ಕೂಡಿಗೆ, ಜೂ. ೨೪: ಗೊಂದಿಬಸವನಹಳ್ಳಿ ಗ್ರಾಮದ ಸಮೀಪದಲ್ಲಿರುವ ರೊಡೆ ಕೆರೆ ಅಭಿವೃದ್ಧಿಗೆ ರೂ. ೨ ಕೋಟಿ ವೆಚ್ಚದ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ಕೆರೆಯ ಸುತ್ತಲೂ ಕಟ್ಟೆಯನ್ನು ಕಟ್ಟುವುದು, ಕೆರೆಯ ಹೂಳು ತೆಗೆದು ಅಭಿವೃದ್ಧಿಪಡಿಸುವ ಯೋಜನೆ ಸಣ್ಣ ನೀರಾವರಿ ಇಲಾಖೆಯ ಮುಖೇನ ಪ್ರಸ್ತಾವನೆಯನ್ನು ಸರಕಾರಕ್ಕೆ ಕಳುಹಿಸಲಾಗಿದೆ.
ಕಳೆದ ವರ್ಷ ಅಧಿಕವಾದ ಮಳೆಯಿಂದಾಗಿ ರೊಡೆ ಕೆರೆಯು ಸಂಪೂರ್ಣವಾಗಿ ಕೆರೆಯ ಏರಿ ಒಡೆದು ಅಪಾರ ಪ್ರಮಾಣದ ನೀರು ತಗ್ಗು ಪ್ರದೇಶದ ಮನೆಗಳಿಗೆ ಮತ್ತು ಜಮೀನಿಗೆ ನೀರು ನುಗ್ಗಿ ನಷ್ಟವಾಗಿತ್ತು. ಈ ವಿಷಯಕ್ಕೆ ಸಂಬAಧಿಸಿದAತೆ ಗ್ರಾಮಸ್ಥರ ಪ್ರಮುಖ ಬೇಡಿಕೆಯ ಮೇರೆಗೆ ಸ್ಧಳಕ್ಕೆ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿ ಕ್ರಿಯಾ ಯೋಜನೆಯನ್ನು ತಯಾರಿಸಿ ಕಳುಹಿಸಲು ಸೂಚನೆ ನೀಡಿದ್ದರು.
ಅದರನ್ವಯ ಸಣ್ಣ ನೀರಾವರಿ ಇಲಾಖೆಯ ಮೂಲಕ ಕ್ರಿಯಾ ಯೋಜನೆ ತಯಾರಿಸಿ ಶಾಸಕ ಡಾ. ಮಂತರ್ ಗೌಡ ಅವರ ಸೂಚನೆಯಂತೆ ರೂ. ೨ ಕೋಟಿ ವೆಚ್ಚದ ಪ್ರಸ್ತಾವನೆಯನ್ನು ಇಲಾಖೆಯ ಮೂಲಕ ಸರಕಾರಕ್ಕೆ ಕಳುಹಿಸಲಾಗಿದೆ ಎಂದು ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಕುಮಾರ್ ಸ್ವಾಮಿ ತಿಳಿಸಿದ್ದಾರೆ.