ಕೂಡಿಗೆ, ಜೂ. ೨೪: ತೊರೆನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಸಾಲಿನ ಅಧ್ಯಕ್ಷರಾಗಿ ಟಿ.ಬಿ. ಜಗದೀಶ್ ಅವಿರೋಧವಾಗಿ ಆಯ್ಕೆಯಾದರು.
ಚುನಾವಣಾ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಒಂದೇ ನಾಮಪತ್ರ ಸಲ್ಲಿಕೆಯಾದ ಹಿನ್ನೆಲೆ ಜಗದೀಶ್ ಅವಿರೋಧವಾಗಿ ಆಯ್ಕೆಯಾದ ಘೋಷಣೆಯನ್ನು ಚುನಾವಣಾ ಅಧಿಕಾರಿ ಸಹಕಾರ ಇಲಾಖೆಯ ಅಧಿಕಾರಿ ಸಧೀಪ್ ಪ್ರಕಟ ಗೊಳಿಸಿದರು. ಈ ಹಿಂದಿನ ಸಾಲಿನ ಅಧ್ಯಕ್ಷ ಸಿ.ಕೆ. ಉದಯಕುಮಾರ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಆಯ್ಕೆ ಪ್ರಕ್ರಿಯೆ ನಡೆಯಿತು.
ನೂತನ ಅಧ್ಯಕ್ಷರ ಆಯ್ಕೆ ಹಿನ್ನಲೆಯಲ್ಲಿ ಸಂಭ್ರಮಾಚರಣೆ ನಡೆಯಿತು. ಈ ಸಂದರ್ಭದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಹಾಜರಿದ್ದು ಅಧ್ಯಕ್ಷರಿಗೆ ಶುಭ ಕೋರಿದರು. ಈ ಸಂದರ್ಭ ಸಂಘದ ಉಪಾಧ್ಯಕ್ಷೆ ಗೌರಮಣಿ, ಕುಶಾಲನಗರ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್, ಕೆ.ಪಿ.ಸಿ.ಸಿ. ಸದಸ್ಯ ನಟೇಶ್ ಗೌಡ, ಕಾಂಗ್ರೆಸ್ ಮುಖಂಡ ನಾಪಂಡ ಮುತ್ತಪ್ಪ, ಲ್ಯಾಂಪ್ಸ್ ಸಹಕಾರ ಸಂಘದ ಅಧ್ಯಕ್ಷ, ಕೂಡಿಗೆ ಗ್ರಾಮ ಪಂಚಾಯಿತಿ ಸದಸ್ಯ ಅರುಣ್ ರಾವ್ ಸೇರಿದಂತೆ ಸಂಘದ ನಿರ್ದೇಶಕರಾದ ಕೆ.ಎಸ್. ಕೃಷ್ಣೇಗೌಡ, ಟಿ.ಎ. ರವಿಚಂದ್ರ, ಟಿ.ಜಿ. ರವಿಕುಮಾರ್, ಹೆಚ್.ಸಿ. ಮೂರ್ತಿ, ಹೇಮ, ಸಿ.ಕೆ. ಉದಯಕುಮಾರ್, ಗ್ರಾ.ಪಂ ಸದಸ್ಯೆ ಸಾವಿತ್ರಿ ಗಿರೀಶ್ ಸೇರಿದಂತೆ ಕಾಂಗ್ರೆಸ್ ಪ್ರಮುಖರಾದ. ಪಿ.ಡಿ. ರವಿ, ಎಸ್.ಎಸ್. ಚಂದ್ರಶೇಖರ್, ತೋಟೇಶ್, ರಮೇಶ್, ಗುಂಡಣ್ಣ, ಟಿ.ಎಸ್. ಚಂದ್ರಶೇಖರ್, ಗಣೇಶ್, ವಸಂತಕುಮಾರ್ ಸೇರಿದಂತೆ ಗ್ರಾಮಸ್ಥರು, ಬೆಂಬಲಿಗರು ಇದ್ದರು.