ಕುಶಾಲನಗರ, ಜೂ. ೧೫: ಹಾರಂಗಿ ಜಲಾಶಯ ವೀಕ್ಷಣೆಗೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದಾರೆ.

ಅಣೆಕಟ್ಟು ಮುಂಭಾಗ ನದಿ ಸೇತುವೆಯ ಮೇಲೆ ಪ್ರವಾಸಿಗರು ತಮ್ಮ ವಾಹನವನ್ನು ನಿಲ್ಲಿಸಿ ಸೆಲ್ಫಿ ತೆಗೆಯುವ ಮೂಲಕ ಅಪಾಯಕ್ಕೆ ಆಹ್ವಾನ ನೀಡುತ್ತಿರುವ ದೃಶ್ಯ ಗೋಚರಿಸಿದರೂ ಅದನ್ನು ತಡೆಯುವಲ್ಲಿ ಅಣೆಕಟ್ಟು ಭದ್ರತಾ ಸಿಬ್ಬಂದಿಗಳು ವಿಫಲರಾಗಿದ್ದಾರೆ.

ಜಲಾಶಯದಿಂದ ನಾಲ್ಕು ಕ್ರೆಸ್ಟ್ಗೇಟ್‌ಗಳ ಮೂಲಕ ನದಿಗೆ ನೀರು ಹರಿಸಲಾಗಿದ್ದು ಈ ಸುಂದರ ಸೊಬಗನ್ನು ನೋಡುವ ಭರದಲ್ಲಿ ಹೆಚ್ಚಿನ ಪ್ರವಾಸಿಗರು ತಮ್ಮ ವಾಹನವನ್ನು ಸೇತುವೆಯಲ್ಲಿ ನಿಲುಗಡೆ ಮಾಡುವುದರೊಂದಿಗೆ ಆ ಮಾರ್ಗವಾಗಿ ತೆರಳುತ್ತಿದ್ದ ವಾಹನ ಸವಾರರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದಾರೆ. -ಚಂದ್ರಮೋಹನ್