ಕೂಡಿಗೆ, ಜೂ. ೧೪: ಬಸವಾದಿ ಶರಣರು ತಮ್ಮ ವಚನಗಳ ಮೂಲಕ ಈ ಜಗತ್ತಿಗೆ ಸಾರಿದ ಜೀವನ ಮೌಲ್ಯಗಳು ಸಾರ್ವಕಾಲಿಕ ಶ್ರೇಷ್ಠ ಚಿಂತನೆಗಳು ಮತ್ತು ವಿಶ್ವ ಮೌಲಿಕವಾದ ಸಂದೇಶಗಳು ಎಂದು ಕೊಡಗು ವಿಶ್ವವಿದ್ಯಾಲಯದ ಕನ್ನಡ ಉಪನ್ಯಾಸಕ ಡಾ. ಜಮೀರ್ ಅಹಮದ್ ಅವರು ಅಭಿಪ್ರಾಯಿಸಿದರು.
ಅವರು ತೊರೆನೂರು ವಿರಕ್ತ ಮಠದಲ್ಲಿ ಮಾಸಿಕ ಹುಣ್ಣಿಮೆ ಪೂಜಾ ಕಾರ್ಯಕ್ರಮದ ಅಂಗವಾಗಿ ಜರುಗಿದ ‘ವಚನಗಳಲ್ಲಿ ಜೀವನ ಮೌಲ್ಯ’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದ ಅವರು, ಸಾಮಾನ್ಯ ಜನರ ಜೀವನ ವಿಧಾನವನ್ನು ಪ್ರಧಾನವಾಗಿರಿಸಿಕೊಂಡು ಜನತೆಗೆ ಹತ್ತಿರವಾಗಿ ಅವರ ಸಮಸ್ಯೆಗಳಿಗೆ ಮುಖಾಮುಖಿಯಾಗಿ ಸ್ಪಂದಿಸುವ ಜೀವಗುಣದೊಂದಿಗೆ ಅಂತರAಗದ ಆತ್ಮಸಾಕ್ಷಿಯಾಗಿ ಜನಪರವಾದ ಮತ್ತು ಲೋಕಕಲ್ಯಾಣಕರವಾದ ಚಿಂತನೆಗಳು ಬಸವಾದಿ ಶರಣರ ವಚನಗಳ ಮೂಲಕ ಹೊರಹೊಮ್ಮಿ ಬಂದಿವೆ. ಕಾಯಕ ಮಹತ್ವ, ತ್ರಿವಿಧ ದಾಸೋಹ ಪರಿಕಲ್ಪನೆ, ಸಾಮಾಜಿಕ ಸಮಾನತೆ, ಧಾರ್ಮಿಕ ಸ್ವಾತಂತ್ರ್ಯ, ವಿಚಾರ ಸ್ವಾತಂತ್ರ್ಯ ಹಾಗೂ ವೈಯಕ್ತಿಕ ಸ್ವಾತಂತ್ರö್ಯದಲ್ಲಿ ಸ್ತಿçà ಸಮಾನತೆ, ದಯೆ ಮತ್ತು ಧರ್ಮದ ಪರಿಕಲ್ಪನೆ, ಅಸ್ಪೃಶ್ಯತೆ, ಅನುಭವ, ಕಲ್ಯಾಣ ಸಮಾಜದ ನಿರ್ಮಾಣ ಮೊದಲಾದ ವೈಶಿಷ್ಟö್ಯಪೂರ್ಣ ಜೀವನ ಮೌಲ್ಯ ಪರಿಕಲ್ಪನೆಗಳನ್ನು ಇಡೀ ಮನುಕುಲಕ್ಕೆ ಸಾರಿದ ಗರಿಮೆ ಈ ನಾಡಿನ ಶರಣರಿಗೆ ಸಲ್ಲುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಅರಕಲಗೂಡು ಚಿಲುಮೆ ಮಠದ ಸ್ವಾಮೀಜಿ ಶ್ರೀ ಜಯದೇವ ಸ್ವಾಮಿಗಳು ಆಶೀರ್ವಚನ ನೀಡುತ್ತಾ ಇಂದಿನ ತಲೆಮಾರಿನ ಮಕ್ಕಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರ ಕಲಿಸಿಕೊಡುವ ನಿಟ್ಟಿನಲ್ಲಿ ಇಂತಹ ವಿಶೇಷ ಉಪನ್ಯಾಸ ಕಾರ್ಯಕ್ರಮಗಳು ನಡೆಯಬೇಕು. ದೇಹದ ಪರಿಕಲ್ಪನೆ ಮತ್ತು ಧರ್ಮದ ಪರಿಕಲ್ಪನೆಯನ್ನು ಪ್ರತಿಯೊಬ್ಬರಿಗೂ ಅರಿವಿಗೆ ಬರುವ ಮೂಲಕ ಆಚರಣೆಗೆ ತರಬೇಕೆಂದು ತಿಳಿಸಿದರು.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ವಹಿಸಿದ್ದ ತೊರೆನೂರು ವಿರಕ್ತ ಮಠದ ಪೀಠಾಧ್ಯಕ್ಷರಾದ ಶ್ರೀ ಮಲ್ಲೇಶ ಸ್ವಾಮಿಗಳು ಆಶೀರ್ವಚನ ನೀಡುತ್ತಾ, ಪ್ರತಿ ತಿಂಗಳ ಹುಣ್ಣಿಮೆಯ ದಿನದಂದು ಶರಣರ ವಚನಗಳ ಮೌಲ್ಯಗಳನ್ನು ಸಾರುವಂತಹ ಅರ್ಥಪೂರ್ಣ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಮಠದ ವತಿಯಿಂದ ವಚನಗಳ ಕಿರು ಹೊತ್ತಿಗೆ ಮಾಡಿಸಿ ಮನೆ ಮನೆಗಳಿಗೆ ನೀಡುವ ಮೂಲಕ ವಚನಗಳನ್ನು ಎಲ್ಲರೂ ಓದುವ ಹಾಗೆ ಪ್ರೇರೇಪಿಸುವ ಉದ್ದೇಶವನ್ನು ಹೊಂದಿದೆ ಎಂದು ತಿಳಿಸಿದರು.
ಇದೇ ಸಂದರ್ಭ ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ಕೊಡಗು ಘಟಕದ ಅಧ್ಯಕ್ಷ ಹೆಚ್.ವಿ. ಶಿವಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಸಹಕಾರ ಸಂಘದ ಸದಸ್ಯ ಕೆ.ಎಸ್. ಕೃಷ್ಣೇಗೌಡ, ಸಾಂಬಶಿವಮೂರ್ತಿ, ಉದಯ್ ಕುಮಾರ್, ವಿವಿಧ ಮುಖಂಡರುಗಳು, ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ಮಠದ ಭಕ್ತ ಮಂಡಳಿ ಹಾಗೂ ಅಕ್ಕನ ಬಳಗದವರು ಉಪಸ್ಥಿತರಿದ್ದರು.