಮೆಂಟ್ ಉದುರಿ ರಾತ್ರಿ ವೇಳೆ ಬಿದ್ದಿದೆ. ಬಾಗಿಲಿನ ಕಟ್ಟಲೆ ಕುಂಬು ಹಿಡಿದಿದ್ದು, ಇದು ಸಹ ಕಳಪೆಯಿಂದ ಕೂಡಿದೆ. ಪ್ರಸ್ತುತ ಸಾಲಿನಲ್ಲಿ ಅಂಗನವಾಡಿ ಕೇಂದ್ರದಲ್ಲಿ ೧೩ ವಿದ್ಯಾರ್ಥಿಗಳಿದ್ದು, ಶಿಕ್ಷಕಿ, ಸಹಾಯಕಿ, ಅಡುಗೆ ಸಿಬ್ಬಂದಿ ಸೇರಿದಂತೆ ೩ ಮಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ಕುರಿತು ಸಂಬAಧಪಟ್ಟ ಗ್ರಾ.ಪಂ. ಸದಸ್ಯರು ಇಲಾಖೆ ಅಧಿಕಾರಿಗಳಿಗೆ ದೂರು ನೀಡಿದ್ದರೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಸ್ಥಳೀಯ ಜನಪ್ರತಿನಿಧಿಗಳು ಆರೋಪಿಸುತ್ತಾರೆ.
ಮೂರು ತಿಂಗಳ ಹಿಂದೆ ಕಟ್ಟಡದ ಒಳಭಾಗದ ಮೇಲ್ಛಾವಣೆಯಿಂದ ಸಿಮೆಂಟ್ ಬಿದ್ದಿದೆ. ರಾತ್ರಿ ಸಮಯದಲ್ಲಿ ಘಟನೆ ನಡೆದಿದ್ದು, (ಮೊದಲ ಪುಟದಿಂದ) ಹಗಲು ಸಮಯದಲ್ಲಾಗಿದ್ದರೆ ಅನಾಹುತವಾಗುತ್ತಿತ್ತು. ಈ ಕುರಿತು ಸಂಬAಧಿಸಿದ ಇಲಾಖೆಯ ಅಧಿಕಾರಿಗಳಿಗೆ ದೂರು ನೀಡಿ ದುರಸ್ತಿಗೊಳಿಸುವಂತೆ ಮನವಿ ಮಾಡಿದ್ದರೂ ಪ್ರಯೋಜನವಾಗುತ್ತಿಲ್ಲ ಎಂದು ಗ್ರಾ.ಪಂ. ಸದಸ್ಯ ಮನು ಅಸಮಾಧಾನ ವ್ಯಕ್ತಪಡಿಸಿದ್ದಾರೆ. - ಭಾಸ್ಕರ್ ಮುಳ್ಳೂರು