ಮುಳ್ಳೂರು, ಜೂ. ೨೪: ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನ ಸೇವಾ ಸಮಿತಿ ವತಿಯಿಂದ ಸ್ಥಾಪಿಸಿರುವ ಶ್ರೀ ಮಾರಿಕಾಂಬ ದೇವಿ ದೇವಸ್ಥಾನದ ಪುನರ್ ಪ್ರತಿಷ್ಠಾಪನಾ ಮಹೋತ್ಸವ ಸಂಪನ್ನಗೊAಡಿತು.

ಬುಧವಾರ ಗ್ರಾಮಸ್ಥರಿಂದ ಮತ್ತು ಭಕ್ತರಿಂದ ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ ಪೂಜಾ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು. ನಂತರ ದೇವಸ್ಥಾನದಲ್ಲಿ ದೀಪ ಮಹಾಪೂಜೆ, ಗಣಪತಿ ಪೂಜೆ, ಕಲಶ ಸ್ಥಾಪನೆ, ಪಂಚಗವ್ಯಶುದ್ಧಿ, ಕಂಕಣಧಾರಣೆ, ವಾಸ್ತು ಹೋಮ, ವಾಸ್ತು ಬಲಿ, ಆದಿವಾಸಗಳು ಮುಂತಾದ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದ ಬಳಿಕ ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ನಡೆಯಿತು.

ಗುರುವಾರ ಗಂಗಾ ಪೂಜೆ, ಗೋಪೂಜೆ, ಮಹಿಳೆಯರಿಂದ ಕುಂಭ ಮೆರವಣಿಗೆ ನಂತರ ದೇವಸ್ಥಾನದಲ್ಲಿ ದ್ವಾರಲಕ್ಷಿö್ಮ ಪೂಜೆ, ಕಲಶ ಸ್ಥಾಪನೆ, ದೇವರ ಪ್ರತಿಷ್ಠೆ, ದುರ್ಗಾಹೋಮ, ಕಳಾಹೋಮ, ಮಹಾಪೂರ್ಣಾಹುತಿ, ಕದಳಿ ಛೇದನ, ಮಹಾಬಲಿ, ಅಲಂಕಾರ ಮಹಾಪೂಜೆ ಮುಂತಾದ ಪೂಜಾ ಕಾರ್ಯಗಳನ್ನು ನೆರವೇರಿಸಲಾಯಿತು.

ಮಹಾಮಂಗಳಾರತಿ ಮತ್ತು ಭಕ್ತಾದಿಗಳಿಗೆ ತೀರ್ಥಪ್ರಸಾದ ವಿನಿಯೋಗದೊಂದಿಗೆ ಪೂಜಾ ಮಹೋತ್ಸವ ಕಾರ್ಯವು ಸಂಪನ್ನಗೊAಡಿತು. ಪ್ರತಿಷ್ಠಾಪನಾ ಮಹೋತ್ಸವ ಅಂಗವಾಗಿ ದೇವಸ್ಥಾನ ಸಮಿತಿಯಿಂದ ಭಕ್ತಾದಿಗಳಿಗೆ, ಗ್ರಾಮಸ್ಥರಿಗೆ ಅನ್ನಸಂತರ್ಪಣೆ ನಡೆಯಿತು.

ಶೇಷಾಚಲ ಮತ್ತು ಶಾಂತರಾಜ್ ಅವರ ನೇತೃತ್ವದಲ್ಲಿ ಪೂಜಾ ವಿಧಿವಿಧಾನ ನೆರವೇರಿತು. ಪೂಜಾ ಮಹೋತ್ಸವದಲ್ಲಿ ದೇವಸ್ಥಾನ ಸೇವಾ ಸಮಿತಿ ಪದಾಧಿಕಾರಿಗಳು, ಸದಸ್ಯರು, ಪ್ರಮುಖರು, ಗ್ರಾಮಸ್ಥರು ಪಾಲ್ಗೊಂಡಿದ್ದರು.