ವೀರಾಜಪೇಟೆ, ಜೂ. ೨೪: ಬೆಂಗಳೂರು ಕೊಡವ ಸಮಾಜಕ್ಕೆ ರಾಜ್ಯ ಸರಕಾರದಿಂದ ಕನಿಷ್ಟ ದರಕ್ಕೆ ೭ ಎಕರೆ ಜಾಗ ಮಂಜೂರು ಮಾಡಿಸುವಲ್ಲಿ ಶ್ರಮಿಸಿದ ಮುಖ್ಯಮಂತ್ರಿ ಕಾನೂನು ಸಲಹೆಗಾರ ಹಾಗೂ ವೀರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರನ್ನು ವೀರಾಜಪೇಟೆ ಭಾಗದ ಕೊಡವ ಸಮುದಾಯದವರು ಹಾಗೂ ಕಾಂಗ್ರೆಸ್ ಮುಖಂಡರು ಸನ್ಮಾನಿಸಿ ಅಭಿನಂದಿಸಿ ಸಂಭ್ರಮಾಚರಣೆ ಮಾಡಿದರು.

ಶಾಸಕರ ಗೃಹಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಪೊನ್ನಣ್ಣ ಅವರನ್ನು ಸನ್ಮಾನಿಸಿ ಸಿಡಿಮದ್ದು ಸಿಡಿಸಿ ಸಂಭ್ರಮಿಸ ಲಾಯಿತು. ಬಳಿಕ ಮಾತನಾಡಿದ ಪೊನ್ನಣ್ಣ ಅವರು, ಹಲವು ದಶಕಗಳ ಬೇಡಿಕೆಯ ಕುರಿತು ಗಮನ ಸೆಳೆದ ಹಿನ್ನೆಲೆ ಸರಕಾರ ಸಕರಾತ್ಮಕವಾಗಿ ಸ್ಪಂದಿಸಿ ಜಾಗ ಮಂಜೂರು ಮಾಡಿದೆ. ಭಾಷೆ, ಸಂಸ್ಕೃತಿ ಉಳಿಸುವ ಕೆಲಸವಾಗಬೇಕು ಎಂದರು.

ಈ ಸಂದರ್ಭ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್, ಗೋಣಿಕೊಪ್ಪ ವಲಯ ಕಾಂಗ್ರೆಸ್ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ, ಪ್ರಮುಖರಾದ ಮೂಕಳೇರ ಕುಶಾಲಪ್ಪ, ಬಿದ್ದಾಟಂಡ ತಮ್ಮಯ್ಯ, ಪೋರೆರ ಬಿದ್ದಪ್ಪ, ಎಂ.ಎಸ್. ಪೂವಯ್ಯ, ಚಿಲ್ಲವಂಡ ಕಾವೇರಪ್ಪ, ಪುರಸಭೆಯ ಅಧ್ಯಕ್ಷೆ ದೇಚಮ್ಮ ಕಾಳಪ್ಪ, ಯುವ ಕಾಂಗ್ರೆಸ್ ಅಧ್ಯಕ್ಷ ಜಮ್ಮಡ ಸೋಮಣ್ಣ, ಪ್ರಮುಖರಾದ ರಕ್ಷಿತ್ ಚೆಂಗಪ್ಪ, ಶೃಂಗಾ, ಕುಂದಚೀರ ಮಂಜು, ಧ್ಯಾನ್ ದೇವಯ್ಯ, ಕಲಿಯಂಡ ಸಂಪನ್ ಅಯ್ಯಪ್ಪ, ಕೊಡವ ಸಮಾಜ ಪ್ರಮುಖರು ಸೇರಿದಂತೆ ಇನ್ನಿತರರು ಹಾಜರಿದ್ದರು.