ಕೂಡಿಗೆ, ಜೂ. ೧೪: ಆಹಾರ ಸಂಸ್ಕರಣೆ ಮತ್ತು ಜೀವ ವಿಜ್ಞಾನ ಕ್ಷೇತ್ರಗಳಲ್ಲಿ ಜಂಟಿ ಸಂಶೋಧನೆ, ಶೈಕ್ಷಣಿಕ ವಿನಿಮಯ ಮತ್ತು ಸಾಮರ್ಥ್ಯ ವೃದ್ಧಿಗಾಗಿ ತಿರುವಂತನಪುರAನ ಸಿಎಸ್ಐಆರ್ ಮತ್ತು ಕೊಡಗು ವಿಶ್ವವಿದ್ಯಾಲಯದ ನಡುವೆ ಒಪ್ಪಂದವಾಯಿತು.
ಮುಂದಿನ ಪೀಳಿಗೆಯ ಆಹಾರ ಸಂಸ್ಕರಣೆಯು ಸ್ಮಾರ್ಟ್, ಸ್ವಚ್ಛ ಮತ್ತು ಸುಸ್ಥಿರ ಆಹಾರ ವ್ಯವಸ್ಥೆಯತ್ತ ಒಂದು ಹೆಜ್ಜೆಯಾಗಿದೆ ಎಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರ ಅಭಿಪ್ರಾಯ ವ್ಯಕ್ತಪಡಿಸಿದರು.
ತಿರುವನಂತಪುರAನ ಸಿಎಸ್ಐಆರ್-ರಾಷ್ಟಿçÃಯ ಅಂತರಶಿಸ್ತೀಯ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆಯಲ್ಲಿ ಎನ್ಐಐಎಸ್ಟಿಯ ಸುವರ್ಣ ಮಹೋತ್ಸವ ಆಚರಣೆಗಾಗಿ ಆಯೋಜಿಸಿದ್ದ ‘ಮುಂದಿನ ಪೀಳಿಗೆಯ ಆಹಾರ ತಂತ್ರಜ್ಞಾನಗಳು: ಸುಸ್ಥಿರ ನಾಳೆಗಾಗಿ ಸಂಸ್ಕರಣೆ’ ಕುರಿತ ಸಮಾವೇಶವನ್ನು ಉದ್ಘಾಟಿಸಿ ಮಾತ ನಾಡಿದ ಅವರು, ಮುಂದಿನ ಪೀಳಿಗೆಯ ಆಹಾರ ಸಂಸ್ಕರಣೆ ಕೇವಲ ತಾಂತ್ರಿಕತೆ ಗಲ್ಲ ಬದಲಾಗಿ ಚುರುಕಾದ, ಸ್ವಚ್ಛ ಮತ್ತು ಹೆಚ್ಚು ಸುಸ್ಥಿರ ಆಹಾರ ವ್ಯವಸ್ಥೆಯತ್ತ ಒಂದು ಹೆಜ್ಜೆ ಮುಂದೆ ಇರಿಸಿದೆ ಎಂದು ತಿಳಿಸಿದರು.
(ಮೊದಲ ಪುಟದಿಂದ) ಇದೇ ಸಂದರ್ಭದಲ್ಲಿ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಸಿಎಸ್ಐಆರ್-ಕೇಂದ್ರ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ (ಸಿಎಫ್ಟಿಆರ್ಐ) ನಿರ್ದೇಶಕಿ ಶ್ರೀದೇವಿ ಅನ್ನಪೂರ್ಣ ಸಿಂಗ್ ಪೌಷ್ಟಿಕಾಂಶ ಮತ್ತು ಸ್ವಾಸ್ಥö್ಯವನ್ನು ಖಚಿತಪಡಿಸಿಕೊಳ್ಳಲು ಆಹಾರ ಕ್ಷೇತ್ರದ ಸಂಶೋಧನೆಯ ಮಹತ್ವವನ್ನು ಒತ್ತಿ ಹೇಳಿದರು.
ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಪ್ರಾಧಿಕಾರದ ವಿಜ್ಞಾನ ಮತ್ತು ಮಾನದಂಡಗಳು ಮತ್ತು ನಿಯಮಗಳ ಸಲಹೆಗಾರ್ತಿ ಅಲ್ಕಾ ರಾವ್, ದೇಶದಲ್ಲಿ ಸುರಕ್ಷಿತ ಮತ್ತು ನವೀನ ಆಹಾರ ವ್ಯವಸ್ಥೆಗಳನ್ನು ಬೆಂಬಲಿಸುವ ವಿಕಸನಗೊಳ್ಳುತ್ತಿರುವ ನಿಯಂತ್ರಕ ಚೌಕಟ್ಟಿನ ಬಗ್ಗೆ ಮಾತನಾಡಿದರು. ಎನ್ಐಎಸ್ಎಫ್ ನಿರ್ದೇಶಕ ಸಿ. ಆನಂದರಾಮಕೃಷ್ಣನ್ ಅವರು ಮಾತನಾಡಿದರು.
ಈ ಸಮಾವೇಶದಲ್ಲಿ ‘ಆಯುರ್-ಆಹಾರ್ನಲ್ಲಿ ಪ್ರಗತಿಗಳು', ‘ಭಾರತದಲ್ಲಿ ಆಹಾರ ಸುರಕ್ಷತಾ ನಿಯಮಗಳನ್ನು ಜಾರಿಗೊಳಿಸುವಲ್ಲಿ ಇತ್ತೀಚಿನ ಸವಾಲುಗಳು' ಮತ್ತು ‘ಆಹಾರ ಸಂಸ್ಕರಣೆಯಲ್ಲಿ ಇತ್ತೀಚಿನ ಪ್ರಗತಿಗಳು' ಎಂಬ ವಿಷಯಗಳ ಕುರಿತು ಚರ್ಚೆಗಳು ನಡೆದವು.
ಈ ಸಂದರ್ಭದಲ್ಲಿ, ಆಹಾರ ಸಂಸ್ಕರಣೆ ಮತ್ತು ಜೀವ ವಿಜ್ಞಾನ ಕ್ಷೇತ್ರಗಳಲ್ಲಿ ಜಂಟಿ ಸಂಶೋಧನೆ, ಶೈಕ್ಷಣಿಕ ವಿನಿಮಯ ಮತ್ತು ಸಾಮರ್ಥ್ಯ ವೃದ್ಧಿಯನ್ನು ಉತ್ತೇಜಿಸಲು ಸಿಎಸ್ಐಆರ್-ಎನ್ಐಐಎಸ್ಟಿ ಮತ್ತು ಕೊಡಗು ವಿಶ್ವವಿದ್ಯಾಲಯದ ನಡುವೆ ತಿಳುವಳಿಕೆ ಒಪ್ಪಂದ(ಎAಒಯು)ಕ್ಕೆ ಸಹಿ ಹಾಕಲಾಯಿತು. ಎರಡೂ ಸಂಸ್ಥೆಗಳ ಪೂರಕ ಸಾಮರ್ಥ್ಯಗಳನ್ನು ಬಳಸಿಕೊಳ್ಳುವ ಮೂಲಕ ಈ ಒಪ್ಪಂದವನ್ನು ಮಾಡಿಕೊಳ್ಳಲಾಯಿತು.